ಮಾಹಿತಿ ಹಕ್ಕು ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ : ಆರ್ ಟಿ ಐ ಅರ್ಜಿ ನಿರ್ಲಕ್ಷ್ಯ ಆಯೋಗ ಕ್ರಮ.
ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರಿಂದ ಸ್ವೀಕೃತವಾಗುವ ಪ್ರಥಮ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವ ಅಧಿಕಾರಿಗಳ ವಿರುದ್ಧ ಕರ್ನಾಟಕ ಮಾಹಿತಿ ಆಯೋಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಸುತ್ತೋಲೆ ಹೊರಡಿ ಸಿರುವ ಆಯೋಗ, ಮಾಹಿತಿ ಹಕ್ಕು ಅಧಿನಿಯಮ ಸೆಕ್ಷನ್4(1) ಎರ ಮಾಹಿತಿ ಮತ್ತು 4(1)ಬಿ ಅನ್ವಯ 17 ಅಂಶಗಳನ್ನು ಒಳಗೊಂಡ ಪರಿಪೂರ್ಣಗೊಳಿಸಿದ ಮಾಹಿತಿಯನ್ನು ಆಯಾ ಪ್ರಾಧಿಕಾರಿಗಳು ಪ್ರತಿ ವರ್ಷ ಡಿಸೆಂಬರ್ 31ರ ಒಳಗೆ ಇಲಾಖೆ ವೆಬ್ ಸೈಟ್ನಲ್ಲಿ ಪ್ರಕಟಿಸಲು ತಿಳಿಸಿದೆ. ರಾಜ್ಯದ…
ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು
ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು ನಮೂನೆ-3 ವಿತರಿಸಿರುವ ಕುರಿತು ಹಲವಾರು ಗಂಭೀರ ದೂರುಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಮೈಸೂರು ಜಿಲ್ಲಾಧಿಕಾರಿಗಳು ದಿನಾಂಕ-03.01.2026ರಂದು ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, 15 ದಿನಗಳೊಳಗೆ…
ಸಮಾಜ ಸೇವಕಿ ಭಾರತೀಯ ಎಚ್ ಆರ್ ಅವರಿಗೆ ನಾರಿ ಶಕ್ತಿ ಪ್ರಶಸ್ತಿ
ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಏರ್ಪಡಿಸಿದ್ದ ನಾರಿ ಶಕ್ತಿ ಮತ್ತು ನಾಡ ಕೀರ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಾಡಿನ ಅಭ್ಯುದಯದಲ್ಲಿ ಸಾಧಕರ ಪಾತ್ರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಭಾರತದಲ್ಲಿ ಅನಾದಿಕಾಲದಿಂದಲೂ ನಾರಿ ಶಕ್ತಿಗೆ ವಿಶೇಷವಾದ ಸ್ಥಾನಮಾನ ಇದೆ ಅದು ಮುಂದುವರೆದು ಇಂದು ಜಗತ್ತಿನ ಎಲ್ಲಾ ರಂಗಗಳಲ್ಲಿಯೂ ನಾರಿ ತನ್ನ ಶಕ್ತಿ ಸಾಮರ್ಥ್ಯ ಮತ್ತು ಬುದ್ಧಿವಂತಿಕೆಯಿಂದ ಜಗತ್ತಿನ ಅಭ್ಯುದಯಕ್ಕೆ ತನ್ನ ಕೊಡುಗೆಯನ್ನು ನೀಡುತ್ತಿದ್ದಾಳೆ.ಇಂತಹ ಸಮಾರಂಭಗಳಲ್ಲಿ ಮಹಿಳೆಯರನ್ನು ಗೌರವಿಸುತ್ತಿರುವುದು ಅತೀವ ಸಂತಸ ತಂದಿದೆ. ಸಾಹಿತಿ ಹಾಗೂ…
ಧಾರವಾಡ ಶೂಟೌಟ್ ಕೇಸ್ ಭೇದಿಸಿದ ಖಾಕಿ: ಐವರು ಆರೋಪಿಗಳ ಬಂಧನ, ಪಿಸ್ತೂಲ್ ಹಾಗೂ ರಿವಾಲ್ವರ್ ಜಪ್ತಿ!
ಧಾರವಾಡ ಹೊರವಲಯದ ತಡಸಿನಕೊಪ್ಪ ಬಳಿಯ ಇಟಿಗಟ್ಟಿ ರಸ್ತೆ ಮಾರ್ಗದಲ್ಲಿ ಕಳೆದ ದಿನ ನಡೆದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನಿಗೆ ಗಾಯಗೊಳಿಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲು ಅಂಗರಕ್ಷಕರು (ಬೌನ್ಸರ್ಸ್) ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಇತ್ತಾದರೂ, ಘಟನೆಯ ಬಳಿಕ ಪೊಲೀಸರಿಗೆ ಲಭ್ಯವಾದ ಕೆಲವು ಪ್ರಮುಖ ವಿಡಿಯೋ ತುಣುಕುಗಳ…
ಬೆಳಗಾವಿ: ಹೋಟೆಲ್ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!
ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.ಬೆಳಗಾವಿಯ ಸಾವಗಾಂವ್ ಅಂಗಡಿ ಕಾಲೇಜ್ ಹತ್ತಿರವಿರುವ ಸನ್ಫ್ಲಾವರ್ ಹೋಟೆಲ್ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮದ್ಯ ಸೇವನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಪಿಎಸ್ಐ ಎಲ್. ಎಸ್. ಜೋಡಟ್ಟಿ ಹಾಗೂ ಸಿಬ್ಬಂದಿ ಜಂಟಿ…
ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಚಖಂಡಿ ತಾಂಡಾ ಮೇಲೆ ದಾಳಿ ; ಭಾರಿ ಪ್ರಮಾಣದ ‘ಮಾವಾ’ ಜಪ್ತಿ
ಸಾರ್ವಜನಿಕ ಆರೋಗ್ಯಕ್ಕೆ ತೀವ್ರ ಹಾನಿಕಾರಕವಾಗಿರುವ ‘ಮಾವಾ’ ನಿಯಂತ್ರಣಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಚಖಂಡಿ ತಾಂಡಾದ ಎರಡು ಕಡೆಗಳಲ್ಲಿ ಇಂದು ಪೊಲೀಸರು ಮಿಂಚಿನ ದಾಳಿ ನಡೆಸಿ, ಭಾರಿ ಪ್ರಮಾಣದ ಮಾವಾ ಹಾಗೂ ಕಚ್ಚಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಪೊಲೀಸರು ಒಟ್ಟು 250 ಪ್ಯಾಕೆಟ್ ಮಾವಾ, ಸುಮಾರು 7 ಕೆಜಿ ತೂಕದ ಮಾವಾ ಹಾಗೂ ಅದನ್ನು ತಯಾರಿಸಲು ಸಂಗ್ರಹಿಸಿಡಲಾಗಿದ್ದ 15 ಕೆಜಿ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ….
10 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್!
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ (IPS) ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspend) ಮಾಡಿ ಆದೇಶಿಸಿದ್ದಾರೆ. ಅಸಲಿಗೆ ನಡೆದಿದ್ದೇನು?ಕೋಯಂಬತ್ತೂರು ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯೊಬ್ಬಳನ್ನು…
ಮೊಬೈಲ್ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. : ರವಿ ಭಜಂತ್ರಿ
ಬೆಳಗಾವಿ, ಮೇ 24: “ಮೊಬೈಲ್ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. ಈ ವಯಸ್ಸಿನಲ್ಲಿ ಉತ್ತಮ ಆಹಾರ, ಸಮರ್ಪಕ ನಿದ್ರೆ ಮತ್ತು ಓದಿನತ್ತ ಗಮನ ಹರಿಸುವುದು ಅತ್ಯಗತ್ಯ. ವಿಶೇಷವಾಗಿ ಬೆಳಗಿನ ಓದು ಮನಸ್ಸಿನಲ್ಲಿ ಗಾಢವಾಗಿ ಉಳಿಯುತ್ತದೆ. ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಜ್ಞಾನ ಅಗತ್ಯ,” ಎಂದು ಬೆಳಗಾವಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಹೇಳಿದರು. ಬೆಳಗಾವಿಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ಮಹಾಂತೇಶನಗರ ವತಿಯಿಂದ 2026–27ನೇ ಸಾಲಿನ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಹತ್ತನೇ…
ಅನೈತಿಕ ಚಟುವಟಿಕೆಗಳ ಸ್ಥಾನವಾದ ಮುರಗೋಡ ಪ್ರವಾಸಿ ಮಂದಿರ!
ಗ್ರಾಮೀಣ ಮಟ್ಟದಲ್ಲಿ ಬರುವ ಪ್ರವಾಸಿಗರಿಗೆ ವಿಶ್ರಾಂತಿ ನೀಡಬೇಕೆಂಬ ಉದ್ದೇಶದಿಂದ ಸರಕಾರ ಸೇರಿದಂತೆ ನಾನಾ ಹೋಬಳಿ ಮಟ್ಟದಲ್ಲಿ ಲೋಕೊಪಯೋಗಿ ಇಲಾಖೆ ಮೂಲಕ ಪ್ರವಾಸಿ ಮಂದಿರ ನಿರ್ಮಿಸಿದೆ. ಆದರೆ ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದ ಪ್ರವಾಸಿ ತಾಣ ಸೂಕ್ತ ಸೌಕರ್ಯಗಳು ಇಲ್ಲದೇ ಪಾಳು ಬಿದ್ದಿದ ಮುರಗೋಡ ಗ್ರಾಮೀಣ ಮಟ್ಟದಲ್ಲಿ ಬರುವ ಪ್ರವಾಸಿಗರಿಗೆ ವಿಶ್ರಾಂತಿ ನೀಡಬೇಕೆಂಬ ಉದ್ದೇಶದಿಂದ ಸರಕಾರ ಮುರಗೋಡ ಸೇರಿದಂತೆ ನಾನಾ ಹೋಬಳಿ ಮಟ್ಟದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ. 1968ವಿಶ್ವಯಲ್ಲಿ ಶತಮಾನದ ಶಿವಯೋಗಿ ಮಹಾಂತ ಶಿವಯೋಗಿಗಳ ಅಮೃತ ಹಸ್ತದಿಂದ ಲೋಕೊಪಯೋಗಿ…
ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026 – ಮಿತಿಗಳನ್ನು ಮೀರಿ ಓಡಿ!
ಬೆಂಗಳೂರಿನ ಓಟಗಾರರ ಸಮೂಹವು ನಗರದ ಅತ್ಯಂತ ರೋಮಾಂಚಕ ಫಿಟ್ನೆಸ್ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ‘ಫ್ರೀಡಂ ಹೆಲ್ತಿ ಕುಕಿಂಗ್ ಆಯಿಲ್’ ಪ್ರಸ್ತುತಪಡಿಸುವ ‘ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026’ ಮೇ 24, 2026 ರಂದು ಮರುಳುತ್ತಿದ್ದು, ಈಗಾಗಲೇ 6000ಕ್ಕೂ ಹೆಚ್ಚು ಸ್ಪರ್ಧಿಗಳು ನೋಂದಾಯಿಸಿಕೊಂಡಿದ್ದಾರೆ! ಬೆಂಗಳೂರಿನ ಐತಿಹಾಸಿಕ ನೈಸ್ ರಸ್ತೆ ಮಾರ್ಗದಲ್ಲಿ ನಡೆಯಲಿರುವ ಈ ಕ್ರೀಡಾಕೂಟವು ಅಥ್ಲೀಟ್ಗಳು, ಫಿಟ್ನೆಸ್ ಪ್ರೇಮಿಗಳು, ಕಾರ್ಪೊರೇಟ್ ತಂಡಗಳು, ರನ್ನಿಂಗ್ ಕ್ಲಬ್ಗಳು ಮತ್ತು ಮೊದಲ ಬಾರಿಗೆ ಭಾಗವಹಿಸುತ್ತಿರುವ ಓಟಗಾರರಿಗೆ ವಿಶ್ವದರ್ಜೆಯ ಅನುಭವವನ್ನು ನೀಡಲಿದೆ. ಸ್ಪರ್ಧಿಗಳು ವೃತ್ತಿಪರ ಟೈಮಿಂಗ್…
