ಅತಿಥಿ ಉಪನ್ಯಾಸಕರ ಸೇವೆ ಅನನ್ಯ- ಡಾ ರಾಜು ಕಂಬಾರ
ರಾಮದುರ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಅನನ್ಯವಾದದ್ದಾಗಿದೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘಟನೆಯ ಮುಖಂಡ ಡಾ. ರಾಜು ಕಂಬಾರ ಹೇಳಿದರು.ಪಟ್ಟಣದ ಎಸ್ಐಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅತಿಥಿ ಉಪನ್ಯಾಸಕ ಶಂಕರ ಚುಳುಕಿ ಅವರನ್ನು ಸತ್ಕರಿಸಿ,ಅಭಿನಂದನೆ ಸಲ್ಲಿಸಿ ಮಾತನಾಡಿದ ಕಂಬಾರರು, ರಾಜ್ಯದಲ್ಲಿ ಸುಮಾರು 10000 ಮೇಲ್ಪಟ್ಟು ಅತಿಥಿ ಉಪನ್ಯಾಸಕರು ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಾ, ಉನ್ನತ ಶಿಕ್ಷಣಕ್ಕೆ…
𝟭𝟬𝟬 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ‘ತಿರುಪತಿ ವೆಂಕಟೇಶ್ವರ’ ದೇವಸ್ಥಾನ: 𝗧𝗧𝗗 ಗೆ 𝟳 ಎಕರೆ ಭೂಮಿ ಹಸ್ತಾಂತರ: ಟಿಟಿಡಿ ಸದಸ್ಯ ಎಸ್ ನರೇಶ್ಕುಮಾರ್
ಬೆಳಗಾವಿ ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ. (𝗥𝘀. 𝟭𝟬𝟬 𝗖𝗿𝗼𝗿𝗲) ವೆಚ್ಚದಲ್ಲಿ ಭವ್ಯವಾದ ‘ತಿರುಪತಿ ವೆಂಕಟೇಶ್ವರ ದೇವಸ್ಥಾನ’ ತಲೆ ಎತ್ತಲಿದೆ. ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ತಿರುಮಲ ತಿರುಪತಿ ದೇವಸ್ಥಾನ (𝗧𝗶𝗿𝘂𝗺𝗮𝗹𝗮 𝗧𝗶𝗿𝘂𝗽𝗮𝘁𝗶 𝗗𝗲𝘃𝗮𝘀𝘁𝗵𝗮𝗻𝗮𝗺𝘀 – 𝗧𝗧𝗗) ಆಡಳಿತ ಮಂಡಳಿಗೆ 𝟳 ಎಕರೆ (𝟳 𝗔𝗰𝗿𝗲𝘀) ಭೂಮಿಯನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕರ್ನಾಟಕ ರಾಜ್ಯ ರಡ್ಡಿ ಜನಸಂಘದ ಅಧ್ಯಕ್ಷರಾದ ಲಕ್ಷ್ಮಣ ರೆಡ್ಡಿ…
ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆಡಾ.ರಾಜ್ ಕುಮಾರ ಅಭಿನಯದ ಸಿನಿಮಾ ಗೀತೆಗಳ ಗಾಯನಕ್ಕೆ ಸಾರ್ವಜನಿಕರಿಗೆ ಅವಕಾಶ
ವಿಜಯಪುರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 9ಗಂಟೆಗೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜನೆ ಮಾಡಲಾದ ವರನಟ ಡಾ.ರಾಜಕುಮಾರ್ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅವರ ಚಲನಚಿತ್ರ ಗೀತೆಗಳ ಪ್ರಸ್ತುತಪಡಿಸಲು ಆಸಕ್ತ ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.ವಯಸ್ಸಿನ ಮಿತಿ ಇರುವುದಿಲ್ಲ. ಪ್ರಸ್ತುತಿಯ ಸಮಯದ ಮಿತಿ ಇದೆ. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶವಿದ್ದು,ಆಯೋಜಕರ ನಿರ್ಣಯವೇ ಅಂತಿಮವಾಗಿದ್ದು,ತಮ್ಮ ಹೆಸರು ಮತ್ತು ಪೂರ್ಣ…
“ವಚನ ಸಾಹಿತ್ಯದಲ್ಲಿ ವೈದ್ಯ ವಿಜ್ಞಾನ”
ಡಾ, ಭವ್ಯಾ ಸಂಪಗಾರ, ವಚನ ಸಾಹಿತ್ಯದಲ್ಲಿ ಪರಮ ಜ್ಞಾನಿಗಳಾದ ಶರಣ ಸಂಕುಲವು ವಿವಿಧ ವಿಷಯಗಳ ಬಗ್ಗೆ ಅಂದರೆ ಖಗೋಳ, ಆರೋಗ್ಯ, ಸಾಮಾಜಿಕತೆ, ದಾಂಪತ್ಯ,ಇಂದ್ರಿಯಾತೀತ ಜ್ಞಾನಗಳನ್ನು ನಮಗೆ ತಿಳಿಸಿದ್ದಾರೆ. ಆಧುನಿಕ ಅತ್ಯದ್ಬುತ ಅನ್ವೇಷಣೆಗಳಲ್ಲಿ ಅತ್ಯಂತ ಶ್ರೇಷ್ಠ ಮತ್ತು ಉಪಯುಕ್ತವಾದ ವೈದ್ಯೆ ವಿಜ್ಞಾನದ ಆಳವಾದ ಅಧ್ಯಯನವನ್ನು ಹನ್ನೇರಡನೆ ಶತಮಾನದಲ್ಲಿ ಶರಣರು ಮಾಡಿದ್ದಾರೆ ಎನ್ನಲು ಲಭ್ಯವಾಗಿರುವ ವಚನಗಳೆ ಸಾಕ್ಷಿ ಎಂದರು. ಹಲವಾರು ಶರಣರ ವಚನಗಳನ್ನು ವಿವರಿಸುತ್ತಾ . “ಕಾಯವಿದ್ದು ಕಾಬುದು ವಿಜ್ಞಾನ, ಜೀವವಿದ್ದು ಕಾಬುದು ಸುಜ್ಞಾನ “ ಎಂಬ ವಚನವನ್ನು ವಿವರಿಸುತ್ತಾ…
ಶಿರಸಂಗಿ : ಇನಾಂಗೋವನಕೊಪ್ಪ ಗ್ರಾಮದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ವಾಸ್ತುಶಾಂತಿ, ಉದ್ಘಾಟನೆ, ನೂತನ ರಾಜ ಗೋಪೂರದ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ಏಪ್ರಿಲ್ 20ರಿಂದ ಏಪ್ರಿಲ್ 29 ರವರೆಗೆ ಜರಗುವುದು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಇನಾಂಗೋವನಕೊಪ್ಪ ಗ್ರಾಮದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ವಾಸ್ತುಶಾಂತಿ, ಉದ್ಘಾಟನೆ, ನೂತನ ರಾಜ ಗೋಪೂರದ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಏಪ್ರಿಲ್ 20ರಿಂದ ಏಪ್ರಿಲ್ 29 ರವರೆಗೆ ಜರಗುವುದು. ಸೋಮವಾರ ದಿ: 20-4-2026, ಮುಂಜಾನೆ 10-00 ಗಂಟೆ. ನವಗೃಹ ಹಾಗೂ ಘನ ಹೋಮ & ಹವನ ಶ್ರೀ ದೇವಿಯ ಮೂರ್ತಿಗೆ ರುದ್ರಾಭಿಷೇಕ ಹಾಗೂ ಗೋಮಾತೆಯ ಪೂಜೆಯ ನಂತರ ದೇವಸ್ಥಾನದ ಉದ್ಘಾಟನೆ ನಂತರ ನೂತನ…
ಶಿರಸಂಗಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ.,ಶಿರಸಂಗಿ ಇವರ ವತಿಯಿಂದ ಬೆಳೆಸಾಲ ವಿತರಣೆ ಕಾರ್ಯಕ್ರಮ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಪಾಂಡುರಂಗ ದೇವಸ್ಥಾನ ಸಮುದಾಯ ಭವನದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ.,ಶಿರಸಂಗಿ ಇವರ ವತಿಯಿಂದ ಬೆಳೆಸಾಲ ವಿತರಣೆ ಕಾರ್ಯಕ್ರಮವನ್ನು ಬೆಳಗಾವಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು ವಿರೂಪಾಕ್ಷಣ್ಣ ಕ. ಮಾಮನಿ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಒಬ್ಬ ರೈತರಿಗೆ ಒಂದು ಎಕರೆಗೆ ಒಣ ಬೇಸಾಯ 35 ಸಾವಿರ ಹಾಗೂ ನೀರಾವರಿ ಕಬ್ಬು 40 ಸಾವಿರ ಬೆಳೆಸಾಲ ವಿತರಣೆ ಮಾಡಬಹುದು ಅದನ್ನು ಹೆಚ್ಚು ಮಾಡಲು…
ಹೊಸೂರ ಗ್ರಾಮದಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡ ಘಟನೆ
ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತ ಮಹಾಂತೇಶ ರುದ್ರಯ್ಯ ಹಿರೇಮಠ ಅವರಿಗೆ ಸೇರಿದ ಬಾವಿಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಉಂಟುಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಒಂದು ಮೊಸಳೆಯನ್ನು ಯಶಸ್ವಿಯಾಗಿ ಹಿಡಿದಿದ್ದಾರೆ.
ರಾಮದುರ್ಗ ತೇರ್ ಬಜಾರ ಅಂಚೆ ಕಚೇರಿ ವಿಲೀನ ವಿರೋಧಿಸಿ ವಿಜಯ ಸೇನಾ ಸಮಿತಿ ವತಿಯಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರ (ಯಾನಮಪೇಟೆ) ದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೌನ್ ಅಂಚೆ ಕಚೇರಿಯನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರು ಹಾಗೂ ವಿಜಯ್ ಸೇನಾ ಸಮಿತಿ ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಗೊಂಡಿದೆ. ಏಪ್ರಿಲ್ 16 ರಂದು ಬೆಳಿಗ್ಗೆಯಿಂದ ರಾಮದುರ್ಗ ಪ್ರಧಾನ ಅಂಚೆ ಕಚೇರಿಯ ಎದುರು ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಿಜಯ ಸೇನಾ ಸಮಿತಿಯ ಮುಖಂಡ ವಿಜಯ…
ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ಜಿಲ್ಲೆಯಲ್ಲಿ…
ಡಾ.ಬಿ.ಆರ್. ಅಂಬೇಡ್ಕರ್ ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ ಕೊಂಗಾಲಿ
ಬೆಳಗಾವಿ ಡಾ.ಬಿ.ಆರ್. ಅಂಬೇಡ್ಕರ್ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ಉಪ ಮಹಾಪೌರರಾದ ಹನುಮಂತ ಕೊಂಗಾಲಿ ಅವರು ನುಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಂಗಳವಾರ (ಏ.14) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ…
