BREAKING NEWS

ಅರಹುಣಸಿ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾದ ಬುದ್ಧಿಮಾಂದ್ಯ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ, ಸುರಕ್ಷಿತ ಗರ್ಭಪಾತದ ನಂತರ ಚೇತರಿಸಿಕೊಳ್ಳುತ್ತಿರುವ ಬುದ್ಧಿಮಾಂದ್ಯ ಸಂತ್ರಸ್ತ ಯುವತಿಯ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ನೇರ ಭೇಟಿ ನೀಡಿದರು.​ಗ್ರಾಮದ ರೇಗಡ ರಸ್ತೆಯ ಬಳಿಯಿರುವ ರೇಕ್ ಪತ್ರೆಯ ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಭೇಟಿಯಾದ ಆಯೋಗದ ಅಧ್ಯಕ್ಷರು, ಸಂತ್ರಸ್ತೆಯ ಕೈ ಹಿಡಿದು ಆತ್ಮಸ್ಥೈರ್ಯ ತುಂಬುವ ಸಾಂತ್ವನದ ಮಾತುಗಳನ್ನಾಡಿದರು. ಭೇಟಿಯ…

Read More

ಲಿಂಗಾಯತ ಸಂಘಟನೆ ವತಿಯಿಂದ ಗುರುಪೂರ್ಣಿಮೆ ಕಾರ್ಯಕ್ರಮ – ಜೀವನದ ಅರಿವಿಗೆ ಮತ್ತು ಗುರಿಗೆ ಗುರು ಮುಖ್ಯ -ಸುಶೀಲಾ ಗುರವ.

ಸುನೀಲ ಸಾಣಿಕೊಪ್ಪ, ನಂದಾ ಬಗಲಿ,ಸೋಮಶೇಖರ ವಾಲಿ ಇಟಗಿ,ಶಿವಾನಂದ ನಾಯಕ,ಬಾಬು ತಿಗಡಿ,ಲಕ್ಷ್ಮೀ ಜವಣಿ, , ಸೋಮಶೇಖರ ಹೊಸಮನಿ, ಶಿವಾನಂದ ನಾಯಕ,ಸಂಗಮ ಹಿರೇಮಠಚನಪ್ಪ ನರಸನ್ನವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಹಾದೇವಿ ಅರಳಿ ವಚನ ಪ್ರಾರ್ಥನೆಯೊಂದಿಗೆ ಸ್ವಾಗತಿಸಿದರು. ಸಂಗಮೇಶ ಅರಳಿ ನಿರೂಪಿಸಿದರು. ಸುರೇಶ ನರಗುಂದ ವಂದಿಸಿದರು.

Read More

ಆಶಾಡ ಮಾಸದ ಹುಣ್ಣಿಮೆಯ ಗುರುಪೂರ್ಣಿಮಾ ಕಾರ್ಯಕ್ರಮ

ಓಂ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಕಮಿಟಿ ಎಲ್ಲ ಸರ್ವ ಸದಸ್ಯರು ಹಾಗೂ ರಾಮದುರ್ಗದ ಎಲ್ಲ ಸಮಾಜದ ಸರ್ವ ಸದಸ್ಯರು ಕೂಡಿಕೊಂಡು ಆಶಾಡ ಮಾಸದ ಹುಣ್ಣಿಮೆಯ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಶ್ರೀ ಸತ್ಯನಾರಾಯಣ ಸ್ವಾಮಿಯ ಪೂಜೆಯನ್ನು ನೆರವೇರಿಸಿ ರಾಮದುರ್ಗ ನಗರದ ದೇವಸ್ಥಾನಗಳ ಎಲ್ಲಾ ಗುರುಗಳನ್ನು ಕರೆಸಿ ಅವರ ಪಾದಗಳ ಪೂಜೆಯನ್ನು ಮಾಡಿ ಸನ್ಮಾನಿಸಿ ಗುರುದಕ್ಷಿಣೆಯನ್ನು ನೀಡಲಾಯಿತು ಅಲ್ಲದೆ ರಾಮದುರ್ನಗರದ ಎಲ್ಲ ಸಮಾಜದ ಹಿರಿಯರು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಲು ನೆರವು ನೀಡಿದರು ಈ ಕಾರ್ಯಕ್ರಮದಲ್ಲಿ…

Read More

ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ 6 ಪಿಡಿಒ, ಇಬ್ಬರು ಕಾರ್ಯದರ್ಶಿ, ಎಸ್ ಡಿಎ ಅಮಾನತು

ಬೆಂಗಳೂರು : ಕೆಲಸದ ಅವಧಿ ಗ್ರಾ.ಪಂ. ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಮಾಧ್ಯಮ ವರದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 6 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ…

Read More

ರಾಮದುರ್ಗ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಬೃಹತ್ ತಿರಂಗಾ ಯಾತ್ರೆ, ಬೈಕ್ ರ್ಯಾಲಿ ಹಾಗೂ ಪಥಸಂಚಲನದ ಮೂಲಕ ದೇಶಭಕ್ತಿ ಸಾರಿದ ಮಾಜಿ ಯೋಧರು ಕಾರ್ಗಿಲ್ ವೀರರನ್ನು ಸ್ಮರಿಸಿದರು. ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಶೌರ್ಯವನ್ನು ಸ್ಮರಿಸುವ ಉದ್ದೇಶದಿಂದ ರಾಮದುರ್ಗದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್…

Read More

ಹಲಗತ್ತಿ ಎಸ್.ಐ.ಆರ್. ನೂರಕ್ಕೆ ನೂರರಷ್ಟು ಸಾಧನೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿಹಲಗತ್ತಿ BLO ಮತ್ತು BLA ರವರ ಸಭೆಯನ್ನು ಎಸ್ ಎಸ್ ಗೋರವನಕೊಳ್ಳ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಹಲಗತ್ತಿ ಗ್ರಾಮದ ಮೂರು ವಾರ್ಡಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯವನ್ನು ನೂರಕ್ಕೆ ನೂರರಷ್ಟು ಯಶಸ್ವಿಯಾಗಿ ಮುಗಿಸಿದ ಹಲಗತ್ತಿ ಗ್ರಾಮದಬಿ ಎಲ್ ಓ ಗಳಾದ ಎಸ್ ಜಿ ರಾಠೋಡ, ಎಸ್ ಎಸ್ ಸಜ್ಜನ, ಬಿ ಎಂ ವಾಲಿಕಾರ, ವ್ಹಾ ಎಸ್ ಪಾಟೀಲ, ಅಂಗನವಾಡಿ…

Read More

‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ನಿರಂತರವಾಗಿ ಕೂಲಿ ಕೆಲಸ ಒದಗಿಸಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ…

Read More

ವಿಮುಕ್ತ ದೇವದಾಸಿ ತಾಯಂದಿರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಗದಗ ವಿಮುಕ್ತ ದೇವದಾಸಿ ತಾಯಂದಿರ ಸಮಗ್ರ ಅಭಿವೃದ್ಧಿ ಹಾಗೂ ಸಬಲೀಕರಣಕ್ಕಾಗಿ ಸರಕಾರ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟ ಕರ್ನಾಟಕ ಹಾಗೂ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಗದಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ದೇವದಾಸಿ ಪದ್ಧತಿಯಿಂದ ವಿಮುಕ್ತರಾದ ಮಹಿಳೆಯರು ಹಾಗೂ ಅವರ ಮಕ್ಕಳು ಇಂದಿಗೂ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ಪ್ಯಾಕೇಜ್…

Read More

ಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆ

ದೆಹಲಿ ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಜತೆ ಚರ್ಚೆ ನಡೆಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಿಎಂ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಂಸದರ ಜೊತೆಗಿನ ಸಭೆಯಲ್ಲಿ ಈ ಯೋಜನೆಗಳ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಲಾಯಿತು. “ರಾಜ್ಯದ…

Read More

ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್

ಬೆಳಗಾವಿ ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ…

Read More