BREAKING NEWS

ಪಡಿತರ ಅಕ್ಕಿ ಕಳ್ಳ ಸಾಗಟ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಿಂದ ಎಂಎಚ್ 13 ಎಎ 3745 ನೋಂದಣಿ ಸಂಖ್ಯೆಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಸುಮಾರು 8 ಲಕ್ಷ ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂಡಿ ಶಹರ ಪೊಲೀಸ್…

Read More

ಗೋಮಾಳ ಜಮೀನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿರುವ ಗೋಮಾಳ ಜಮೀನು ಸಂರಕ್ಷಣೆ ಮಾಡಲು ತಾಲೂಕಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ರೈತ ಮುಖಂಡರು ತಹಶೀಲಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು. ತಾಲೂಕಿನಲ್ಲಿರುವ ಗೋಮಾಳ, ಗೈರಾಣ ಜಮೀನುಗಳನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ಕೇಳಿ ಬರುತ್ತಿದೆ. ಆದರೆ ಗೋಮಾಳ ಪೂರ್ವಜರ ಜಮೀನುಗಳು ಕಾಲದಿಂದಲೂ ಗೋವುಗಳು ಮೇಯಲು ಸಹಕಾರಿಯಾಗಿದ್ದವು.ಇಂದು ಗೋಮಾಳ ಜಮೀನು ಬೇರೆ ಉದ್ದೇಶಕ್ಕೆ ನೀಡಿದ್ದು, ಜಾನುವಾರುಗಳ ಮೇಯಲು ಇಲ್ಲದಂತಾಗಿದೆ. ಶೀಘ್ರದಲ್ಲಿ ಬೇರೆ ಉದ್ದೇಶಗಳಿಗೆ…

Read More

ಬೆಳಗಾವಿ ಜಿಲ್ಲೆಯ ರಣಕುಂಡೆ ಗ್ರಾಮದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.

ಅಬಕಾರಿ ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 205 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 3 ಲಕ್ಷ 12 ಸಾವಿರ ರೂಪಾಯಿಗಳು ಎಂದು ತಿಳಿದುಬಂದಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕಾರು ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಅಬಕಾರಿ ಪೊಲೀಸರು ಮದ್ಯದೊಂದಿಗೆ ಸಾಗಾಟಕ್ಕೆ ಬಳಸಿದ್ದ ಕಾರನ್ನು ಸಹ ಸೀಜ್ ಮಾಡಿದ್ದಾರೆ. ಈ ಘಟನೆಯು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Read More

ಲಿಂಗಾಯತ ಸಂಘಟನೆ ವತಿಯಿಂದ ಚಿಂತನ ಕಾರ್ಯಕ್ರಮ – ಸತಿಪತಿಯರ ಭಾಂದವ್ಯದಲ್ಲಿದೆ ಸಾಮಾಜಿಕ ಸಾಮರಸ್ಯ- ಸಾಹಿತಿ ಶ್ರೀಕಾಂತ ಶಾನವಾಡ.

ಸತಿಪತಿಯರಲ್ಲಿ ಅನ್ಯೋನ್ಯತೆ, ಸಾಮರಸ್ಯ ಭಾವನೆಯ ಬಾಂಧವ್ಯ, ಸಹಾನುಭೂತಿ, ಕುಟುಂಬದ ಕಳಕಳಿ ಇದ್ದರೆ ಅದು ಸಾಮಾಜಿಕ ಸಾಮರಸ್ಯಕ್ಕೆ ನಾಂದಿಯಾಗುತ್ತದೆ. ಆದಕಾರಣ ಸತಿಪತಿಯರ ಭಾವ ಬಂಧ ಅತಿ ಪ್ರಮುಖವಾಗಿದೆ ಎಂದು ಸಾಹಿತಿ ಶ್ರೀಕಾಂತ ಶಾನವಾಡ ರವಿವಾರ ದಿ. 22 ರಂದು ಬೆಳಗಾವಿ ನಗರದ ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆಯ ವತಿಯಿಂದ ಹಮ್ಮಿಕೊಳ್ಳಲಾದ ವಾರದ ಪ್ರಾರ್ಥನೆ ಮತ್ತು ಚಿಂತನ ಕಾರ್ಯಕ್ರಮದಲ್ಲಿ ‘ದಾಂಪತ್ಯ ಧರ್ಮ’ ವಿಷಯ ಕುರಿತು ಮಾತನಾಡಿದರು.ಇತ್ತಿಚಿನ ದಿನಗಳಲ್ಲಿ ಸಾಮಾಜಿಕ, ಕೌಟುಂಬಿಕ ಸ್ಥಿತಿ ಹದಗೆಡಲು ಭಿನ್ನಾಭಿಪ್ರಾಯಗಳೇ ಕಾರಣವಾಗಿದೆ 12ನೇ ಶತಮಾನದಲ್ಲಿ ಶರಣರ…

Read More

ಹುಬ್ಬಳ್ಳಿಯಲ್ಲಿ ಬಾರಿ ಅಗ್ನಿ ಅವಘಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿಗೆ ಬೆಂಕಿ.

ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೋದಾಮಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಅಗ್ನಿ ಅವಘಡ. ಕುಸುಗಲ್ ರಸ್ತೆಯ ಝಡೀಕೋ ಎಂಟರ್ ಪ್ರೈಸಸ್ ಮನೆ ಬಳಕೆಯ ಸಾಮಾನುಗಳ ಗೋದಾಮಿಗೆ ಶಾರ್ಟ್ ಸಕ್ರೂಟ್ ನಿಂದ ಬೆಂಕಿ ತಗುಲಿ ಕೋಟ್ಯಾಂತರ ರೂಪಾಯಿಯ ವಸ್ತುಗಳು ಸುಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಉಣಕಲ್ ಮಾಲೀಕರಾದ ರವಿ ಜೈನ್ ಎಂಬುವರಿಗೆ ಸೇರಿದ ಎಲೆಕ್ಟ್ರಾನಿಕ್ ಗೋದಾಮಾಗಿದ್ದು, ಏಕಾಏಕಿ ಬೆಂಕಿ ತಗುಲಿದೆ.ಗೋದಾಮಿನಲ್ಲಿದ್ದ ಟಿವಿ, ಎಸಿ ಮತ್ತು ರೆಫ್ರಿಜರೇಟರ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿಗಳ ನಷ್ಟ…

Read More

ಜಿಲ್ಲೆಯ ಎಲ್ಲ ರೈತರು ಫ್ರೂಟ್ಸ್ ಐಡಿ ಮತ್ತು ನೋಂದಣಿ ಸಂಖ್ಯೆ ಹೊಂದುವುದು ಹಾಗೂ ತಮ್ಮ ಎಲ್ಲ ಭೂ ಹಿಡುವಳಿಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ಜೋಡಣೆ ಮಾಡುವುದು ಕಡ್ಡಾಯ:ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ ಫ್ರೂಟ್ಸ್ ತಂತ್ರಾಂಶದಲ್ಲಿ ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 2.42 ಲಕ್ಷ ರೈತರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 1.66 ಲಕ್ಷ ರೈತರು ಭೂ ಹಿಡುವಳಿಗಳನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿನ ಎಲ್ಲಾ ಭೂಹಿಡುವಳಿ ಹೊಂದಿರುವ ರೈತರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಮತ್ತು ಫ್ರೂಟ್ಸ್ ನೋಂದಣಿ ಸಂಖ್ಯೆ (ಎಫ್‍ಐಡಿ) ಗಳಿಗೆ ರೈತರ ಎಲ್ಲಾ ಭೂ ಹಿಡುವಳಿಗಳನ್ನು ಜೋಡಣೆ ಮಾಡುವುದು ಅವಶ್ಯವಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಫ್ರೂಟ್ಸ್ (State…

Read More

ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಳಗಾವಿ, ಚನ್ನಮ್ಮನ ಕಿತ್ತೂರು : ಸಮೀಪದ ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.ಸುಮಾರು 5 ರಿಂದ 6 ದಿನಗಳ ಹಿಂದೆ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯ ವ್ಯಾಪ್ತಿಯ ಗೋವಿನ ಜೋಳದ ಜಮೀನಿನಲ್ಲಿ ಒರ್ವ ವ್ಯಕ್ತಿಯನ್ನು ಕೊಲೆ ಮಾಡಿ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್‌, ಡಿವೈಎಸ್ಪಿ ವೀರಯ್ಯ ಹಿರೇಮಠ, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ…

Read More

ಉಮೇಶ ಕುಶಾಲ ಬಡಿಗೇರ ಬಾವಿಯಲ್ಲಿ ತನ್ನಷ್ಟಕ್ಕೆ ತಾನೆ ಜಿಗಿದು ಆತ್ಮಹತ್ಯೆ ಮಾಡಿಕೊಂಡು ಮರಣ ಹೊಂದಿರುತ್ತಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ನಗರದ ಉಮೇಶ ಕುಶಾಲ ಬಡಿಗೇರ ವಯಸ್ಸು 34 ವರ್ಷ ಉದ್ಯೋಗ ಬಡಿಗತನ ಸಾ: ರಾದಾಪೂರಪೇಠ, ರಾಮದುರ್ಗ ಇವನು ಸುಮಾರು 4-5 ವರ್ಷಗಳಿಂದ ಅತಿಯಾಗಿ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದನು.ದಿನಾಂಕ: 19/02/2026 ರಂದು ಮುಂಜಾನೆ 07:00 ಗಂಟೆ ಸುಮಾರಿಗೆ ಸರಾಯಿ ಕುಡಿದ ನಸೇಯಲ್ಲಿ ತನ್ನ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ರಾಮದುರ್ಗ ತನ್ನ ಮನೆಯಿಂದ ಹೋಗಿ ದಿನಾಂಖ: 19/02/2026 ರಂದು ಮುಂಜಾನೆ 07:00 ಗಂಟೆಯಿಂದ ದಿನಾಂಕ: 21/02/2026 ರಂದು ಮದ್ಯಾಹ್ನ 01:00 ಗಂಟೆಯ ನಡುವಿನ ಅವಧಿಯಲ್ಲಿ…

Read More

ಸವದತ್ತಿ ವಕೀಲರ ಸಂಘದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಛತ್ರಪತಿ ಶಿವಾಜಿ ಮಹಾರಾಜರು 1930ರ ಫೆಬ್ರವರಿ 19 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ಬಳಿ ಜನಿಸಿದರು. ಶಿವಾಜಿ ಮಹಾರಾಜರು ಜನಿಸಿದ ಈ ದಿನವನ್ನೇ ಶಿವಾಜಿ ಜಯಂತಿ ಎಂದು ನಡೆಸಿಕೊಂಡು ಬರಲಾಗುತ್ತಿದ್ದು, ಶಿವಾಜಿ ಜಯಂತಿಯನ್ನು ಫೆಬ್ರವರಿ 19ರಂದು ಆಚರಿಸಲಾಗುವುದು. ಬೆಳಗಾವಿ ಜಿಲ್ಲೆ ಸವದತ್ತಿ ನಗರದ ಶಿವಾಜಿ ಸರ್ಕಲ್ ನಲ್ಲಿ ಸವದತ್ತಿ ವಕೀಲರ ಸಂಘದಿಂದಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ಅಂಗವಾಗಿಶಿವಾಜಿ ಮಹಾರಾಜರ ಭಾವಚಿತ್ರ/ಪುತ್ಥಳಿಗೆ ಪುಷ್ಪಾರ್ಚನೆ, ಸಲ್ಲಿಸಿ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಈ ವೇಳೆ ವಕೀಲರ ಸಂಘದ…

Read More

SSLC, PUC ಪರೀಕ್ಷೆ 2026 ಪರೀಕ್ಷೆಗಳ ದಿನಾಂಕ ಘೋಷಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್ 24 ಕ್ಕೆ ಹೊರಬೀಳಲಿದೆ. ಮಂಗಳವಾರ ಶಿಕ್ಷಣ ಸಚಿವ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಸಿದ್ಧತೆ ಸಭೆ ನಡೆದಿದೆ. ಈ ವೇಳೆ ಪರೀಕ್ಷಾ ದಿನಾಂಕ, ಫಲಿತಾಂಶ ಪ್ರಕಟವಾಗುವ ಸಂಭಾವ್ಯ ದಿನಾಂಕ ಮತ್ತು ಪರೀಕ್ಷೆ-2 ರ ದಿನಾಂಕಗಳನ್ನು ಘೋಷಣೆ…

Read More