BREAKING NEWS

ರಾಮದುರ್ಗ, ರಾಷ್ಟ್ರೀಯ ಲೋಕ ಅದಾಲತದಲ್ಲಿ ಒಟ್ಟು 870 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ಮಾನ್ಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದ ಮೇರೆಗೆ ರಾಮದುರ್ಗ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಕಾರದೊಂದಿಗೆ ರಾಮದುರ್ಗ ನ್ಯಾಯಾಲಯಗಳಲ್ಲಿ ಶನಿವಾರ ದಿನಾಂಕ 14- 3-2026 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿ ಕೊಂಡಿದ್ದು ಒಟ್ಟು 5115 ಬಾಕಿ ಪ್ರಕರಣಗಳಲ್ಲಿ ಈ ದಿನ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1169 ಪ್ರಕರಣಗಳ ಪೈಕಿ 870 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

Read More

ಸವದತ್ತಿ , ರಾಷ್ಟ್ರೀಯ ಲೋಕ ಅದಾಲತದಲ್ಲಿ ಒಟ್ಟು 687 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 14-03-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್‍ ಅದಾಲತ್‍ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 8615 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 2088 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 687 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ, ಪಕ್ಷಗಾರರ ನ್ಯಾಯಾಲಯದ ದೀರ್ಘಾವಧಿಯ ಪ್ರಕ್ರಿಯೆ ಮತ್ತು…

Read More

ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಮಾರ್ಚ್ 2026ರಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು ₹3.07 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ ₹2.78 ಕೋಟಿ ನಗದು, 16.16 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ, 12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸಂಗ್ರಹ ಕಳೆದ ವಾರವೂ ಹುಂಡಿ ಎಣಿಕೆ ನಡೆದಿತ್ತು ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ದಾಖಲೆ ಕಾಣಿಕೆ ಸಂಗ್ರಹ ಎಣಿಕೆ ಪ್ರಕ್ರಿಯೆಯಲ್ಲಿ…

Read More

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಬೆಂಗಳೂರು, ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ…

Read More

ಚನ್ನಮ್ಮನ ಕಿತ್ತೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

ಕುಟುಂಬ ನಿರ್ವಹಣೆಯ ನಡುವೆ ನಿಮಗಾಗಿ ಸಮಯ ಮೀಸಲಿಡಿ ಹಾಗೂ ಸಮಾಜಮುಖಿ ಕಾರ್ಯ ಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಮತ್ತೊಬ್ಬರಿಗೆ ಮಾದರಿಯಾಗಿ ಎಂದು ಮೀನಾಕ್ಷಿ ಸೂಡಿ(ಭಾಂಗಿ) ಹೇಳಿದರು. ಕಿತ್ತೂರು ಪಟ್ಟಣದ ಚೆನ್ನಮ್ಮಾಜಿಸಾಂಸ್ಕೃತಿಕ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಗಣ್ಯರೊಂದಿಗೆ ಉದ್ಘಾಟಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಿತ್ತೂರು ವೀರರಾಣಿಯ ಪುಣ್ಯ ಭೂಮಿ. ಮಹಿಳೆಯರು ಸ್ವಾವಲಂಬಿಯಾಗಲು ರಾಣಿ ಚೆನ್ನಮ್ಮಾಜಿಯ ಜೀವನವೇ ನಮಗೆಲ್ಲ ಸ್ಫೂರ್ತಿ. ಇದನ್ನಾಧರಿಸಿ ಹೆಣ್ಣುಮಕ್ಕಳು ಎಲ್ಲದರಲ್ಲೂ ಮುಂದೆ ಬರಬೇಕು ಎಂದು ಹೇಳಿದರು.ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಿ ಎಲ್ಲ ಮಹಿಳೆಯರಿಗೆ ಅವಕಾಶ ನೀಡಿದ…

Read More

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ. ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. “ಸುಪ್ರೀಂ ಕೋರ್ಟ್ ನ…

Read More

ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್

ಬೆಂಗಳೂರು ಮಾರ್ಚ್ : ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು” ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು. ಕನಕಪುರ ರಸ್ತೆಯಲ್ಲಿರುವ “ಧೀ DHEE” ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ ಶಕ್ತಿ ಉದ್ಘಾಟಿಸಿ ಮಾತನಾಡಿದ ಅವರು, “ಜನರು ತಮ್ಮ ಅಭಿವೃದ್ಧಿ ಬಗ್ಗೆ ನೋಡುತ್ತಿದ್ದಾರೆಯೇ ಹೊರತು, ಪರಿಸರ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದೇ ಇರುವುದು ಬೇಸರದ ಸಂಗತಿ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮಾಲಿನ್ಯ ಮಾಡುವುದನ್ನು ತಡೆಯಬೇಕು” ಎಂದರು.“ಬಿಲ್ಡರ್ ಗಳು ಕೇವಲ…

Read More

ಮಾ.18 ರಿಂದ ಏ.2ರವರಿಗೆ ಜಿಲ್ಲೆಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವ್ಯವಸ್ಥಿತ, ಸುಸೂತ್ರ, ಪಾರದರ್ಶಕ ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

ವಿಜಯಪುರ ಇದೇ ಮಾರ್ಚ್ 18 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಸೂಚನೆ ನೀಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ…

Read More

ಮಹಿಳಾ ದಿನಾಚರಣೆಯ : ಸ್ತ್ರೀ ಪುರುಷರು ಸಮಾನತೆ ಇದೆ ವಾಗ್ದೇವಿತಾಯಿ.

ಬೆಳಗಾವಿ ಸ್ತ್ರೀ ಪುರುಷ ಭೇದಭಾವವಿಲ್ಲ ಶರಣಲಿಂಗಿ ಎಂದರೆ ಪ್ರಾಣಶಕ್ತಿ, ಸೃಷ್ಟಿಯಲ್ಲಿ. ಮನೆ ಎಂದರೆ ಸ್ತ್ರೀ ಇರಬೇಕು ಸಹ ಧಮಿ೯ಣಿ ಎಂದರೆ.ಧಮ೯ಪ್ರಾರಂಭವಾಗುವುದು ಮನಸ್ಸೆ,ಇಬ್ಬರಲ್ಲೂ ಸ್ತ್ರೀ ,ಪುರುಷ,ಇದ್ದಾನೆ.ಅಹಂಕಾರ ಜಾಸ್ತಿ ಆಗಬಾರದು.ಸ್ವಯಂಶಕ್ತಿ ಬೆಳೆಸಿಕೊಂಡು ಸ್ವಾಭಿಮಾನಿಯಾಗಬೇಕು.ಸತಿ ಎಂದರೆ ಸವ೯ ಸಮರ್ಪಣೆ,ತನು,ಮನ ಎಲ್ಲಅಪ೯ಣೆ.ಮಾತೃಶಕ್ತಿ,ವಾತ್ಸಲ್ಯ ಸಹನೆ,ಪ್ರೀತಿ,ತಾಳ್ಮೆ,ಆರೈಕೆ,ಸ್ವಾಂತನ ಗುಣಗಳನ್ನು ತನ್ನ ಜನನದಿಂದಲೇ ಮೈಗೂಡಿಸಿಕೊಂಡು ಬಂದಿದ್ದಾಳೆ. ಸ್ತ್ರೀ ಸಾಗರವಿದಂತೆ,ಪುರುಷ ಅದರಲ್ಲಿನ ಅಲೆ ಇದ್ದಂತೆ.ನಿಮಾ೯ಣ,ನಿವ೯ಹಣೆ,ನಿನಾ೯ಮ ಸ್ತ್ರೀ ಯಿಂದಲೇ.ಎಂದು ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ಮಹಿಳಾ ದಿನಾಚರಣೆಯ ನಿಮಿತ್ಯ ಶರಣೆ…

Read More

ಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಕಾನೂನು ಅರಿವು” ಕಾರ್ಯಕ್ರಮ.

ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಮತ್ತು ಹಲವು ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಪಾಲಕರು ಮತ್ತು ಮಕ್ಕಳಲ್ಲಿ ಕಾನೂನು ಅರಿವಿನ ಅಗತ್ಯತೆ ಇದೆ ಎಂದು ನ್ಯಾಯವಾದಿ ಎಸ್ ಆರ್ ಪಾಟೀಲ್ ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸಹಾಯವಾಣಿ, ಸುರಕ್ಷಿತ…

Read More