ರಾಮದುರ್ಗದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಗುಡ್ಡಗಾಡು ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಾಧ್ಯಾಪಕರೊಂದಿಗೆ ಸಂಭ್ರಮ ಹಂಚಿಕೊಂಡರು.
ಗುಡ್ಡಗಾಡು ( ಕ್ರಾಸ್ ಕಂಟ್ರಿ ) ಪಂದ್ಯಾವಳಿಯಲ್ಲಿ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ರಾಮದುರ್ಗ :ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕಾಗವಾಡದ ಶಿವಾನಂದ ಮಹಾವಿದ್ಯಾಲಯದಲ್ಲಿ ಫೆ. 16 ಮತ್ತು 17ರಂದು ನಡೆದ ಪುರುಷರ ಗುಡ್ಡಗಾಡು( ಕ್ರಾಸ್ ಕಂಟ್ರಿ) ಪಂದ್ಯಾವಳಿಯಲ್ಲಿ ಇಲ್ಲಿಯ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ಕಾಲೇಜಿನ ಬಿಎ 2ನೇ ವರ್ಷದ ವಿದ್ಯಾರ್ಥಿ ಸಂಜೀವ ಫಕೀರಪ್ಪ ಮಜ್ಜಗಿ ಈತನು ಬೆಳಗಾವಿ ರಾಣಿ ಚೆನ್ನಮ್ಮ…
ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾರ್ವಜನಿಕರಿಂದ ಪ್ರಧಾನ ಅಂಚೆ ಕಚೇರಿಗೆ ಮನವಿ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಮುಂದೆ ಇರುವ ವಾಣಿಜ್ಯ ಮಲ್ಲಿಗೆಗಳ ನಂ.5 ರಲ್ಲಿ ಇದ್ದಂತಹ ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾಮಾಜಿಕ ಹೋರಾಟಗಾರರು ರಾಮದುರ್ಗ ಪ್ರಧಾನ ಅಂಚೆ ಕಚೇರಿಗೆ ಮನವಿಯನ್ನು ಸಲ್ಲಿಸಿದರು. ರಾಮದುರ್ಗ ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಂಚೆ ಕಚೇರಿಯನ್ನು ಇವಾಗ ರಾಮದುರ್ಗದ ಹೆಡ್ ಪೋಸ್ಟ ಆಫೀಸಗೆ (ಅಂಚೆ ಕಚೇರಿಯೊಂದಿಗೆ) ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಸ್ತಾವನೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಈ ಅಂಚೆ ಕಚೇರಿಯು ನಮ್ಮ ರಾಮದುರ್ಗ ಪಟ್ಟಣದ ನೂರಾರು…
ಅಡುಗೆ ಸಿಬ್ಬಂದಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯವಾದದ್ದು. ಆದರೆ ಅವರಿಗೆ ಸರಕಾರ ನೀಡುವ ಗೌರವ ಧನ ಮಾತ್ರ ಕಡಿಮೆ ಇದೆ. ಇರುವ ಗೌರವ ಧನದಲ್ಲಿ ಇದೊಂದು ಮಕ್ಕಳ ಸೇವೆ ಎಂದು ತಿಳಿದು ಶ್ರದ್ಧೆಯಿಂದ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಸರಕಾರ ತಮ್ಮ ಗೌರವ ಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ರಾಮದುರ್ಗ ಪಟ್ಟಣದ ವಿದ್ಯಾಚೇತನ ಆವರಣದಲ್ಲಿರುವ ಗುರುಭವನದಲ್ಲಿ ರವಿವಾರ ಅಕ್ಷರದಾಸೋಹ ಇಲಾಖೆಯಿಂದ ಬಿಸಿಯೂಟ ತಯಾರಿಕೆ ಸಿಬ್ಬಂದಿಗಳಿಗಾಗಿ…
ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆಯ ನಿಮಿತ್ಯ ಕರಡಿ ಮಜಲು ಪ್ರದರ್ಶನ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆಯ ನಿಮಿತ್ಯ ಕರಡಿ ಮಜಲನ್ನು ನಾಗಪ್ಪ ಯಲ್ಲಪ್ಪ ರಕ್ಷಿ ಗುರುಗಳು ಹಾಗೂ ಅವರ ತಂಡದವರು ಜಾತ್ರೆಯಲ್ಲಿ ಪ್ರದರ್ಶಿಸಿದರು. ಕರಡಿ ಮಜಲು ಉತ್ತರ ಕರ್ನಾಟಕದ ಜನಪ್ರಿಯ ಜಾನಪದ ಕಲೆಯಾಗಿದ್ದು, ಕರಡಿ ವಾದ್ಯ, ಡೊಳ್ಳು, ತಾಳ ಮತ್ತು ಸನಾದಿ ಬಳಸಿ ಪ್ರದರ್ಶಿಸಲಾಗುವ ಲವಲವಿಕೆಯ ವಾದ್ಯ ನೃತ್ಯವಾಗಿದೆ. ವಾದ್ಯಗಳು: ಕರಡಿ (ಕರಡಿ ಗುಡುಗಿನಂತಿರುವ ವಾದ್ಯ), ಡೊಳ್ಳು, ತಾಳ, ಮತ್ತು ಸನಾದಿ ಮುಖ್ಯವಾದ್ಯಗಳು, ಪ್ರದರ್ಶನ ಶೈಲಿ: ಕಲಾವಿದರು ಲಯಬದ್ಧವಾಗಿ ಕುಣಿಯುತ್ತಾ,…
ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆಯು ಅತ್ಯಂತ ಪುರಾತನ ಮತ್ತು ಪ್ರಸಿದ್ಧವಾಗಿದೆ. ಈ ಜಾತ್ರೆಯು ಸಾಮಾನ್ಯವಾಗಿ ಹಬ್ಬದ ವಾತಾವರಣದಲ್ಲಿ, ಪಲ್ಲಕ್ಕಿ ಉತ್ಸವ ಮತ್ತು ಕರಡಿ ಮಜಲಿನೊಂದಿಗೆ ರಥೋಸ್ತವ ವಿಜೃಂಭಣೆಯಿಂದ ಜರಗಿತು .
ಬೆಳಗಾವಿ ಜಿಲ್ಲೆಯಲ್ಲಿ ಸಿಲಿಂಡರ್, ಇಂಧನ ಕೊರತೆ ಇಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿಕೊಂಡರು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆ ಹಾಗೂ ನಗರದಲ್ಲಿ ಯಾವುದೇ ರೀತಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ.ಬಂಕ್ ಗಳಲ್ಲಿ ಸ್ಟಾಕ್ ಖಾಲಿಯಾದರೆ ನಗರದಲ್ಲಿ ಕೇವಲ ಐದು ಗಂಟೆಗಳಲ್ಲಿ ಸ್ಟಾಕ್ ಲಭ್ಯವಾಗಲಿದೆ.ಇಂಧನ ಕೊರತೆ ವದಂತಿಗೆ ಕಿವಿಗೊಡಬಾರದು. ಇಂಧನ ಪೂರೈಕೆ ಕಂಪೆನಿ ಹಾಗೂ ಬಂಕ್ಮಾಲೀಕರ ಜತೆ ಈಗಾಗಲೇ ಚರ್ಚೆ…
ಜಕ್ಕಲಿ ಗ್ರಾಮದ ದಲಿತ ಯುವಕರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಆಕ್ರೋಶ
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಜಕ್ಕಲಿ ಗ್ರಾಮದ ಹತ್ತಿರ ದಲಿತ ಸಮುದಾಯದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರೋಣ ಪೋಲಿಸ್ ಠಾಣೆಯಲ್ಲಿ ಎಲ್ಲಾ ದಲಿತ ಮುಖಂಡರು ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ಖಂಡಿಸಿ ದಲಿತ ಮುಖಂಡರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು ಈ ಕುರಿತು…
ಲಿಂಗಾಯತ ಸಂಘಟನೆ ವತಿಯಿಂದ ಮಹಾಪೌರ ಮತ್ತು ಉಪ ಮಹಾಪೌರರಿಗೆ ಸನ್ಮಾನ –
ಕಾಯಕವೇ ಕೈಲಾಸ ತತ್ವದಂತೆ ಬೆಳಗಾವಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ – ಮಹಾಪೌರ ಪ್ರೀತಿ ಕಾಮಕರ ಸರ್ವರ ಆಶಯದಂತೆ ಜಾತಿ, ಭಾಷೆ, ಧರ್ಮ, ಭೇದಭಾವ ತೊರೆದು ಬಸವಣ್ಣವರ ಕಾಯಕ ತತ್ವದಡಿಯಲ್ಲಿ ಬೆಳಗಾವಿಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವೆ. ಮೊದಲ ಬಾರಿ ಪಾಲಿಕೆ ಸದಸ್ಯೆಯಾಗಿ ಆಯ್ಕೆಯಾಗುವದರ ಜೊತೆಗೆ ಮೊದಲ ಪ್ರಯತ್ನದಲ್ಲಿ ಅತ್ಯಂತ ಜವಾಬ್ದಾರಿಯುತ ಮಹಾಪೌರ ಹುದ್ದೆ ನೀಡಿದ್ದು ಜವಾಬ್ದಾರಿಗೆ ತಕ್ಕಂತೆ ಸರ್ವರ ಸಹಾಯ,ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವೆ ಎಂದು ನೂತನವಾಗಿ ಮಹಾಪೌರರಾಗಿ ಆಯ್ಕೆಯಾದ ಪ್ರೀತಿ ಕಾಮಕರ ರವಿವಾರ ದಿ.22 ರಂದು ಬೆಳಗಾವಿಯ…
ಸರ್ಕಾರಿ ಜಾಗ ಕಬಳಿಕೆ ವಿರುದ್ಧ ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಕಾನೂನು ಹೋರಾಟ
ಬೆಂಗಳೂರು ಕೊತ್ತನೂರು ಗ್ರಾಮದ ಆರ್ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಕಬಳಿಕೆ ಮಾಡುತ್ತಿರುವುದನ್ನು ಸರಕಾರ ತಕ್ಷಣ ತಡೆಯಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಆಗ್ರಹಿಸಿದೆ.ಪಾರ್ಕ್ ಗೆ ಸೇರಿದ ಜಾಗವನ್ನು ಕೆಲವು ವ್ಯಕ್ತಿಗಳು ಆಕ್ರಮವಾಗಿ ಕಬಳಿಕೆ ಮಾಡಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ. ಇದಕ್ಕೆ ಅನಧಿಕೃತವಾಗಿ ಜಿಬಿಎಯಿಂದ ಖಾತೆಯನ್ನು ಸಹ ಸೃಷ್ಟಿಸಿದ್ದಾರೆ. ಇದು ಸಾರ್ವಜನಿಕ ಆಸ್ತಿ ಎಂಬುದು ಸಾರ್ವಜನಿಕರಿಗೆ ಚೆನ್ನಾಗಿ ತಿಳಿದಿದ್ದು, ಕೆಲವು ಪ್ರಭಾವಿ ರಾಜಕೀಯ…
ರಾಮದುರ್ಗ ಸರಸ್ವತಿ ನಗರದಲ್ಲಿ ಚರಂಡಿ ನೀರು ರಸ್ತೆಯ ಮೇಲೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂ ಎಲ್ ಬಿಸಿ ಹೋಗುವ ಸರಸ್ವತಿ ನಗರದಲ್ಲಿಚರಂಡಿ ಬ್ಲಾಕ್ ಆಗಿ ರಸ್ತೆಯ ಮೇಲೆ ನೀರು ಹರಿಯುವುದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುವ ಗಂಭೀರ ಸಮಸ್ಯೆಯಾಗಿದೆ. ಇದು ಕೇವಲ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ, ದುರ್ವಾಸನೆ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗಬಹುದು. ನಿಂತ ಕೊಳಚೆ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಹರಡಬಹುದು. ಚರಂಡಿ ನೀರು ರಸ್ತೆಯ ಮೇಲೆ ನಿಲ್ಲುವುದರಿಂದ ಪಾದಚಾರಿಗಳು ಸಂಚರಿಸಲು ಹರಸಾಹಸ ಪಡಬೇಕಾಗುತ್ತದೆ. ಬ್ಲಾಕ್ ಆದ ಚರಂಡಿಯಿಂದ ಬರುವ…
