ಲಿಂಗಾಯತ ಸಂಘಟನೆ ವತಿಯಿಂದ ಚಿಂತನ ಕಾರ್ಯಕ್ರಮ – ಸತಿಪತಿಯರ ಭಾಂದವ್ಯದಲ್ಲಿದೆ ಸಾಮಾಜಿಕ ಸಾಮರಸ್ಯ- ಸಾಹಿತಿ ಶ್ರೀಕಾಂತ ಶಾನವಾಡ.
ಸತಿಪತಿಯರಲ್ಲಿ ಅನ್ಯೋನ್ಯತೆ, ಸಾಮರಸ್ಯ ಭಾವನೆಯ ಬಾಂಧವ್ಯ, ಸಹಾನುಭೂತಿ, ಕುಟುಂಬದ ಕಳಕಳಿ ಇದ್ದರೆ ಅದು ಸಾಮಾಜಿಕ ಸಾಮರಸ್ಯಕ್ಕೆ ನಾಂದಿಯಾಗುತ್ತದೆ. ಆದಕಾರಣ ಸತಿಪತಿಯರ ಭಾವ ಬಂಧ ಅತಿ ಪ್ರಮುಖವಾಗಿದೆ ಎಂದು ಸಾಹಿತಿ ಶ್ರೀಕಾಂತ ಶಾನವಾಡ ರವಿವಾರ ದಿ. 22 ರಂದು ಬೆಳಗಾವಿ ನಗರದ ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆಯ ವತಿಯಿಂದ ಹಮ್ಮಿಕೊಳ್ಳಲಾದ ವಾರದ ಪ್ರಾರ್ಥನೆ ಮತ್ತು ಚಿಂತನ ಕಾರ್ಯಕ್ರಮದಲ್ಲಿ ‘ದಾಂಪತ್ಯ ಧರ್ಮ’ ವಿಷಯ ಕುರಿತು ಮಾತನಾಡಿದರು.ಇತ್ತಿಚಿನ ದಿನಗಳಲ್ಲಿ ಸಾಮಾಜಿಕ, ಕೌಟುಂಬಿಕ ಸ್ಥಿತಿ ಹದಗೆಡಲು ಭಿನ್ನಾಭಿಪ್ರಾಯಗಳೇ ಕಾರಣವಾಗಿದೆ 12ನೇ ಶತಮಾನದಲ್ಲಿ ಶರಣರ…
ಹುಬ್ಬಳ್ಳಿಯಲ್ಲಿ ಬಾರಿ ಅಗ್ನಿ ಅವಘಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿಗೆ ಬೆಂಕಿ.
ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೋದಾಮಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಅಗ್ನಿ ಅವಘಡ. ಕುಸುಗಲ್ ರಸ್ತೆಯ ಝಡೀಕೋ ಎಂಟರ್ ಪ್ರೈಸಸ್ ಮನೆ ಬಳಕೆಯ ಸಾಮಾನುಗಳ ಗೋದಾಮಿಗೆ ಶಾರ್ಟ್ ಸಕ್ರೂಟ್ ನಿಂದ ಬೆಂಕಿ ತಗುಲಿ ಕೋಟ್ಯಾಂತರ ರೂಪಾಯಿಯ ವಸ್ತುಗಳು ಸುಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಉಣಕಲ್ ಮಾಲೀಕರಾದ ರವಿ ಜೈನ್ ಎಂಬುವರಿಗೆ ಸೇರಿದ ಎಲೆಕ್ಟ್ರಾನಿಕ್ ಗೋದಾಮಾಗಿದ್ದು, ಏಕಾಏಕಿ ಬೆಂಕಿ ತಗುಲಿದೆ.ಗೋದಾಮಿನಲ್ಲಿದ್ದ ಟಿವಿ, ಎಸಿ ಮತ್ತು ರೆಫ್ರಿಜರೇಟರ್ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿಗಳ ನಷ್ಟ…
ಜಿಲ್ಲೆಯ ಎಲ್ಲ ರೈತರು ಫ್ರೂಟ್ಸ್ ಐಡಿ ಮತ್ತು ನೋಂದಣಿ ಸಂಖ್ಯೆ ಹೊಂದುವುದು ಹಾಗೂ ತಮ್ಮ ಎಲ್ಲ ಭೂ ಹಿಡುವಳಿಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ಜೋಡಣೆ ಮಾಡುವುದು ಕಡ್ಡಾಯ:ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ ಫ್ರೂಟ್ಸ್ ತಂತ್ರಾಂಶದಲ್ಲಿ ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 2.42 ಲಕ್ಷ ರೈತರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 1.66 ಲಕ್ಷ ರೈತರು ಭೂ ಹಿಡುವಳಿಗಳನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿನ ಎಲ್ಲಾ ಭೂಹಿಡುವಳಿ ಹೊಂದಿರುವ ರೈತರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಮತ್ತು ಫ್ರೂಟ್ಸ್ ನೋಂದಣಿ ಸಂಖ್ಯೆ (ಎಫ್ಐಡಿ) ಗಳಿಗೆ ರೈತರ ಎಲ್ಲಾ ಭೂ ಹಿಡುವಳಿಗಳನ್ನು ಜೋಡಣೆ ಮಾಡುವುದು ಅವಶ್ಯವಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಫ್ರೂಟ್ಸ್ (State…
ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಳಗಾವಿ, ಚನ್ನಮ್ಮನ ಕಿತ್ತೂರು : ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.ಸುಮಾರು 5 ರಿಂದ 6 ದಿನಗಳ ಹಿಂದೆ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯ ವ್ಯಾಪ್ತಿಯ ಗೋವಿನ ಜೋಳದ ಜಮೀನಿನಲ್ಲಿ ಒರ್ವ ವ್ಯಕ್ತಿಯನ್ನು ಕೊಲೆ ಮಾಡಿ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್, ಡಿವೈಎಸ್ಪಿ ವೀರಯ್ಯ ಹಿರೇಮಠ, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ…
ಉಮೇಶ ಕುಶಾಲ ಬಡಿಗೇರ ಬಾವಿಯಲ್ಲಿ ತನ್ನಷ್ಟಕ್ಕೆ ತಾನೆ ಜಿಗಿದು ಆತ್ಮಹತ್ಯೆ ಮಾಡಿಕೊಂಡು ಮರಣ ಹೊಂದಿರುತ್ತಾನೆ.
ಬೆಳಗಾವಿ ಜಿಲ್ಲೆ ರಾಮದುರ್ಗ ನಗರದ ಉಮೇಶ ಕುಶಾಲ ಬಡಿಗೇರ ವಯಸ್ಸು 34 ವರ್ಷ ಉದ್ಯೋಗ ಬಡಿಗತನ ಸಾ: ರಾದಾಪೂರಪೇಠ, ರಾಮದುರ್ಗ ಇವನು ಸುಮಾರು 4-5 ವರ್ಷಗಳಿಂದ ಅತಿಯಾಗಿ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದನು.ದಿನಾಂಕ: 19/02/2026 ರಂದು ಮುಂಜಾನೆ 07:00 ಗಂಟೆ ಸುಮಾರಿಗೆ ಸರಾಯಿ ಕುಡಿದ ನಸೇಯಲ್ಲಿ ತನ್ನ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ರಾಮದುರ್ಗ ತನ್ನ ಮನೆಯಿಂದ ಹೋಗಿ ದಿನಾಂಖ: 19/02/2026 ರಂದು ಮುಂಜಾನೆ 07:00 ಗಂಟೆಯಿಂದ ದಿನಾಂಕ: 21/02/2026 ರಂದು ಮದ್ಯಾಹ್ನ 01:00 ಗಂಟೆಯ ನಡುವಿನ ಅವಧಿಯಲ್ಲಿ…
ಸವದತ್ತಿ ವಕೀಲರ ಸಂಘದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಛತ್ರಪತಿ ಶಿವಾಜಿ ಮಹಾರಾಜರು 1930ರ ಫೆಬ್ರವರಿ 19 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ಬಳಿ ಜನಿಸಿದರು. ಶಿವಾಜಿ ಮಹಾರಾಜರು ಜನಿಸಿದ ಈ ದಿನವನ್ನೇ ಶಿವಾಜಿ ಜಯಂತಿ ಎಂದು ನಡೆಸಿಕೊಂಡು ಬರಲಾಗುತ್ತಿದ್ದು, ಶಿವಾಜಿ ಜಯಂತಿಯನ್ನು ಫೆಬ್ರವರಿ 19ರಂದು ಆಚರಿಸಲಾಗುವುದು. ಬೆಳಗಾವಿ ಜಿಲ್ಲೆ ಸವದತ್ತಿ ನಗರದ ಶಿವಾಜಿ ಸರ್ಕಲ್ ನಲ್ಲಿ ಸವದತ್ತಿ ವಕೀಲರ ಸಂಘದಿಂದಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ಅಂಗವಾಗಿಶಿವಾಜಿ ಮಹಾರಾಜರ ಭಾವಚಿತ್ರ/ಪುತ್ಥಳಿಗೆ ಪುಷ್ಪಾರ್ಚನೆ, ಸಲ್ಲಿಸಿ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಈ ವೇಳೆ ವಕೀಲರ ಸಂಘದ…
SSLC, PUC ಪರೀಕ್ಷೆ 2026 ಪರೀಕ್ಷೆಗಳ ದಿನಾಂಕ ಘೋಷಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್ 24 ಕ್ಕೆ ಹೊರಬೀಳಲಿದೆ. ಮಂಗಳವಾರ ಶಿಕ್ಷಣ ಸಚಿವ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಸಿದ್ಧತೆ ಸಭೆ ನಡೆದಿದೆ. ಈ ವೇಳೆ ಪರೀಕ್ಷಾ ದಿನಾಂಕ, ಫಲಿತಾಂಶ ಪ್ರಕಟವಾಗುವ ಸಂಭಾವ್ಯ ದಿನಾಂಕ ಮತ್ತು ಪರೀಕ್ಷೆ-2 ರ ದಿನಾಂಕಗಳನ್ನು ಘೋಷಣೆ…
ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಸಸಿಗಳನ್ನು ನೆಡುವುದು.
ವಿಜಯ ಸೇನಾ ಸಮಿತಿ ಸಂಸ್ಥಾಪಕರಾದ ಶ್ರೀ ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಅನೇಕ ಸಾಮಾಜಿಕ ಹಿತಾಸಕ್ತಿ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಸರ್ಕಾರಿ ನೌಕರರಿಗೆ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಾಮೆಂಟ್ ಯಶಸ್ವಿಯಾಗಿ ಜರುಗಿದ್ದು ಹಾಗೆಯೇ ಪರಿಸರ ಸಂರಕ್ಷಣೆ ಕೂಡ ನಮ್ಮೆಲ್ಲರ ಜವಾಬ್ದಾರಿ ಅನ್ನುವ ಕಾರಣಕ್ಕೆ ವನೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು VSS ಸದಸ್ಯರು 200 ಸಸಿಗಳನ್ನು ತಮ್ಮ ತಮ್ಮ ಮನೆ ಹಾಗೂ ಹೊಲಗಳಲ್ಲಿ ನೆಡುವ ಮೂಲಕ ಜನ್ಮದಿನದ ಶುಭಾಶಯ ಕೋರುವ ವಿಶೇಷ ಆಚರಣೆಗೆ ಮುಂದಾಗಿದ್ದಾರೆ. ವಿಜಯ ನಾಯ್ಕ ಅವರ ಜನ್ಮದಿನದ…
“ಅಕ್ಕ ಪಡೆ” ರಕ್ಷಣಾತ್ಮಕ ಅಣುಕು ಪ್ರದರ್ಶನ : ಅಕ್ಕ ಪಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ
ಬೆಳಗಾವಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷವಾಗಿ ರಚಿಸಿರುವ “ಅಕ್ಕ ಪಡೆ”ಗೆ ನಗರ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು“ಅಕ್ಕ ಪಡೆ” 24/7 ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ. ತರಬೇತಿ ಪಡೆದ ಮಹಿಳಾ ಸಿಬ್ಬಂದಿ ಅಕ್ಕ ಪಡೆಯಲ್ಲಿ ಆಯ್ಕೆಯಾಗಿದ್ದು, ಶಾಲಾ-ಕಾಲೇಜು, ಮಾಲ್ಗಳು, ದೇವಸ್ಥಾನ, ಬಸ್ ಮತ್ತು ರೈಲ್ವೆ ನಿಲ್ದಾಣಗಳಂತಹ ಜನದಟ್ಟಣೆ ಪ್ರದೇಶಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಮಾಹಿತಿ…
ಸವದತ್ತಿಯ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ತಾಲೂಕು ಸಾರ್ವಜನಿಕ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ಸವದತ್ತಿ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 100 ಹಾಸಿಗೆಗಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಸಚಿವ ದಿನೇಶ ಗುಂಡೂರಾವ್ ನೆರವೇರಿಸಿ ಅವರು ಮಾತನಾಡಿದರು , ಜಿಲ್ಲಾಸ್ಪತ್ರೆಯಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸವದತ್ತಿಯ ತಾಲೂಕು ಆಸ್ಪತ್ರೆಗಳಲ್ಲೂ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು ಹಾಗೂ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ 9 ಐಸಿಯು ವ್ಯವಸ್ಥೆಗೆ…
