BREAKING NEWS

“ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮತ್ತು ವಲಯ ಅರಣ್ಯಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 05-06-2026 ರಂದು ಸರ್ಕಾರಿ ಶಾಸಕರ ಮಾದರಿ ಶಾಲೆ ಗುರ್ಲಹೊಸೂರ, ಸವದತ್ತಿಯಲ್ಲಿ “ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ರಾಮ.ಟಿ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ…

Read More

ನಡುರಸ್ತೆಯಲ್ಲಿ ಹಡೆದವ್ವನ ಬಿಟ್ಟಿದ್ದ ಮಗ : ಕೊನೆಗೂ ಮನೆ ಸೇರಿದ ವೃದ್ಧ ತಾಯಿ.

ಬೆಳಗಾವಿ ಹೆತ್ತ ತಾಯಿಯನ್ನು ನಡು ರಸ್ತೆಯಲ್ಲಿ ಬಿಟ್ಟು ಮಗ ಪರಾರಿಯಾದ ಘಟನೆ ಬೆನ್ನಲ್ಲೇ ಕೊನೆಗೂ ಹಡೆದವ್ವನನ್ನು ಮರಳಿ ಮನೆಗೆ ಕರೆದೊಯ್ಯುವ ಮೂಲಕ ಮಗ ಮಾಡಿದ ತಪ್ಪಿಗೆ ನೋವುಂಡ ಘಟನೆ ನಡೆದಿದೆ. ಹೌದು ಕಳೆದ ಮೂರು ದಿನಗಳ ಹಿಂದೆ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ಹೆತ್ತ ತಸಯಿಯನ್ನು ಬಿಟ್ಟು ಮಗ ಪರಾರಿಯಾಗಿದ್ದ. ಅಲ್ಲೇ ಒಂದು ರಾತ್ರಿ ಕಳೆದ ತಾಯಿ ಮರುದಿನ ಬೆಳಿಗ್ಗೆ ಮಗನ ಕ್ರೌರ್ಯ ಬಿಚ್ಚಿಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವ್ಯಕ್ತಿಯ ಕಾರ್ಯಕ್ಕೆ…

Read More

ಶಾಸಕ ಜಿ. ಎಸ್. ಪಾಟೀಲ್‌ಗೆ ಸಚಿವ ಸ್ಥಾನಕ್ಕಾಗಿ ನಿಡಗುಂದಿಯಲ್ಲಿ ವಿಶಿಷ್ಟ ಹರಕೆ: ಸುಡುಬಿಸಿಲಿನಲ್ಲಿ ‘ದಿಡ ನಮಸ್ಕಾರ’ ಹಾಕಿದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ಡುಮ್ಮಣ್ಣವರ

ಗದಗ ಜಿಲ್ಲೆ ರೋಣ ಮತಕ್ಷೇತ್ರದ ಜನಪ್ರಿಯ ಹಾಗೂ ಹಿರಿಯ ಶಾಸಕರಾದ ಜಿ. ಎಸ್. ಪಾಟೀಲ್ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ, ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ದರ್ಶನ ವೀರಬಸಪ್ಪ ಡುಮ್ಮಣ್ಣವರ ಅವರು ಗ್ರಾಮದಲ್ಲಿ ಸುಡುಬಿಸಿಲನ್ನೂ ಲೆಕ್ಕಿಸದೆ ದಿಡ ನಮಸ್ಕಾರ (ದಂಡ ನಮಸ್ಕಾರ) ಹಾಕುವ ಮೂಲಕ ವಿಶಿಷ್ಟ ಹರಕೆ ಸಲ್ಲಿಸಿದರು. ಗ್ರಾಮದ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರ ದೇವಸ್ಥಾನದಿಂದ ಭೀಮಾಂಬಿಕ ದೇವಸ್ಥಾನದ ವರೆಗೆ ಮಂಗಲ ವಾದ್ಯಗಳು, ಡೊಳ್ಳು…

Read More

ರಾಣಿ ಅಹಲ್ಯಾಬಾಯಿ ಹೋಳ್ಕರ್ ಇವರ 301ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ

ಬೆಳಗಾವಿ: ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ತಮ್ಮ ಹಾಗೂ ಪಾಲಕರ ಕನಸು ನನಸು ಮಾಡಲು ಶ್ರಮವಹಿಸಿ ಅಧ್ಯಯನ ಕೈಗೊಂಡು ಯಶ್ವಸಿಯಾಗ ಬೇಕೆಂದು ಉಪನ್ಯಾಸಕಿ ಶ್ರೀಮತಿ ಮೈತ್ರಾಯಿಣಿ ಗದಿಗೆಪ್ಪಗೌಡರ ಹೇಳಿದರು.ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ಸಂಜೆಕನಕ ಶ್ರೀ ಮಹಿಳಾ ಬಳಗ ಹಾಗೂ ಬೆಳಗಾವಿ ಸಮಸ್ತಕುರುಬರ ಸಂಘಗಳ ವತಿಯಿಂದರಾಷ್ಟ್ರಮಾತೆ ಅಹಲ್ಯಾಬಾಯಿ ಹೋಳ್ಕರ್ ಇವರ 301ನೇ ಜಯಂತಿ ಹಾಗೂ 10 ನೇ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರ ಜರುಗಿತು.ಅಹಲ್ಯಾಬಾಯಿ ಹೊಳ್ಳರ್ ಅವರು ಮಧ್ಯ ಭಾರತದ…

Read More

ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು : ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸ-ರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ವಿಶೇಷವಾಗಿ ಪೂರ್ವಾಭಿಮುಖವಾಗಿ ಸಿದ್ದಪಡಿಸಲಾದ ವೇದಿಕೆಯಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಾಗಿ ಡಾ. ಜಿ.ಪರಮೇಶ್ವರ್ ಅವರು ಡಾ.ಬಿ.ಆ‌ರ್.ಅಂಬೇಡ್ಕರ್ ಅವರ…

Read More

25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾ.ನಗರ ನಗರಸಭೆಯ ಕಂದಾಯ ನಿರೀಕ್ಷಕ ಶಕೀಲ್ ಅಹಮದ್‌, ಕಂದಾಯ ಅಧಿಕಾರಿ ಹೇಮಕುಮಾರ್ ನಿವೇಶನವನ್ನು ಇ ಖಾತೆ ಮಾಡಿಕೊಡಲು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ಪಡೆದುಕೊಳ್ಳುವಾಗ ನೇರವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಲೋಹಿತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಇ ಖಾತೆ ಮಾಡಿಕೊಡಲು ಅಧಿಕಾರಿಗಳಿಗೆ ಮಧ್ಯವರ್ತಿಯಾಗಿದ್ದ…

Read More

ಮುನವಳ್ಳಿಯಲ್ಲಿ ಬಿಟ್ಟು ಹೋದ ವೃದ್ಧೆಯ ರಕ್ಷಣೆಗೆ ಖಡಕ್ ಸೂಚನೆ!

ಬೆಳಗಾವಿ ಜಿಲ್ಲೆಯ ಮುನವಳ್ಳಿಯಲ್ಲಿ ವೃದ್ಧೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ತಕ್ಷಣವೇ ಸ್ಪಂದಿಸಿರುವ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವೃದ್ಧೆಗೆ ಸೂಕ್ತ ಚಿಕಿತ್ಸೆ ಹಾಗೂ ರಕ್ಷಣೆ ನೀಡುವಂತೆ ಖಡಕ್ ನಿರ್ದೇಶನ ನೀಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಮಹಿಳೆಯನ್ನು ನಿರ್ಜನ ಪ್ರದೇಶದಲ್ಲಿ ಕೈಬಿಟ್ಟಿರುವ ಘಟನೆ ತೀವ್ರ ಕಳವಳ ಮೂಡಿಸಿದೆ. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಮತ್ತು ಮಕ್ಕಳ…

Read More

ಪಾಲಕರು ತಮ್ಮ ಮಕ್ಕಳನ್ನು ಶಾಲೆಯ ಪ್ರಾರಂಭದ ದಿನದಿಂದ ಶಾಲೆಗೆ ಕಳುಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಲು ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಕರೆ ನೀಡಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗದಾಳ ಗ್ರಾಮದಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಮಾತನಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಬಿಸಿಊಟ ಇತ್ಯಾದಿ ಸೌಲಭ್ಯಗಳನ್ನು ನೀಡುತ್ತಿದೆ.ಅರ್ಹ ಪ್ರತಿಭಾವಂತ ಶಿಕ್ಷಕರು ಸರಕಾರಿ ಶಾಲೆಯಲ್ಲಿ ಕೆಲಸ ನಿರ್ವಹಿಸುತಿದ್ದುದರಿಂದ , ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ ಪ್ರಯೋಜನ ಪಡೆಯಲು ಕೋರಿದರು. ಸರಸ್ವತಿ ಪೂಜೆ ಹಾಗೂ ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ…

Read More

ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಂಗ್ರಳಿ ಬಿ ಕೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು,

ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ರಂಗೋಲಿ ಹಾಕಿ, ಮಕ್ಕಳನ್ನು ಚಾಕ್ಲೇಟ್, ಹಾಗು ಹೂವು ಕೊಟ್ಟು, ಬಲೂನ್ ಹಾರಿಸಿ, ಆರತಿ ಬೆಳಗಿ,ಸ್ವಾಗತಿಸಲಾಯಿತು ಎಸ್ ಡಿ ಎಂ ಸಿ ಅಧ್ಯಕ್ಷ ರುದ್ರಪ್ಪ ಬಲಕುಂದಿ ಚಾಲನೆ ನೀಡಿದರು ಸಿ ಆರ್ ಪಿ ಗಳಾದ ರಾಜು ಕೋಲಕಾರ ಆಗಮಿಸಿದ್ದರು ನಮಿತಾ ಕಾಂಬಳೆ, ಸಿದರಾಯಿ ಬೆಳಗಾವಿ ರಮೇಶ ವಡರತ್ತಿ ನಾಗಪ್ಪ ಕರಿಕಟ್ಟಿ, ಗಜಾನನ ಕಾಂಬಳೆ ಪಾಲಕರು ಪೋಷಕರು ಶಿಕ್ಷಣ ಪ್ರೇಮಿಗಳು,ಆಗಮಿಸಿದ್ದರು, ಶಾಲಾ ಪ್ರಧಾನ ಗುರುಗಳು ನದಾಫ, ಹಾಗು ಎಲ್ಲ ಸಿಬ್ಬಂದಿ ಮಕ್ಕಳು ಹಾಜರಿದ್ದರು ಇದೇ…

Read More

2026 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಕಾಕತಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ – ಅಕ್ಷರ ದಾಸೋಹ ತಾಲೂಕ ಅಧಿಕಾರಿ ರವಿ ಜವಳೇಕರ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿ ಊಟ, ಪೂರಕ ಪೋಷಣ ಆಹಾರ, ಉಚಿತ ಶೈಕ್ಷಣಿಕ ಪ್ರವಾಸ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ. ಸರ್ಕಾರ ಮಕ್ಕಳ ಪ್ರಗತಿಗಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಶಿಕ್ಷಕರು ಸಹ ಅವೆಲ್ಲವನ್ನು ಮಕ್ಕಳಿಗೆ ತಲುಪಿಸುವಲ್ಲಿ ನಿರಂತರವಾಗಿ ಶ್ರಮವಹಿಸುತ್ತಿದ್ದಾರೆ…

Read More