ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ ನೇತೃತ್ವದಲ್ಲಿ ಕಳೆದುಹೋದ ಮೊಬೈಲನ್ನು ಮಾಲೀಕರಿಗೆ ಹಿಂತಿರುಗಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಮದುರ್ಗ ಪೊಲೀಸ್ ಠಾಣೆ ಆವರಣಗಳಲ್ಲಿ ಡಿವೈಎಸ್ಪಿ ಚಿದಂಬರ ಮಡಿವಾಳರ ನೇತೃತ್ವದಲ್ಲಿ CEIR ಪೋರ್ಟಲ್ ಬಳಸಿ, ಸಾರ್ವಜನಿಕರು ಕಳೆದುಕೊಂಡಿದ್ದ ವಿವಿಧ ಕಂಪನಿಗಳ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಿ, ಅವುಗಳ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ತಂತ್ರಜ್ಞಾನದ ನೆರವಿನಿಂದ ಈ ಮೊಬೈಲ್ಗಳನ್ನು ತಾಂತ್ರಿಕವಾಗಿ ಟ್ರ್ಯಾಕ್ ಮಾಡಿ, ಮರಳಿ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.CEIR ಪೋರ್ಟಲ್ ಈಗ ಅಟೋ ಜನರೇಟಾಗಿ ನಮಗೆ ಈ ಮೊಬೈಲ್ ಒಳಗೆ ಇಂತಹ ನಂಬರ್ ಇದೆ ಎಂದು ತೋರಿಸುತ್ತದೆ . ಈ ಮೊಬೈಲ್ ಕಳ್ಳತನ ಮಾಡಿದವರು ಯಾರಿಗೋ…
ದೀಪಕ ಬಿಳ್ಳೂರ ಇವರಿಗೆ “ಸಾಹಿತ್ಯ ಸೇವಾ ಭಾರ್ಗವ ಪ್ರಶಸ್ತಿ” ಹಾಗೂ “ಆದಿ ಗುರು ಶ್ರೀ ಶಂಕರ ಅನುಗ್ರಹ ಪುರಸ್ಕಾರ”
ದಿನಾಂಕ ೨೬-೦೪-೨೦೨೬ ರಂದು ೪೧೨ ನೇ ಶಂಕರ ತತ್ವ ಮಾಸಿಕ ಚಿಂತನ ಸಂಭ್ರಮದಲ್ಲಿ “ಸಂಗೀತ ಭಾರತಿ” ಆದಿ ಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು- ಹೊಸಪೇಟೆ, ಇವರಿಂದ ಕೊಡ ಮಾಡುವ ರಾಷ್ಟ್ರೀಯ ಮಟ್ಟದ ಸಾಹಿತ್ಯ ಸೇವಾ ಭಾರ್ಗವ ಪ್ರಶಸ್ತಿ-೨೦೨೬ ಹಾಗೂ ರಾಜ್ಯಮಟ್ಟದ ಆದಿ ಗುರು ಶ್ರೀ ಶಂಕರ ಅನುಗ್ರಹ ಪುರಸ್ಕಾರ-೨೦೨೬ ಪ್ರಶಸ್ತಿಗಳನ್ನು ಹೊಸಪೇಟೆಯ ಕವಿ ಸಾಹಿತಿಯಾದ ದೀಪಕ ಬಿಳ್ಳೂರ ಅವರಿಗೆ ನೀಡಿ ಗೌರವಿಸಲಾಗಿದೆ, ದೀಪಕ ಬಿಳ್ಳೂರ ಅವರ ಸೃಜನಶೀಲ ಸಾಹಿತ್ಯ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಸೇವೆಯನ್ನು ಗುರುತಿಸಿ…
ಕನ್ನಡ ಭವನದಲ್ಲಿ ಜರುಗಿದ ಗಜಲ್ ಗೋಷ್ಠಿ ಕಾರ್ಯಕ್ರಮ
ಬೆಳಗಾವಿ : ಅರಬ್ಬೀ ಮತ್ತು ಪಾರ್ಷಿ ಭಾಷೆಯಿಂದ ಹುಟ್ಟಿದ ಗಜಲ್ ಸಾಹಿತ್ಯವು ಭಾರತಿಯರ ಹೃದಯವನ್ನು ಗೆದ್ದಿದೆ. ಉರ್ದು ಮತ್ತು ಹಿಂದಿ ಗಜಲ್ ಪ್ರಭಾವದಿಂದ ಕನ್ನಡದಲ್ಲಿಯೂ ಗಜಲ್ ಕಂಪು ಹರಡಿದ್ದು ಅನೇಕ ಹಿರಿ ಕಿರಿಯ ಕವಿಗಳು ಗಜಲ್ ಕಾವ್ಯವನ್ನು ಶ್ರೀಮಂತಗೊಳಿಸುವಲ್ಲಿ ಶ್ರಮಿಸಿದ್ದಾರೆ ಎಂದು ಗಜಲ್ ಕವಿ ಈಶ್ವರ ಮಮದಾಪೂರ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ದಿ ಸಂಘದವತಿಯಿಂದ ಸ್ಥಳೀಯ ಕನ್ನಡ ಭವನದಲ್ಲಿ ಜರುಗಿದ ಗಜಲ್ ಗೋಷ್ಠಿ ಕಾರ್ಯಕ್ರಮದಲ್ಲಿ ಭಗವಹಿಸಿ ಮಾತನಾಡುತ್ತಿದ್ದರು.ಪ್ರೀತಿ…
ಇನಾಂಗೋವನಕೊಪ್ಪ ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾಯಾಧೀಶರು ಶ್ರೀ ಸಿದ್ಧರಾಮ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಇನಾಂಗೋವನಕೊಪ್ಪ ಗ್ರಾಮದಲ್ಲಿ ಶ್ರೀ ದ್ಯಾಮ್ಮವ್ವ ದೇವಿ ಜಾತ್ರೆಯ ನಿಮಿತ್ಯ ಸವದತ್ತಿ ತಾಲೂಕಾ ಕಾನುನು ಸೇವೆಗಳ ಸಮೀತಿ ಸವದತ್ತಿ & ವಕೀಲರ ಸಂಘ ಸವದತ್ತಿ & ಶ್ರೀ ದ್ಯಾಮ್ಮವ್ವ ದೇವಿ ಜೀರ್ಣೋದ್ದಾರ ಟ್ರಸ್ಟ್ ಕಮೀಟಿ ಇನಾಂಗೋವನಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಟಿಎಲ್ಎಸ್ ಸಿ ಸವದತ್ತಿ ಶ್ರೀ ಸಿದ್ಧರಾಮ ಅವರು ಜ್ಯೋತಿ…
ಹೈನುಗಾರಿಕೆ ಉತ್ತೇಜನೆಗೆ ಸರಕಾರ ಸದಾ ಬದ್ಧ: ಸಚಿವ ಕೆ. ವೆಂಕಟೇಶ್
ಬೆಳಗಾವಿ,ಗ್ರಾಮೀಣ ಭಾಗದಲ್ಲಿ ಜನರು ಹಸುಗಳನ್ನು ಸಾಕುವುದ ಮೂಲಕ ಹೈನುಗಾರಿಕೆಯನ್ನು ಕುಲ ಕಸುಬಾಗಿ ಮಾಡಿಕೊಂಡಿದ್ದು, ಸರಕಾರದ ವತಿಯಿಂದ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆ ನಿಮಿತ್ಯ ಏ.25 ನಗರದ…
ಸರ್ಕಾರಿ ಶಾಲೆಗಳನ್ನು ಕಗ್ಗೊಲೆ ಮಾಡುತ್ತಿರುವ ಸರ್ಕಾರ..!
ಒಂದು ಕೆಪಿಎಸ್ ಶಾಲೆಯನ್ನು ಸ್ಥಾಪಿಸುವುದು ಎಂದರೆ, ಅದರ ಸುತ್ತಲ 5 ಕಿ.ಮೀ. ವ್ಯಾಪ್ತಿಯಲ್ಲಿ ಬರುವ 8-10 ಸರಕಾರಿ ಶಾಲೆಗಳನ್ನು ಕೊಂದು ಸಮಾಧಿ ಮಾಡುವುದು ಎಂದೇ ಅರ್ಥ! ಜೊತೆಗೆ ಅಲ್ಲಿನ ಅಂಗನವಾಡಿ ಕೇಂದ್ರಗಳೂ ಶಾಶ್ವತವಾಗಿ ಮುಚ್ಚಲ್ಪಡುತ್ತವೆ. ಇದಕ್ಕೆ 2018-19ರಿಂದ ವರ್ಷವರ್ಷವೂ ಅಲ್ಲಲ್ಲಿ ಪ್ರಾರಂಭವಾಗಿ ಇದುವರೆಗೆ ಕಾರ್ಯನಿರ್ವಹಿಸುತ್ತಿರುವ 308 ಕೆಪಿಎಸ್ ಶಾಲೆಗಳ ಉದಾಹರಣೆಗಳಿವೆ. ಇವುಗಳ ಹುಟ್ಟಿನಿಂದಾಗಿ ಸುತ್ತಲ ಹಳ್ಳಿಗಳ- ಮಕ್ಕಳ ಕೊರತೆ ಇಲ್ಲದಿದ್ದ ಸರಕಾರಿ ಶಾಲೆಗಳು ಕೂಡ ಶಾಶ್ವತವಾಗಿ ಮುಚ್ಚಿಕೊಂಡಿವೆ. ಅಲ್ಲಲ್ಲ-ಬಲವಂತದಿಂದ ಮುಚ್ಚಿಸಿ, ಅಲ್ಲಿಂದ ಮಕ್ಕಳನ್ನು ಈ ಕೇಂದ್ರೀಕೃತ ಕೆಪಿಎಸ್…
ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ-ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ
ವಿಜಯಪುರ ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ ಎಂದುಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರು ತಮ್ಮ ಚಿತ್ರದ ಮೂಲಕ ಸಾಮಾಜಿಕ ಜಾಗೃತಿ ಸಂದೇಶ ಸಾರಿದರು, ಡಾ.ರಾಜಕುಮಾರ್ ಅವರ ಸರಳತೆ,…
ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ
ಬೆಳಗಾವಿ ಡಾ. ರಾಜಕುಮಾರ್ ಅವರ ಸರಳ, ಸಜ್ಜನಿಕೆ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದು, ಜನರೊಂದಿಗಿನ ಸರಳ ಒಡನಾಟದಿಂದಾಗಿ ಅವರು ಇಂದಿಗೂ ಕನ್ನಡಿಗರ ಮನದಲ್ಲಿ ಮರೆಯದೇ ಉಳಿದಂತಹ ಮಹಾನ್ ಚೇತನರಾಗಿದ್ದಾರೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ ಅವರು ಹೇಳಿದರು. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ವಾರ್ತಾ ಭವನದಲ್ಲಿ ಆಯೋಜಿಸಲಾಗಿದ್ದ ವರನಟ ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕುಮಾರ್ ಅವರು ಉತ್ತಮ ನಟ, ಗಾಯಕರಾಗಿದ್ದರು. ಅವರ…
ಅಥಣಿ ಕಲ್ಲು ಗಣಿಗಾರಿಕೆ ವಿರುದ್ಧ ಜಾನುವಾರುಗಳ ಸಮೇತ ಧರಣಿ
ಅಥಣಿ ಕಲ್ಲು ಗಣಿಗಾರಿಕೆಯ ಧೂಳಿನಿಂದ ತೀವ್ರ ತೊಂದರೆಗೀಡಾಗಿರುವ ಗಸ್ತಿ ಕುಟುಂಬ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಬುಧವಾರ ಇಲ್ಲಿನ ಮಿನಿ ವಿಧಾನಸೌಧ ತಹಶೀಲ್ದಾರ್ಕಚೇರಿಯ ಆವರಣದಲ್ಲಿ ಜಾನುವಾರುಗಳ ಸಮೇತ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ತಮ್ಮ ಅಳಲು ತೋಡಿಕೊಂಡ ರಾಮಪ್ಪ ಗಸ್ತಿ ಕಳೆದ ಹತ್ತು ವರ್ಷಗಳಿಂದ ಕಲ್ಲು ಗಣಿಗಾರಿಕೆಯ ಧೂಳಿನಿಂದ ನಮ್ಮ ಕುಟುಂಬ ಹೈರಾಣಾಗಿದೆ, ಕುಟುಂಬದ ಸದಸ್ಯರಿಗೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಗಣಿಗಾರಿಕೆಯಿಂದ ಬರುವ ಧೂಳಿನಿಂದ ನಮ್ಮ ಕುಟುಂಬವನ್ನು ರಕ್ಷಿಸುವಂತೆ…
ಇ-ಸ್ವತ್ತು ಅರ್ಜಿ ಸಲ್ಲಿಕೆ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರಕಾರಿ ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದು, ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ. ತಿಳಿಸಿದ್ದಾರೆ. ಈ ಸಂಬಂಧ…
