BREAKING NEWS

ಮುರಗೋಡ ಪೊಲೀಸ ಠಾಣೆಯ ವತಿಯಿಂದ ಮುಂಬರುವ ಹೋಳಿ ಹಬ್ಬದ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮುಂಬರುವ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬಗಳನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸಲು ಇತ್ತೀಚೆಗೆ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಎರಡೂ ಸಮುದಾಯಗಳ ಜನರು ಪರಸ್ಪರ ಸಹೋದರತ್ವ ಮತ್ತು ಪ್ರೀತಿಯಿಂದ ಹಬ್ಬಗಳನ್ನು ಆಚರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಲಾಯಿತು. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು….

Read More

ಸವದತ್ತಿ ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ 100 ದಿನಗಳ ಜಾಗೃತಿ ಅಭಿಯಾನ

ಸವದತ್ತಿಯ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸಭೆಯನ್ನು 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸವದತ್ತಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಸವದತ್ತಿಯ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ರವರ ನಿರ್ದೇಶನದಂತೆ, ಬಾಲ್ಯ ವಿವಾಹ ಮುಕ್ತ…

Read More

ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ

ಬೆಳವಡಿ ಸಂಸ್ಥಾನದ ವೀರ ಜ್ಯೋತಿಯನ್ನು ಬೆಳವಡಿಯ ಮಲ್ಲಮ್ಮನ ವೃತ್ತದಲ್ಲಿ ಶನಿವಾರ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಂಭ್ರಮದಿಂದ ಬರಮಾಡಿಕೊಂಡು, ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು. ಬೆಳವಡಿ ಮಲ್ಲಮ್ಮನ ಹುಟ್ಟೂರು ಶಿರಸಿ ಸಮೀಪದ ಸೋಂದಾದಿಂದ ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೆಳವಡಿಗೆ ಆಗಮಿಸಿದ ವೀರ ಜ್ಯೋತಿಗೆ ಪೂಜೆ ಸಲ್ಲಿಸುವುದರ ಮೂಲಕ ಸಡಗರದಿಂದ ಬರಮಾಡಿಕೊಳ್ಳಲಾಯಿತು. ಬಳಿಕ ಬೆಳವಡಿ ಮಲ್ಲಮ್ಮನ ಪುತ್ಥಳಿ ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೂಡಲಸಂಗಮ…

Read More

ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ

ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ ಮೇಲ್ವಿಚಾರಣೆಗೆ…

Read More

ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ಪ್ರತಿಭಟನೆ.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಮನವಿಯನ್ನು ಸಲ್ಲಿಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧ ನೀತಿಯನ್ನು ವಿರೋಧಿಸಿ ಜಿಲ್ಲೆಯ ಎಲ್ಲ ವಿಭಾಗಗಳ ಕಾರ್ಮಿಕರು ಹಾಗೂ ನೌಕರರು ತಮ್ಮ ಹಕ್ಕುಗಳನ್ನು ಉಳಿಸಿ ರಕ್ಷಿಸಿಕೊಳ್ಳಲು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ…

Read More

ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆ DYSP ಚಿದಂಬರ ಮಡಿವಾಳರ ಇವರ ಉಪಸ್ಥಿಯಲ್ಲಿ ನಡೆಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು–ಕೊರತೆ ಸಭೆಯು ರಾಮದುರ್ಗ ಪೋಲೀಸ್ ಉಪಾಧೀಕ್ಷಕರು ಉಪ ವಿಭಾಗ ರಾಮದುರ್ಗದ (DYSP) ಚಿದಂಬರ ವಿ ಮಡಿವಾಳರ ಇವರ ಉಪಸ್ಥಿಯಲ್ಲಿ ನಡೆಯಿತು. ಎಸ್ಸಿ/ಎಸ್ಟಿ ಕುಂದುಕೊರತೆ ಸಭೆಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರ ದೈನಂದಿನ ಸಮಸ್ಯೆಗಳು, ಭೂ ವಿವಾದಗಳು, ಪೊಲೀಸ್ ದೂರುಗಳು, ಮತ್ತು ಜಮೀನು ವಿವಾದಗಳು, ಜಾತಿ ನಿಂದನೆ ಪ್ರಕರಣಗಳು, ಮೂಲಭೂತ ಸೌಕರ್ಯಗಳ ಕೊರತೆ, ಮತ್ತು ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿನ ಸಮಸ್ಯೆಗಳು,…

Read More

ಪಡಿತರ ಅಕ್ಕಿ ಕಳ್ಳ ಸಾಗಟ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಿಂದ ಎಂಎಚ್ 13 ಎಎ 3745 ನೋಂದಣಿ ಸಂಖ್ಯೆಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಸುಮಾರು 8 ಲಕ್ಷ ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂಡಿ ಶಹರ ಪೊಲೀಸ್…

Read More

ಗೋಮಾಳ ಜಮೀನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿರುವ ಗೋಮಾಳ ಜಮೀನು ಸಂರಕ್ಷಣೆ ಮಾಡಲು ತಾಲೂಕಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ರೈತ ಮುಖಂಡರು ತಹಶೀಲಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು. ತಾಲೂಕಿನಲ್ಲಿರುವ ಗೋಮಾಳ, ಗೈರಾಣ ಜಮೀನುಗಳನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ಕೇಳಿ ಬರುತ್ತಿದೆ. ಆದರೆ ಗೋಮಾಳ ಪೂರ್ವಜರ ಜಮೀನುಗಳು ಕಾಲದಿಂದಲೂ ಗೋವುಗಳು ಮೇಯಲು ಸಹಕಾರಿಯಾಗಿದ್ದವು.ಇಂದು ಗೋಮಾಳ ಜಮೀನು ಬೇರೆ ಉದ್ದೇಶಕ್ಕೆ ನೀಡಿದ್ದು, ಜಾನುವಾರುಗಳ ಮೇಯಲು ಇಲ್ಲದಂತಾಗಿದೆ. ಶೀಘ್ರದಲ್ಲಿ ಬೇರೆ ಉದ್ದೇಶಗಳಿಗೆ…

Read More

ಬೆಳಗಾವಿ ಜಿಲ್ಲೆಯ ರಣಕುಂಡೆ ಗ್ರಾಮದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.

ಅಬಕಾರಿ ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 205 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 3 ಲಕ್ಷ 12 ಸಾವಿರ ರೂಪಾಯಿಗಳು ಎಂದು ತಿಳಿದುಬಂದಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕಾರು ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಅಬಕಾರಿ ಪೊಲೀಸರು ಮದ್ಯದೊಂದಿಗೆ ಸಾಗಾಟಕ್ಕೆ ಬಳಸಿದ್ದ ಕಾರನ್ನು ಸಹ ಸೀಜ್ ಮಾಡಿದ್ದಾರೆ. ಈ ಘಟನೆಯು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Read More

ಲಿಂಗಾಯತ ಸಂಘಟನೆ ವತಿಯಿಂದ ಚಿಂತನ ಕಾರ್ಯಕ್ರಮ – ಸತಿಪತಿಯರ ಭಾಂದವ್ಯದಲ್ಲಿದೆ ಸಾಮಾಜಿಕ ಸಾಮರಸ್ಯ- ಸಾಹಿತಿ ಶ್ರೀಕಾಂತ ಶಾನವಾಡ.

ಸತಿಪತಿಯರಲ್ಲಿ ಅನ್ಯೋನ್ಯತೆ, ಸಾಮರಸ್ಯ ಭಾವನೆಯ ಬಾಂಧವ್ಯ, ಸಹಾನುಭೂತಿ, ಕುಟುಂಬದ ಕಳಕಳಿ ಇದ್ದರೆ ಅದು ಸಾಮಾಜಿಕ ಸಾಮರಸ್ಯಕ್ಕೆ ನಾಂದಿಯಾಗುತ್ತದೆ. ಆದಕಾರಣ ಸತಿಪತಿಯರ ಭಾವ ಬಂಧ ಅತಿ ಪ್ರಮುಖವಾಗಿದೆ ಎಂದು ಸಾಹಿತಿ ಶ್ರೀಕಾಂತ ಶಾನವಾಡ ರವಿವಾರ ದಿ. 22 ರಂದು ಬೆಳಗಾವಿ ನಗರದ ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆಯ ವತಿಯಿಂದ ಹಮ್ಮಿಕೊಳ್ಳಲಾದ ವಾರದ ಪ್ರಾರ್ಥನೆ ಮತ್ತು ಚಿಂತನ ಕಾರ್ಯಕ್ರಮದಲ್ಲಿ ‘ದಾಂಪತ್ಯ ಧರ್ಮ’ ವಿಷಯ ಕುರಿತು ಮಾತನಾಡಿದರು.ಇತ್ತಿಚಿನ ದಿನಗಳಲ್ಲಿ ಸಾಮಾಜಿಕ, ಕೌಟುಂಬಿಕ ಸ್ಥಿತಿ ಹದಗೆಡಲು ಭಿನ್ನಾಭಿಪ್ರಾಯಗಳೇ ಕಾರಣವಾಗಿದೆ 12ನೇ ಶತಮಾನದಲ್ಲಿ ಶರಣರ…

Read More