ರಾಮದುರ್ಗ ತೇರ್ ಬಜಾರ ಅಂಚೆ ಕಚೇರಿ ವಿಲೀನ ವಿರೋಧಿಸಿ ವಿಜಯ ಸೇನಾ ಸಮಿತಿ ವತಿಯಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರ (ಯಾನಮಪೇಟೆ) ದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೌನ್ ಅಂಚೆ ಕಚೇರಿಯನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರು ಹಾಗೂ ವಿಜಯ್ ಸೇನಾ ಸಮಿತಿ ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಗೊಂಡಿದೆ. ಏಪ್ರಿಲ್ 16 ರಂದು ಬೆಳಿಗ್ಗೆಯಿಂದ ರಾಮದುರ್ಗ ಪ್ರಧಾನ ಅಂಚೆ ಕಚೇರಿಯ ಎದುರು ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಿಜಯ ಸೇನಾ ಸಮಿತಿಯ ಮುಖಂಡ ವಿಜಯ…
ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ಜಿಲ್ಲೆಯಲ್ಲಿ…
ಡಾ.ಬಿ.ಆರ್. ಅಂಬೇಡ್ಕರ್ ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ ಕೊಂಗಾಲಿ
ಬೆಳಗಾವಿ ಡಾ.ಬಿ.ಆರ್. ಅಂಬೇಡ್ಕರ್ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ಉಪ ಮಹಾಪೌರರಾದ ಹನುಮಂತ ಕೊಂಗಾಲಿ ಅವರು ನುಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಂಗಳವಾರ (ಏ.14) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ…
ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲೇ ಮೊದಲ ಪ್ರಯೋಗ: ಸುಮಾರು 20 ವರ್ಷಗಳಿಂದ ಎಸ್.ಸಿ/ಎಸ್….
ಪಿಗ್ರಿ ಏಜೆಂಟ್ಗಳ ಕಮೀಷನ್ ಮೇಲೆ ಜಿಎಸ್ಟಿ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು: ಬ್ಯಾಂಕ್ಗಳಲ್ಲಿ ಠೇವಣಿ ಸಂಗ್ರಹಿಸುವ ಪಿಗ್ನಿ ಏಜೆಂಟ್ಗಳು ಬ್ಯಾಂಕಿನ ನೌಕರರಾಗಿದ್ದು, ಅವರಿಗೆ ನೀಡಲಾಗುವ ಸಂಭಾವನೆ ಅಥವಾ ಕಮೀಷನ್ ಮೇಲೆ ಜಿಎಸ್ಟಿ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪಿಗ್ನಿ ಏಜೆಂಟ್ಗಳಿಗೆ ಪಾವತಿಸಿದ ಕಮಿಷನ್ ಮೊತ್ತದ ಮೇಲೆ ಜಿಎಸ್ಟಿ ಪಾವತಿಸುವಂತೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ಗೆ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರು ನೀಡಿದ್ದ ಶೋಕಾಸ್ ನೋಟಿಸ್ಗಳನ್ನು ರದ್ದುಪಡಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಬ್ಯಾಂಕುಗಳು ಈ ಏಜೆಂಟ್ಗಳ ಮೇಲೆ ಸಂಪೂರ್ಣ…
55 ಎಕರೆ ಭೂ ಹಗರಣಕ್ಕೆ ಹೈಕೋರ್ಟ್ ಬ್ರೇಕ್: ಅಸ್ತಿತ್ವದಲ್ಲೇ ಇಲ್ಲದ ‘ಲೇಕ್ ವ್ಯೂ ಟೂರಿಸಂ ಕಾರ್ಪೊರೇಷನ್’ಗೆ ಪರಭಾರೆ ರದ್ದು; ಸಿಬಿಐ ತನಿಖೆಗೆ ಆದೇಶ.
ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಅತ್ಯಂತ ಬೆಲೆಬಾಳುವ 55 ಎಕರೆ ಸರ್ಕಾರಿ ಜಮೀನನ್ನು “ಅಸ್ತಿತ್ವದಲ್ಲೇ ಇಲ್ಲದ” ಖಾಸಗಿ ಸಂಸ್ಥೆಯೊಂದಕ್ಕೆ ಪರಭಾರೆ ಮಾಡಿದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಒಂದು ‘ಹಗರಣ’ ಎಂದು ಬಣ್ಣಿಸಿ, ಆ ಪರಭಾರೆ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಇದರೊಂದಿಗೆ, ಈ ಸಂಪೂರ್ಣ ವ್ಯವಹಾರದ ಹಿಂದೆ ನಡೆದಿರಬಹುದಾದ ಪಿತೂರಿ ಮತ್ತು ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆದೇಶಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಅಮಾನಿ ಕೆರೆ ಗ್ರಾಮಗಳ ವ್ಯಾಪ್ತಿಯಲ್ಲಿನ ಸುಮಾರು…
ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ
ಕಾರವಾರ:- ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಹಿತಿ ಹಕ್ಕು…
ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸುಶೀಲಮ್ಮ ವರ್ಷದ ಹಿಂದೆ ವಿಆರ್ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು…
ಮಹಾಶರಣೆ ಅಕ್ಕ ಮಹಾದೇವಿ ರವರ ಜೀವನವೇ ಶುದ್ಧ ಭಕ್ತಿಗೆ ಉದಾಹರಣೆ :- ಡಾ. ಸಿದ್ಧಣ್ಣ ವಾಲಿಶೆಟ್ಟಿ
ಬೆಳಗಾವಿ, ಲಿಂಗಾಯತ ಸಂಘಟನೆ ವತಿಯಿಂದ ಇಂದು ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ವಚನ ಪಿತಾಮಹ ಡಾ. ಪ.ಗು. ಹಳಕಟ್ಟಿ ಭವನದಲ್ಲಿ “ವೈರಾಗ್ಯ ನಿಧಿ ಅಕ್ಕ ಮಹಾದೇವಿ ಜಯಂತಿ” ಆಚರಣೆ ಅಂಗವಾಗಿ ಅನುಭಾವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಡಾ. ಸಿದ್ಧಣ್ಣ ವಾಲಿಶೆಟ್ಟಿ ಸಹಾಯಕ ಪ್ರಾಧ್ಯಾಪಕರು ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯ ಅವರು ಮಾತನಾಡಿ, 12ನೇ ಶತಮಾನದಲ್ಲಿ ಕರ್ನಾಟಕದಲ್ಲಿ ಹುಟ್ಟಿದ ಮಹಾನ್ ಸ್ತ್ರೀ ಸಂತೆಯಾದ ಅಕ್ಕ ಮಹಾದೇವಿ ಅವರು ಭಕ್ತಿ, ವೈರಾಗ್ಯ ಮತ್ತು ಆತ್ಮಜ್ಞಾನಕ್ಕೆ…
ಎಇಇ ಅಜಯಸಿಂಗ್ ರಜಪೂತ ನಿವಾಸದ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಬೆಳಗಾವಿ : ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಅಜಯಸಿಂಗ್ ಬಾಪುಸಿಂಗ್ ರಜಪೂತ ಅವರ ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಜಪೂತ ಅವರ ಮನೆ, ಕಚೇರಿ ಹಾಗೂ ಬ್ಯಾಂಕ್ ಲಾಕರ್ ಸೇರಿದಂತೆ ಒಟ್ಟು ಏಳು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು…
