ವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುವರ್ಣಸೌಧದ ಆವರಣದಲ್ಲಿರುವ “ವಿಜ್ಞಾನ ವನ”ಕ್ಕೆ ಗುರುವಾರ ಭೇಟಿ ನೀಡಿದರು. ಮಕ್ಕಳು ಹಾಗೂ ಸಾರ್ವಜನಿಕರು ಆಟದೊಂದಿಗೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ವಿವಿಧ ಪರಿಕರಗಳನ್ನು ಅಳವಡಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿಜ್ಞಾನ ವನದಲ್ಲಿ ಸಸಿ ನೆಟ್ಟು ನೀರೆರೆದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ವಿಜ್ಞಾನ ವನದ ವಿಶೇಷತೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಗಣೇಶ…
ಕುಡಿಯುವ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ
ಬೆಳಗಾವಿ, ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನವನ್ನು ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ (ಜು.09) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ…
ಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ(ಜು.9) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ…
ಶ್ವಾಸ ಯೋಗ ಕೇಂದ್ರದಿಂದ ಮಹಾಯೋಗಿ ಐಸ್ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಪ್ರದಾನ
ಬೆಂಗಳೂರು | 5 ಜುಲೈ 2026 — ಮಾನವ ಕಲ್ಯಾಣ, ಉಸಿರಾಟ ಜಾಗೃತಿ, ಮಾನಸಿಕ-ದೈಹಿಕ ಸಹಿಷ್ಣುತೆ ಹಾಗೂ ಯೋಗಪ್ರೇರಿತ ಜೀವನಶೈಲಿಯ ಜಾಗತಿಕ ಪ್ರಸಾರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ, ಶ್ವಾಸ ಯೋಗ ಕೇಂದ್ರವು ವಿಶ್ವಪ್ರಸಿದ್ಧ ಉಸಿರಾಟ ಸಾಧಕ ಮಹಾಯೋಗಿ ಐಸ್ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಅನ್ನು ಪ್ರದಾನ ಮಾಡಿತು. ಈ ಪ್ರತಿಷ್ಠಿತ ಗೌರವ ಸಮಾರಂಭವು ಶ್ವಾಸಗುರುಗಳೆಂದೇ ಖ್ಯಾತರಾದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ…
ಬೆಳಗಾವಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ, : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾಇ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜು.7) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ…
ಕಿತ್ತೂರ ರಸ್ತೆಯ ಬಸವಣಕಟ್ಟೆ ಸೇತುವೆ ಬಳಿ ನವಜಾತ ಶಿಶು ಬಿಟ್ಟು ಹೋದ ಘಟನೆ ನಡೆದಿದೆ !
ಸಮಯಕ್ಕೆ ಸರಿಯಾಗಿ ಶಿಶುವಿನ ಅಳುವಿನ ಶಬ್ದವನ್ನು ಗಮನಿಸಿ ರಕ್ಷಣೆ ಮಾಡಿದ ಕಿತ್ತೂರಿನ ಗ್ರಾಮಸ್ಥರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ನರಗುಂದ ರಸ್ತೆಯ ಬಸವಣಕಟ್ಟೆ ಸೇತುವೆ ಕೆಳಭಾಗದಲ್ಲಿ ನವಜಾತ ಶಿಶು ಬಿಟ್ಟು ಹೋದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಿತ್ತೂರಿನ ಗ್ರಾಮಸ್ಥರು ಬೆಳಗಿನ ವೇಳೆ ಸೇತುವೆ ಸಮೀಪ ತೆರಳಿದ್ದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಅನುಮಾನಗೊಂಡ ಅವರು ಶಬ್ದ ಬಂದ ದಿಕ್ಕಿನಲ್ಲಿ ತೆರಳಿ ಪರಿಶೀಲಿಸಿದಾಗ, ಸೇತುವೆಯ ಕೆಳಭಾಗದಲ್ಲಿ ನವಜಾತ…
ವಿಕಸಿತ ಭಾರತ – ಜಿ ರಾಮ್ ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ :ಇಒ ಮಹಮ್ಮದ್ ಇಜಾನ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕಾ ಮಿಷನ್’ ಯೋಜನೆಯಡಿ ಗ್ರಾಮೀಣ ಭಾಗದ ಶ್ರಮಿಕರಿಗೆ ಮತ್ತಷ್ಟು ಆರ್ಥಿಕ ಭದ್ರತೆ ನೀಡುವ ನಿಟ್ಟಿನಲ್ಲಿ, ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ರಾಮದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹಮ್ಮದ್ ಇಜಾನ ಅವರು ತಿಳಿಸಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಒಟ್ಟು 40887 ಸಕ್ರಿಯ ಕೂಲಿ ಕಾರ್ಮಿಕರಿದ್ದು, ಒಟ್ಟಾರೆ 99.25 ಪ್ರತಿಶತ ekyc ಪ್ರಗತಿ ಸಾಧಿಸಲಾಗಿದ್ದು, ಬಾಕಿ ಉಳಿದ…
ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
ಧಾರವಾಡ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿ ಆದ ಬಗ್ಗೆ ಸರಿಯಾದ ಮಾಹಿತಿ ಪಡೆದು, ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಮಳೆಯ…
ಕಾಗವಾಡ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ತಂದೆಗೆ ₹25000 ದಂಡ ವಿಧಿಸಿದ ನ್ಯಾಯಾಧೀಶರು
ಸಾರ್ವಜನಿಕ ಸುರಕ್ಷತೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪೊಲೀಸರು ಅಳವಡಿಸಿರುವ ಎ.ಎನ್.ಪಿ.ಆರ್ (Automatic Number Plate Recognition Camera – ANPR) ತಂತ್ರಜ್ಞಾನವು ಇಂದು ಕಠಿಣ ಕಾನೂನು ಜಾರಿಗೆ ಪ್ರಬಲ ಅಸ್ತ್ರವಾಗಿ ಪರಿಣಮಿಸಿದೆ. ಇತ್ತೀಚೆಗೆ ನಡೆದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣವೊಂದರಲ್ಲಿ, ಮಾನ್ಯ JMFC ನ್ಯಾಯಾಲಯ ಕಾಗವಾಡ, cc no 579/26 ಇದರಲ್ಲಿ ಸದರಿ ಅಪ್ರಾಪ್ತ ಬಾಲಕನ ತಂದೆಯಾದ ಮಕ್ರಂದ್ ಮಲ್ಲಪ್ಪ ಮಗದುಮ್ ಸಾಕಿನ್ ಮಂಗಸುಳಿ ಈತನು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ…
ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.04) ನಡೆದ ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಮಳೆಗಾಲ ಪ್ರಾರಂಭವಾಗಿದ್ದು, ಶಾಲಾ ಕೊಠಡಿಗಳು…
