ಮೊಬೈಲ್ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. : ರವಿ ಭಜಂತ್ರಿ
ಬೆಳಗಾವಿ, ಮೇ 24: “ಮೊಬೈಲ್ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. ಈ ವಯಸ್ಸಿನಲ್ಲಿ ಉತ್ತಮ ಆಹಾರ, ಸಮರ್ಪಕ ನಿದ್ರೆ ಮತ್ತು ಓದಿನತ್ತ ಗಮನ ಹರಿಸುವುದು ಅತ್ಯಗತ್ಯ. ವಿಶೇಷವಾಗಿ ಬೆಳಗಿನ ಓದು ಮನಸ್ಸಿನಲ್ಲಿ ಗಾಢವಾಗಿ ಉಳಿಯುತ್ತದೆ. ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಜ್ಞಾನ ಅಗತ್ಯ,” ಎಂದು ಬೆಳಗಾವಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಹೇಳಿದರು. ಬೆಳಗಾವಿಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ಮಹಾಂತೇಶನಗರ ವತಿಯಿಂದ 2026–27ನೇ ಸಾಲಿನ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಹತ್ತನೇ…
ಅನೈತಿಕ ಚಟುವಟಿಕೆಗಳ ಸ್ಥಾನವಾದ ಮುರಗೋಡ ಪ್ರವಾಸಿ ಮಂದಿರ!
ಗ್ರಾಮೀಣ ಮಟ್ಟದಲ್ಲಿ ಬರುವ ಪ್ರವಾಸಿಗರಿಗೆ ವಿಶ್ರಾಂತಿ ನೀಡಬೇಕೆಂಬ ಉದ್ದೇಶದಿಂದ ಸರಕಾರ ಸೇರಿದಂತೆ ನಾನಾ ಹೋಬಳಿ ಮಟ್ಟದಲ್ಲಿ ಲೋಕೊಪಯೋಗಿ ಇಲಾಖೆ ಮೂಲಕ ಪ್ರವಾಸಿ ಮಂದಿರ ನಿರ್ಮಿಸಿದೆ. ಆದರೆ ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದ ಪ್ರವಾಸಿ ತಾಣ ಸೂಕ್ತ ಸೌಕರ್ಯಗಳು ಇಲ್ಲದೇ ಪಾಳು ಬಿದ್ದಿದ ಮುರಗೋಡ ಗ್ರಾಮೀಣ ಮಟ್ಟದಲ್ಲಿ ಬರುವ ಪ್ರವಾಸಿಗರಿಗೆ ವಿಶ್ರಾಂತಿ ನೀಡಬೇಕೆಂಬ ಉದ್ದೇಶದಿಂದ ಸರಕಾರ ಮುರಗೋಡ ಸೇರಿದಂತೆ ನಾನಾ ಹೋಬಳಿ ಮಟ್ಟದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ. 1968ವಿಶ್ವಯಲ್ಲಿ ಶತಮಾನದ ಶಿವಯೋಗಿ ಮಹಾಂತ ಶಿವಯೋಗಿಗಳ ಅಮೃತ ಹಸ್ತದಿಂದ ಲೋಕೊಪಯೋಗಿ…
ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026 – ಮಿತಿಗಳನ್ನು ಮೀರಿ ಓಡಿ!
ಬೆಂಗಳೂರಿನ ಓಟಗಾರರ ಸಮೂಹವು ನಗರದ ಅತ್ಯಂತ ರೋಮಾಂಚಕ ಫಿಟ್ನೆಸ್ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ‘ಫ್ರೀಡಂ ಹೆಲ್ತಿ ಕುಕಿಂಗ್ ಆಯಿಲ್’ ಪ್ರಸ್ತುತಪಡಿಸುವ ‘ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026’ ಮೇ 24, 2026 ರಂದು ಮರುಳುತ್ತಿದ್ದು, ಈಗಾಗಲೇ 6000ಕ್ಕೂ ಹೆಚ್ಚು ಸ್ಪರ್ಧಿಗಳು ನೋಂದಾಯಿಸಿಕೊಂಡಿದ್ದಾರೆ! ಬೆಂಗಳೂರಿನ ಐತಿಹಾಸಿಕ ನೈಸ್ ರಸ್ತೆ ಮಾರ್ಗದಲ್ಲಿ ನಡೆಯಲಿರುವ ಈ ಕ್ರೀಡಾಕೂಟವು ಅಥ್ಲೀಟ್ಗಳು, ಫಿಟ್ನೆಸ್ ಪ್ರೇಮಿಗಳು, ಕಾರ್ಪೊರೇಟ್ ತಂಡಗಳು, ರನ್ನಿಂಗ್ ಕ್ಲಬ್ಗಳು ಮತ್ತು ಮೊದಲ ಬಾರಿಗೆ ಭಾಗವಹಿಸುತ್ತಿರುವ ಓಟಗಾರರಿಗೆ ವಿಶ್ವದರ್ಜೆಯ ಅನುಭವವನ್ನು ನೀಡಲಿದೆ. ಸ್ಪರ್ಧಿಗಳು ವೃತ್ತಿಪರ ಟೈಮಿಂಗ್…
ಬಕ್ರೀದ್ ಹಬ್ಬದ ಪ್ರಯುಕ್ತ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ.
ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ವಿನಾಯಕ ಬಡಿಗೇರ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ವಿನಾಯಕ ಬಡಿಗೇರ ಮಾತನಾಡಿ, ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮುಖಾಂತರ ಮತ್ತೊಬ್ಬರಿಗೆ ಮಾದರಿಯಾಗಿರಬೇಕು ಎಂದು ತಿಳಿಸಿದರು….
ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ
ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ. ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ…
ಬಾಗಲಕೋಟೆ ಜಿಲ್ಲೆಯ 36 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ
ಬಾಗಲಕೋಟೆ ಜಿಲ್ಲೆಯ 36 ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.24 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 65 ಟಿಪ್ಪರ್, 18 ಹಿಟಾಚಿ ಸೇರಿ ಭಾರೀ ಪ್ರಮಾಣದ ಸಲಕರಣೆಗಳನ್ನು ಜಪ್ತಿ ಮಾಡಲಾಗಿದೆ. ಅಕ್ರಮ ತಡೆಯದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ದೂರು ಕೂಡ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ…
ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!
ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23. 35 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ…
ಲೋಕಾಪುರದಲ್ಲಿ ಒತ್ತುವರಿ ಅಂಗಡಿಗಳ ತೆರವು!
ಬಾಗಲಕೋಟೆ ಜಿಲ್ಲೆ ಲೋಕಾಪುರ ಪಟ್ಟಣದ ಪ್ರಮುಖ ಕೇಂದ್ರವಾದ ಬಸವೇಶ್ವರ ವೃತ್ತದ ಬಳಿ ಇಂದು ಮುಂಜಾನೆಯೇ ಜೆಸಿಬಿ ಘರ್ಜಿಸಿದೆ. ಮುಧೋಳ ತಹಶೀಲ್ದಾರ್ ಅವರ ಕಡಕ್ ಸೂಚನೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಮುಧೋಳ ಇಒ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳ ತಂಡ, ರಸ್ತೆ ಬದಿಯಲ್ಲಿದ್ದ ಒತ್ತುವರಿ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದೆ. ದೀರ್ಘಕಾಲದಿಂದ ಪಾದಚಾರಿಗಳ ಮತ್ತು ವಾಹನಗಳ ಮುಕ್ತ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ಅಂಗಡಿಗಳನ್ನು ನೆಲಸಮಗೊಳಿಸುವ ಮೂಲಕ ರಸ್ತೆ ಸುಗಮಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ…
ಲಿಂಗದಳ್ಳಿಯಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವ
ವಿಜಯಪುರ: ತಾಳಿಕೋಟಿ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು.ಶುಕ್ರವಾರ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ 6 ಗಂಟೆಗೆ ಸಾಂಪ್ರದಾಯಿಕ ಗಂಗಾಸ್ಥಳ ಮುಗಿಸಿಕೊಂಡು ಬಂದ ಬಳಿಕ, ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದೇವತೆಯ ಭವ್ಯ ರಥೋತ್ಸವ ನೆರವೇರಿತು.ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು. ಸಾರವಾಡದ ಈಶ್ವರ ಗಾರುಡಿ ಗೊಂಬೆ ಗೆಳೆಯರ ಬಳಗ, ಬಾದಾಮಿ ತಾಲೂಕಿನ ಗೋವಿನಕೊಪ್ಪದ…
ಎಆರ್ಒ ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ಎನ್.ಆರ್.ರಮೇಶ್ ದೂರು
ಬೆಂಗಳೂರು ಮಾಜಿ ಸಚಿವ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅವರ ಪರಮಾಪ್ತ ಅಶ್ವತ್ಥ್ ಎಂಬ ವ್ಯಕ್ತಿ ನಿರ್ಮಿಸಿರುವ ಅಕ್ರಮ ಬಡಾವಣೆಗೆ ಕಾನೂನು ಬಾಹಿರವಾಗಿ ಎ ಖಾತಾಗಳನ್ನು ಮಾಡಿ ಕೊಡುವ ಮೂಲಕ ಪಾಲಿಕೆಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಹೇರೋಹಳ್ಳಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಮಂಜುಳಾ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿರುವ 4.20 ಎಕರೆ ವಿಸ್ತೀರ್ಣದ ಸ್ವತ್ತಿನಲ್ಲಿ ಅಶ್ವಥ್ ಎಂಬಾತ ಬಿಡಿಎ ನಕ್ಷೆ ಮಂಜೂರಾತಿಯನ್ನೇ ಪಡೆಯದೆ…
