ರಾಮದುರ್ಗದಲ್ಲಿ ಶಾಂತಿಯಿಂದ ಈದ್ ಮಿಲಾದ್ ಆಚರಿಸಿ : ಸಿಪಿಐ ವಿನಾಯಕ್ ಬಡಿಗೇರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಅವರಣದಲ್ಲಿ ಶನಿವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಸಮಾಜದ ಮುಖಂಡರ ಸಮ್ಮುಖದಲ್ಲಿ ಜರುಗಿದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆಯನ್ನು ಸಿಪಿಐ ವಿನಾಯಕ್ ಬಡಿಗೇರ್ ವಹಿಸಿ ಅವರು ಮಾತನಾಡಿದರು. ಪ್ರವಾದಿ ಮಹಮ್ಮದ ಅವರ ಸಂದೇಶ ಸಾರಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗುವ ಧಾರ್ಮಿಕ ಮೆರವಣಿಗೆಯನ್ನು ಅರ್ಥಪೂರ್ಣವಾಗಿ ನೆರವೇರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವನ್ನು ಕಲ್ಪಿಸದೇ ಈದ್ ಮಿಲಾದ್ ಹಬ್ಬವನ್ನು ಪ್ರತಿಯೊಬ್ಬರೂ ಶಾಂತ ರೀತಿಯಿಂದ ಸೌಹಾರ್ದಯುತವಾಗಿ ಆಚರಣೆ ಮಾಡಬೇಕು.ಹಬ್ಬಗಳನ್ನು ಶಾಂತಿಯಿಂದ…
₹8.04 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಹೊಸ ರೂಪ-ರೋಬೋಟಿಕ್ ಮತ್ತು ಭಾಷಾ ಪ್ರಯೋಗಾಲಯ ಉದ್ಘಾಟನೆ
ಬೆಳಗಾವಿ ನಗರದ ಕಾಕತಿವೇಸ್ ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ(ಸರದಾರ ಪ್ರೌಢಶಾಲೆ)ಯ ಮೂಲಸೌಕರ್ಯ ಬಲಪಡಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರೋಬೋಟಿಕ್, ಭಾಷಾ ಹಾಗೂ ವರ್ಚುವಲ್ ಪ್ರಯೋಗಾಲಯಗಳನ್ನು ಶಾಸಕ ಆಸಿಫ್(ರಾಜು) ಸೇಠ್ ಅವರು ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪೈಕಿ ₹5 ಕೋಟಿ ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ಕೂಡ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕ ಸೇಠ್ ಅವರು, ಶಾಸಕ…
ಪುನರ್ವಸತಿಗಾಗಿ ದೇವದಾಸಿ ತಾಯಂದಿರ ಬೃಹತ್ ಪ್ರತಿಭಟನೆ
ಬೆಂಗಳೂರು ಸರ್ಕಾರದ ಭರವಸೆಗಳು ಹಾಗೂ ಬಜೆಟ್ ಘೋಷಣೆಗಳು ಅನುಷ್ಠಾನಗೊಳ್ಳದೆ ವರ್ಷಗಳು ಕಳೆದರೂ ತಮ್ಮ ಬದುಕಿನಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾಜಿ ದೇವದಾಸಿ ತಾಯಂದಿರು ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ತಮ್ಮ ಹಕ್ಕು, ಗೌರವ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದರು. ಸಾವಿರಾರು ಮಹಿಳೆಯರ ಬೃಹತ್ ಸಮಾವೇಶದಿಂದ ಫ್ರೀಡಂ ಪಾರ್ಕ್ ಹೋರಾಟದ ಕೇಂದ್ರಬಿಂದುವಾಗಿತ್ತು….
ಜಾಗೃತಿ ಯೋಜನೆ 2025 ರ ಅಡಿಯಲ್ಲಿ ಯುವ ಶಕ್ತಿಯಿಂದ ಸಭಲ ಭಾರತ “ದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಶ್ರೀಮತಿ. ಪುಷ್ಪಲತಾ. ಕೆ ಅವರು ಉದ್ಘಾಟಿಸಿದರು.
ರಾಮದುರ್ಗ ಸ್ವಚ್ಛತೆಯ ಬಗ್ಗೆ ಬೇಜಾರ ವ್ಯಕ್ತಪಡಿಸಿದ ನ್ಯಾಯಾಧೀಶರು ಮಲಪ್ರಭಾ ನದಿಯು ನಮ್ಮ ಭಾಗದ ಜೀವಾಳ ಮತ್ತು ಅಮೂಲ್ಯವಾದ ಆಸ್ತಿ. ಅದನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಮದುರ್ಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ರಾಮದುರ್ಗ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ, ನ್ಯಾಯವಾದಿಗಳ…
ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವದು ಹಾಗೂ ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಅಶೋಕ ಪಟ್ಟಣ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ…
ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ
ಬೆಳಗಾವಿ ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ…
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರದಲ್ಲಿ ವಿಜೃಂಭಣೆಯಿಂದ 80ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿರಸಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು. ಈ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಎಂಸಿ ಸದಸ್ಯರಾದ ಬಸವರಾಜ ಕಡುಕೊಳ ಅವರು ” ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಮನೆಯಿಂದ ಇಂತಿಷ್ಟು ಹಣವನ್ನು ಸಂಗ್ರಹಿಸುತ್ತವೆ, ಸಂಗ್ರಹಿಸಿದ ಈ ಹಣದಲ್ಲಿ ಶಾಲೆ ಅಭಿವೃದ್ಧಿಗೆ 5 ರಿಂದ 10% ನೀಡಿ, ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ತಿಳಿಸಿದರು. ಹಾಗೂ ಈ ಕಾರ್ಯಕ್ರಮದಲ್ಲಿ ಶಾಳೆಯ ಸೇವಾದಳದ ವಿದ್ಯಾರ್ಥಿಗಳಿಗೆ…
ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ ನಂಬರ್ 494ರ ರೇವಪ್ಪ ಚಿಕ್ಕಣ್ಣವರ ಅವರ ಜಮೀನಿನಲ್ಲಿ…
ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತುರನೂರ ಗ್ರಾಮ ಪಂಚಾಯತಿಯ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು.
ಸ್ವಾತಂತ್ರ್ಯ ದಿನದಂದು ವಿಶೇಷ ಗ್ರಾಮಸಭೆಯನ್ನು ಹಮ್ಮಿಕೊಂಡು ಗ್ರಾಮ ಪಂಚಾಯತಿಯ ಸ್ವಂತ ಅನುದಾನದಲ್ಲಿಗ್ರಾಮ ಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ (ಹೆಣ್ಣು ಮಗು ಜನಿಸಿದ ಸಂದರ್ಭದಲ್ಲಿ ಮಗುವಿನ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ರೂ.5,000/- ಠೇವಣಿ ಇಡುವ ಯೋಜನೆ ಗ್ರಾಮರತ್ನ ಪ್ರತಿಭಾ ಪುರಸ್ಕಾರ ಯೋಜನೆ (ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿ, ವಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಪ್ರೋತ್ಸಾಹ ಧನ ನೀಡುವುದು) ಗ್ರಾಮ ಪಂಚಾಯಿತಿ ಸಪ್ತಪದಿ ಯೋಜನೆ (ಹೆಣ್ಣುಮಗಳ…
ರೋಣ ಸರ್ಕಾರಿ ಮಾದರಿ ಶಾಲೆಯ ನಿವೃತ್ತ ಶಿಕ್ಷಕರಿಗೆ ಮಾಜಿ ವಿದ್ಯಾರ್ಥಿಗಳಿಂದ ನೆನಪಿನ ಗೌರವ
ಗದಗ ಜಿಲ್ಲೆಯ ರೋಣ ಪಟ್ಟಣದ ಎಸ್. ಆರ್. ಪಾಟೀಲ್ ಬಾಲಕರ ಸರ್ಕಾರಿ ಮಾದರಿ ಕೇಂದ್ರ ಶಾಲೆಯ ೨೦೧೭-೧೮ನೇ ಸಾಲಿನ ೭ನೇ ತರಗತಿಯ ಮಾಜಿ ವಿದ್ಯಾರ್ಥಿಗಳು ತಮಗೆ ಜ್ಞಾನ ಧಾರೆ ಎರೆದ ನಿವೃತ್ತ ಶಿಕ್ಷಕರಿಗಾಗಿ ಇತ್ತೀಚೆಗೆ ವಿಶೇಷ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡು ಗುರುವಂದನೆ ಸಲ್ಲಿಸಿದರು.ಕಾರ್ಯಕ್ರಮದ ಆರಂಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಶಿಕ್ಷಕರು ಗಿಡಕ್ಕೆ ನೀರೆರೆಯುವ ಮೂಲಕ ಅರ್ಥಪೂರ್ಣವಾಗಿ ಉದ್ಘಾಟನೆ ನೆರವೇರಿಸಿದರು. ನಂತರ ಶಾಲೆಯ ನಿವೃತ್ತ ಶಿಕ್ಷಕರಾದ ಬಿ. ಪಿ. ಅತ್ತಿಗೇರಿ, ಜೆ. ಎಸ್. ನೀಲಗಾರ, ಎಸ್. ಎಚ್. ನೀಲಗಾರ, ಎಲ್….
