BREAKING NEWS

ಸೇವಾಸಪ್ತಾಹದ ನಿಮಿತ್ತ ವೃಕ್ಷಾರೋಪನ ಕಾರ್ಯಕ್ರಮ

ವಿಶ್ವಹಿಂದೂ ಪರಿಷತ್ – ಬಜರಂಗದಳ ರಾಮದುರ್ಗ ಪ್ರಖಂಡದ ವತಿಯಿಂದ ಸೇವಾಸಪ್ತಾಹದ ನಿಮಿತ್ತವಾಗಿ ತಾಲೂಕಿನ ಎಲ್ಲ ಸಮಿತಿ ಕೇಂದ್ರಗಳಲ್ಲಿ ವೃಕ್ಷಾರೋಪನ ಕಾರ್ಯಕ್ರಮ ನೆರವೇರಿಸಲಾಯಿತು, ಈ ಭಾಗವಾಗಿ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರಜ್ಞೆ ಮೆರೆಯಲಾಯಿತು ಹಾಗೂ ಶಾಲಾ ಮಕ್ಕಳಿಗೆ ಪ್ರಕೃತಿ ಉಳಿಸುವ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಪದಾಧಿಕಾರಿಗಳು ವಿಜಯೇಂದ್ರ ಜೋಷಿ, ಪ್ರಕಾಶ ಸೂಳಿಬಾವಿ, ಸುನಿತಾ ತಿಮ್ಮನಗೌಡರ, ಅನಸೂಯಾ ಬಸನಗೌಡರ, ಮಾಜಿ ಸೈನಿಕರು ರಮೇಶ ಆರೀಬೆಂಚಿ, ಪ್ರೌಢಶಾಲೆಯ…

Read More

ಸವದತ್ತಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 11-07-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್‍ ಅದಾಲತ್‍ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 7263 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 1437 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ, ಪಕ್ಷಗಾರರ ನ್ಯಾಯಾಲಯದ ದೀರ್ಘಾವಧಿಯ ಪ್ರಕ್ರಿಯೆ ಮತ್ತು…

Read More

ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂದೆ ಹಾಗೂ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ದ್ವಿಚಕ್ರ ವಾಹನ ಸವಾರರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಿ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ವಯಂ ಚಾಲಿತವಾಗಿ ಆಟೋಮೆಟಿಕ್ ದಂಡ ದಾಖಲಾಗುವುದು ದಂಡಪಾವತಿಸಲು ನಿಮ್ಮ ವಿಳಾಸಕ್ಕೆ ನೇರವಾಗಿ ನೋಟಿಸ್ ಬರುವುದು. ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ಮತ್ತು ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಆಟೋಮೇಟೆಡ್ ಸಿಸಿಟಿವಿ (Automated CCTV) ಕ್ಯಾಮೆರಾಗಳನ್ನು ಸರ್ಕಾರಿ ಆಸ್ಪತ್ರೆ ಮುಂದೆ…

Read More

ವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುವರ್ಣಸೌಧದ ಆವರಣದಲ್ಲಿರುವ “ವಿಜ್ಞಾನ ವನ”ಕ್ಕೆ ಗುರುವಾರ ಭೇಟಿ ನೀಡಿದರು. ಮಕ್ಕಳು ಹಾಗೂ ಸಾರ್ವಜನಿಕರು ಆಟದೊಂದಿಗೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ವಿವಿಧ ಪರಿಕರಗಳನ್ನು ಅಳವಡಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿಜ್ಞಾನ ವನದಲ್ಲಿ ಸಸಿ ನೆಟ್ಟು ನೀರೆರೆದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ವಿಜ್ಞಾನ ವನದ ವಿಶೇಷತೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಗಣೇಶ…

Read More

ಕುಡಿಯುವ‌ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ಬೆಳಗಾವಿ, ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ‌ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನವನ್ನು ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ (ಜು.09) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ‌…

Read More

ಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ‌ಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ(ಜು.9) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ…

Read More

ಶ್ವಾಸ ಯೋಗ ಕೇಂದ್ರದಿಂದ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಪ್ರದಾನ

ಬೆಂಗಳೂರು | 5 ಜುಲೈ 2026 — ಮಾನವ ಕಲ್ಯಾಣ, ಉಸಿರಾಟ ಜಾಗೃತಿ, ಮಾನಸಿಕ-ದೈಹಿಕ ಸಹಿಷ್ಣುತೆ ಹಾಗೂ ಯೋಗಪ್ರೇರಿತ ಜೀವನಶೈಲಿಯ ಜಾಗತಿಕ ಪ್ರಸಾರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ, ಶ್ವಾಸ ಯೋಗ ಕೇಂದ್ರವು ವಿಶ್ವಪ್ರಸಿದ್ಧ ಉಸಿರಾಟ ಸಾಧಕ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಅನ್ನು ಪ್ರದಾನ ಮಾಡಿತು. ಈ ಪ್ರತಿಷ್ಠಿತ ಗೌರವ ಸಮಾರಂಭವು ಶ್ವಾಸಗುರುಗಳೆಂದೇ ಖ್ಯಾತರಾದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ…

Read More

ಬೆಳಗಾವಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ಬೆಳಗಾವಿ, : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾಇ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಮಂಗಳವಾರ (ಜು.7) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ…

Read More

ಕಿತ್ತೂರ ರಸ್ತೆಯ ಬಸವಣಕಟ್ಟೆ ಸೇತುವೆ ಬಳಿ ನವಜಾತ ಶಿಶು ಬಿಟ್ಟು ಹೋದ ಘಟನೆ ನಡೆದಿದೆ !

ಸಮಯಕ್ಕೆ ಸರಿಯಾಗಿ ಶಿಶುವಿನ ಅಳುವಿನ ಶಬ್ದವನ್ನು ಗಮನಿಸಿ ರಕ್ಷಣೆ ಮಾಡಿದ ಕಿತ್ತೂರಿನ ಗ್ರಾಮಸ್ಥರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ನರಗುಂದ ರಸ್ತೆಯ ಬಸವಣಕಟ್ಟೆ ಸೇತುವೆ ಕೆಳಭಾಗದಲ್ಲಿ ನವಜಾತ ಶಿಶು ಬಿಟ್ಟು ಹೋದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಿತ್ತೂರಿನ ಗ್ರಾಮಸ್ಥರು ಬೆಳಗಿನ ವೇಳೆ ಸೇತುವೆ ಸಮೀಪ ತೆರಳಿದ್ದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಅನುಮಾನಗೊಂಡ ಅವರು ಶಬ್ದ ಬಂದ ದಿಕ್ಕಿನಲ್ಲಿ ತೆರಳಿ ಪರಿಶೀಲಿಸಿದಾಗ, ಸೇತುವೆಯ ಕೆಳಭಾಗದಲ್ಲಿ ನವಜಾತ…

Read More

ವಿಕಸಿತ ಭಾರತ – ಜಿ ರಾಮ್ ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ :ಇಒ ಮಹಮ್ಮದ್ ಇಜಾನ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕಾ ಮಿಷನ್’ ಯೋಜನೆಯಡಿ ಗ್ರಾಮೀಣ ಭಾಗದ ಶ್ರಮಿಕರಿಗೆ ಮತ್ತಷ್ಟು ಆರ್ಥಿಕ ಭದ್ರತೆ ನೀಡುವ ನಿಟ್ಟಿನಲ್ಲಿ, ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ರಾಮದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹಮ್ಮದ್ ಇಜಾನ ಅವರು ತಿಳಿಸಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಒಟ್ಟು 40887 ಸಕ್ರಿಯ ಕೂಲಿ ಕಾರ್ಮಿಕರಿದ್ದು, ಒಟ್ಟಾರೆ 99.25 ಪ್ರತಿಶತ ekyc ಪ್ರಗತಿ ಸಾಧಿಸಲಾಗಿದ್ದು, ಬಾಕಿ ಉಳಿದ…

Read More