ಸರ್ಕಾರಿ ಶಾಲೆಗಳನ್ನು ಕಗ್ಗೊಲೆ ಮಾಡುತ್ತಿರುವ ಸರ್ಕಾರ..!
ಒಂದು ಕೆಪಿಎಸ್ ಶಾಲೆಯನ್ನು ಸ್ಥಾಪಿಸುವುದು ಎಂದರೆ, ಅದರ ಸುತ್ತಲ 5 ಕಿ.ಮೀ. ವ್ಯಾಪ್ತಿಯಲ್ಲಿ ಬರುವ 8-10 ಸರಕಾರಿ ಶಾಲೆಗಳನ್ನು ಕೊಂದು ಸಮಾಧಿ ಮಾಡುವುದು ಎಂದೇ ಅರ್ಥ! ಜೊತೆಗೆ ಅಲ್ಲಿನ ಅಂಗನವಾಡಿ ಕೇಂದ್ರಗಳೂ ಶಾಶ್ವತವಾಗಿ ಮುಚ್ಚಲ್ಪಡುತ್ತವೆ. ಇದಕ್ಕೆ 2018-19ರಿಂದ ವರ್ಷವರ್ಷವೂ ಅಲ್ಲಲ್ಲಿ ಪ್ರಾರಂಭವಾಗಿ ಇದುವರೆಗೆ ಕಾರ್ಯನಿರ್ವಹಿಸುತ್ತಿರುವ 308 ಕೆಪಿಎಸ್ ಶಾಲೆಗಳ ಉದಾಹರಣೆಗಳಿವೆ. ಇವುಗಳ ಹುಟ್ಟಿನಿಂದಾಗಿ ಸುತ್ತಲ ಹಳ್ಳಿಗಳ- ಮಕ್ಕಳ ಕೊರತೆ ಇಲ್ಲದಿದ್ದ ಸರಕಾರಿ ಶಾಲೆಗಳು ಕೂಡ ಶಾಶ್ವತವಾಗಿ ಮುಚ್ಚಿಕೊಂಡಿವೆ. ಅಲ್ಲಲ್ಲ-ಬಲವಂತದಿಂದ ಮುಚ್ಚಿಸಿ, ಅಲ್ಲಿಂದ ಮಕ್ಕಳನ್ನು ಈ ಕೇಂದ್ರೀಕೃತ ಕೆಪಿಎಸ್…
ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ-ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ
ವಿಜಯಪುರ ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ ಎಂದುಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರು ತಮ್ಮ ಚಿತ್ರದ ಮೂಲಕ ಸಾಮಾಜಿಕ ಜಾಗೃತಿ ಸಂದೇಶ ಸಾರಿದರು, ಡಾ.ರಾಜಕುಮಾರ್ ಅವರ ಸರಳತೆ,…
ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ
ಬೆಳಗಾವಿ ಡಾ. ರಾಜಕುಮಾರ್ ಅವರ ಸರಳ, ಸಜ್ಜನಿಕೆ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದು, ಜನರೊಂದಿಗಿನ ಸರಳ ಒಡನಾಟದಿಂದಾಗಿ ಅವರು ಇಂದಿಗೂ ಕನ್ನಡಿಗರ ಮನದಲ್ಲಿ ಮರೆಯದೇ ಉಳಿದಂತಹ ಮಹಾನ್ ಚೇತನರಾಗಿದ್ದಾರೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ ಅವರು ಹೇಳಿದರು. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ವಾರ್ತಾ ಭವನದಲ್ಲಿ ಆಯೋಜಿಸಲಾಗಿದ್ದ ವರನಟ ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕುಮಾರ್ ಅವರು ಉತ್ತಮ ನಟ, ಗಾಯಕರಾಗಿದ್ದರು. ಅವರ…
ಅಥಣಿ ಕಲ್ಲು ಗಣಿಗಾರಿಕೆ ವಿರುದ್ಧ ಜಾನುವಾರುಗಳ ಸಮೇತ ಧರಣಿ
ಅಥಣಿ ಕಲ್ಲು ಗಣಿಗಾರಿಕೆಯ ಧೂಳಿನಿಂದ ತೀವ್ರ ತೊಂದರೆಗೀಡಾಗಿರುವ ಗಸ್ತಿ ಕುಟುಂಬ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಬುಧವಾರ ಇಲ್ಲಿನ ಮಿನಿ ವಿಧಾನಸೌಧ ತಹಶೀಲ್ದಾರ್ಕಚೇರಿಯ ಆವರಣದಲ್ಲಿ ಜಾನುವಾರುಗಳ ಸಮೇತ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ತಮ್ಮ ಅಳಲು ತೋಡಿಕೊಂಡ ರಾಮಪ್ಪ ಗಸ್ತಿ ಕಳೆದ ಹತ್ತು ವರ್ಷಗಳಿಂದ ಕಲ್ಲು ಗಣಿಗಾರಿಕೆಯ ಧೂಳಿನಿಂದ ನಮ್ಮ ಕುಟುಂಬ ಹೈರಾಣಾಗಿದೆ, ಕುಟುಂಬದ ಸದಸ್ಯರಿಗೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಗಣಿಗಾರಿಕೆಯಿಂದ ಬರುವ ಧೂಳಿನಿಂದ ನಮ್ಮ ಕುಟುಂಬವನ್ನು ರಕ್ಷಿಸುವಂತೆ…
ಇ-ಸ್ವತ್ತು ಅರ್ಜಿ ಸಲ್ಲಿಕೆ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರಕಾರಿ ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದು, ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ. ತಿಳಿಸಿದ್ದಾರೆ. ಈ ಸಂಬಂಧ…
ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ₹1.70 ಲಕ್ಷ ಲಂಚ ಸ್ವೀಕರಿಸುವಾಗಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಇಸ್ಪೀಟ್ ಮತ್ತು ಬಡ್ಡಿ ದಂಧೆಯ ಪ್ರಕರಣದಿಂದ ಹೆಸರು ಕೈಬಿಡಲು ಹಾಗೂ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೆರೂರು…
ಅತಿಥಿ ಉಪನ್ಯಾಸಕರ ಸೇವೆ ಅನನ್ಯ- ಡಾ ರಾಜು ಕಂಬಾರ
ರಾಮದುರ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಅನನ್ಯವಾದದ್ದಾಗಿದೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘಟನೆಯ ಮುಖಂಡ ಡಾ. ರಾಜು ಕಂಬಾರ ಹೇಳಿದರು.ಪಟ್ಟಣದ ಎಸ್ಐಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅತಿಥಿ ಉಪನ್ಯಾಸಕ ಶಂಕರ ಚುಳುಕಿ ಅವರನ್ನು ಸತ್ಕರಿಸಿ,ಅಭಿನಂದನೆ ಸಲ್ಲಿಸಿ ಮಾತನಾಡಿದ ಕಂಬಾರರು, ರಾಜ್ಯದಲ್ಲಿ ಸುಮಾರು 10000 ಮೇಲ್ಪಟ್ಟು ಅತಿಥಿ ಉಪನ್ಯಾಸಕರು ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಾ, ಉನ್ನತ ಶಿಕ್ಷಣಕ್ಕೆ…
𝟭𝟬𝟬 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ‘ತಿರುಪತಿ ವೆಂಕಟೇಶ್ವರ’ ದೇವಸ್ಥಾನ: 𝗧𝗧𝗗 ಗೆ 𝟳 ಎಕರೆ ಭೂಮಿ ಹಸ್ತಾಂತರ: ಟಿಟಿಡಿ ಸದಸ್ಯ ಎಸ್ ನರೇಶ್ಕುಮಾರ್
ಬೆಳಗಾವಿ ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ. (𝗥𝘀. 𝟭𝟬𝟬 𝗖𝗿𝗼𝗿𝗲) ವೆಚ್ಚದಲ್ಲಿ ಭವ್ಯವಾದ ‘ತಿರುಪತಿ ವೆಂಕಟೇಶ್ವರ ದೇವಸ್ಥಾನ’ ತಲೆ ಎತ್ತಲಿದೆ. ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ತಿರುಮಲ ತಿರುಪತಿ ದೇವಸ್ಥಾನ (𝗧𝗶𝗿𝘂𝗺𝗮𝗹𝗮 𝗧𝗶𝗿𝘂𝗽𝗮𝘁𝗶 𝗗𝗲𝘃𝗮𝘀𝘁𝗵𝗮𝗻𝗮𝗺𝘀 – 𝗧𝗧𝗗) ಆಡಳಿತ ಮಂಡಳಿಗೆ 𝟳 ಎಕರೆ (𝟳 𝗔𝗰𝗿𝗲𝘀) ಭೂಮಿಯನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕರ್ನಾಟಕ ರಾಜ್ಯ ರಡ್ಡಿ ಜನಸಂಘದ ಅಧ್ಯಕ್ಷರಾದ ಲಕ್ಷ್ಮಣ ರೆಡ್ಡಿ…
ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆಡಾ.ರಾಜ್ ಕುಮಾರ ಅಭಿನಯದ ಸಿನಿಮಾ ಗೀತೆಗಳ ಗಾಯನಕ್ಕೆ ಸಾರ್ವಜನಿಕರಿಗೆ ಅವಕಾಶ
ವಿಜಯಪುರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 9ಗಂಟೆಗೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜನೆ ಮಾಡಲಾದ ವರನಟ ಡಾ.ರಾಜಕುಮಾರ್ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅವರ ಚಲನಚಿತ್ರ ಗೀತೆಗಳ ಪ್ರಸ್ತುತಪಡಿಸಲು ಆಸಕ್ತ ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.ವಯಸ್ಸಿನ ಮಿತಿ ಇರುವುದಿಲ್ಲ. ಪ್ರಸ್ತುತಿಯ ಸಮಯದ ಮಿತಿ ಇದೆ. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶವಿದ್ದು,ಆಯೋಜಕರ ನಿರ್ಣಯವೇ ಅಂತಿಮವಾಗಿದ್ದು,ತಮ್ಮ ಹೆಸರು ಮತ್ತು ಪೂರ್ಣ…
“ವಚನ ಸಾಹಿತ್ಯದಲ್ಲಿ ವೈದ್ಯ ವಿಜ್ಞಾನ”
ಡಾ, ಭವ್ಯಾ ಸಂಪಗಾರ, ವಚನ ಸಾಹಿತ್ಯದಲ್ಲಿ ಪರಮ ಜ್ಞಾನಿಗಳಾದ ಶರಣ ಸಂಕುಲವು ವಿವಿಧ ವಿಷಯಗಳ ಬಗ್ಗೆ ಅಂದರೆ ಖಗೋಳ, ಆರೋಗ್ಯ, ಸಾಮಾಜಿಕತೆ, ದಾಂಪತ್ಯ,ಇಂದ್ರಿಯಾತೀತ ಜ್ಞಾನಗಳನ್ನು ನಮಗೆ ತಿಳಿಸಿದ್ದಾರೆ. ಆಧುನಿಕ ಅತ್ಯದ್ಬುತ ಅನ್ವೇಷಣೆಗಳಲ್ಲಿ ಅತ್ಯಂತ ಶ್ರೇಷ್ಠ ಮತ್ತು ಉಪಯುಕ್ತವಾದ ವೈದ್ಯೆ ವಿಜ್ಞಾನದ ಆಳವಾದ ಅಧ್ಯಯನವನ್ನು ಹನ್ನೇರಡನೆ ಶತಮಾನದಲ್ಲಿ ಶರಣರು ಮಾಡಿದ್ದಾರೆ ಎನ್ನಲು ಲಭ್ಯವಾಗಿರುವ ವಚನಗಳೆ ಸಾಕ್ಷಿ ಎಂದರು. ಹಲವಾರು ಶರಣರ ವಚನಗಳನ್ನು ವಿವರಿಸುತ್ತಾ . “ಕಾಯವಿದ್ದು ಕಾಬುದು ವಿಜ್ಞಾನ, ಜೀವವಿದ್ದು ಕಾಬುದು ಸುಜ್ಞಾನ “ ಎಂಬ ವಚನವನ್ನು ವಿವರಿಸುತ್ತಾ…
