BREAKING NEWS

ಸವದತ್ತಿ ನ್ಯಾಯಾಲಯಗಳಲ್ಲಿ 3ನೇ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 19-09-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ಈ ವರ್ಷದ 3ನೇ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್‍ ಅದಾಲತ್‍ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 7345 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 594 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 220 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ…

Read More

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬ ಅರ್ಹ ಯುವ ಮತದಾರರೂ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಧಾರವಾಡ ಅಂಜುಮನ್ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಅಂಗವಾಗಿ ಸ್ವೀಪ್ ಸಮಿತಿ ವಿಶೇಷ ಅಭಿಯಾನ…

Read More

ಯರಗಟ್ಟಿ ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನೂತನ ಸರ್ಕಾರ…

Read More

ಪತ್ರಿಕೆ ವಿತರಿಸಲು ಹೋದ ಪತ್ರಕರ್ತರಿಗೆ ಅಯೋಗ್ಯ PDOನಿಂದ ಧಮಕಿ ಆರೋಪ..!

ಪತ್ರಿಕೆ ವಿತರಣೆಗೂ PDO ಪರ್ಮಿಷನ್ ಬೇಕಂತೆ..! ಸರ್ಕಾರಿ ಗುರುತಿನ ಚೀಟಿ ಧರಿಸದೆ “ನಾನೇ PDO” ಎಂದು ಅಧಿಕಾರದ ದರ್ಪ ಪ್ರದರ್ಶನ? ಸೊಂಡೆಕೊಪ್ಪ: ಪತ್ರಿಕೆ ವಿತರಣೆ ಮಾಡಲು ಸೊಂಡೆಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದ ಪತ್ರಕರ್ತರೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಶಿವಪ್ರಕಾಶ ಅವರು ಅನುಚಿತವಾಗಿ ವರ್ತಿಸಿ ಧಮಕಿ ಹಾಕಿದ್ದಾರೆ. ಪತ್ರಕರ್ತರು ಪತ್ರಿಕೆ ವಿತರಣೆ ಮಾಡುತ್ತಿದ್ದ ಸಂದರ್ಭದಲ್ಲಿ “ಪತ್ರಿಕೆ ವಿತರಿಸಲು ನನ್ನ ಪರ್ಮಿಷನ್ ಬೇಕು” ಎಂಬ ರೀತಿಯಲ್ಲಿ ಅಧಿಕಾರಿಯವರು ಪ್ರಶ್ನಿಸಿದ್ದಾರೆ ಎನ್ನಲಾಗಿದ್ದು, ಪಿಡಿಒ ಶಿವಪ್ರಕಾಶ ಪತ್ರಕರ್ತರು ಪತ್ರಿಕೆ ವಿತರಣೆ…

Read More

ರಾಮದುರ್ಗ ತಾಲೂಕು ಬರಪೀಡಿತ ಘೋಷಣೆ ಮಾಡಬೇಕೆಂದು ವಿಜಯ ಸೇನಾ ಸಮಿತಿ ವತಿಯಿಂದ ದಿನಾಂಕ. 26-09-2026 ರಂದು ರಾಮದುರ್ಗ ಬಂದಗೆ ಕರೆ

ನಮ್ಮ ರಾಮದುರ್ಗ ತಾಲೂಕಿಗೆ ಬರದ ಮಹಾ ಛಾಯೆ ಅಪ್ಪಳಿಸಿದ್ದು ಅದು ಸರ್ಕಾರಕ್ಕೆ ಕಾಣುತ್ತಿಲ್ಲ ಬರ ಅಧ್ಯಯನ ತಂಡ ಜಿಲ್ಲಾ ಉಸ್ತುವಾರಿ ಸಚಿವರಿಗೂ ಬರ ಕಂಡಿಲ್ಲ ಕೈಕಟ್ಟಿ ಕುಳಿತ ಎಲ್ಲ ಜನಪ್ರತಿನಿಧಿಗಳ ಕಣ್ಣು ತೆರೆಸಲಿಕ್ಕೆ ಈ ಹೋರಾಟ , ಬೃಹತ್ ಪ್ರತಿಭಟನೆ 26 ರಂದು ರಾಮದುರ್ಗ ಬಂದ್‌ಗೆ ಕರೆ ನೀಡಲಾಗಿದ್ದು ಎಲ್ಲ ಸಾರ್ವಜನಿಕರು, ಅನ್ನದಾತರು, ರೈತ ಸಂಘಟನೆಗಳು, ಎಲ್ಲ ಸಂಘ ಸಂಸ್ಥೆಗಳು, ಎಲ್ಲ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಈ ಹೋರಾಟದಲ್ಲಿ ಭಾಗವಹಿಸಿ ನಮ್ಮ ರೈತರಿಗಾಗಿ ನಿಮ್ಮ ಹೋರಾಟ…

Read More

ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಮರುಪರಿಶೀಲನೆ

ಧಾರವಾಡ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ಬಯೋಮೆಟ್ರಿಕ್ ದೃಢೀಕರಿಸುವ ಮೂಲಕ ಮರುಪರಿಶೀಲನೆ ನಡೆಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಗೃಹಲಕ್ಷ್ಮಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಿ, ಅವರ ಪ್ರಸ್ತುತ ಸ್ಥಿತಿಯನ್ನು ದೃಢಿಕರಿಸುವ ಉದ್ದೇಶದಿಂದ ಫಲಾನುಭವಿಗಳ ಮರುಪರಿಶೀಲನಾ ಕಾರ್ಯವನ್ನು ನಿಯೋಜಿತ ಗಣತಿದಾರರು (Enumerators)…

Read More

ಹಿರೇಮಾಗಿಯ ಶ್ರೀ ಮುತ್ತು ವಡ್ಡರ ಅವರ “ಮೌಲ್ಯದ ಮುತ್ತು” ನ್ಯಾನೋ ಕಥಾ ಕೃತಿ ಬಿಡುಗಡೆ

ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಮಳಗಾವಿಯ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಅವರು ರಚಿಸಿರುವ “ಮೌಲ್ಯದ ಮುತ್ತು” ಎಂಬ ನ್ಯಾನೋ ಕಥಾ ಸಂಕಲನವು ಇದೇ ದಿನಾಂಕ 13-9-2026 ರಂದು ರವಿವಾರ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಲಕಲ್ಲನಲ್ಲಿ ಪರಮಪೂಜ್ಯ ಶ್ರೀ ಡಾ.ಗುರು ಮಹಾಂತ ಮಹಾಸ್ವಾಮೀಜಿಗಳು ಬಿಡುಗಡೆಗೊಳಿಸಿದರು. ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವ 100ಕ್ಕೂ ಹೆಚ್ಚು ನ್ಯಾನೋ ಕಥೆಗಳನ್ನು ಈ ಕೃತಿ ಒಳಗೊಂಡಿದೆ. ಇಂದಿನ ಮೊಬೈಲ್ ಯುಗದಲ್ಲಿ…

Read More

ಬೆಳಗಾವಿ : ಅಕ್ಟೋಬರ್ 23 ರಿಂದ ಕಿತ್ತೂರ ಉತ್ಸವ -2026

ಬೆಳಗಾವಿ ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ 2026ರ ಕಿತ್ತೂರ ಉತ್ಸವವನ್ನುವಿಜೃಂಭಣೆಯ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಸೆ.16) ಜರುಗಿದ ಕಿತ್ತೂರ ಉತ್ಸವ-2026 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉತ್ಸವದ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳನ್ನು ಆಹ್ಚಾನಿಸಲು ಹಾಗೂ ದಸರಾ ಮಾದರಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು…

Read More

ಬೆಳಗಾವಿ ಶಾರ್ಟ್ ಸರ್ಕ್ಯೂಟ್ ನಿಂದ ಒಂದೇ ಕುಟುಂಬದ ನಾಲ್ವರು ಸಜೀವ ದಹನ,

ಬೆಳಗಾವಿ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ ನಡೆದಿದೆ. ತಡರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ. ಗಜಾನನ ರಾಜಾರಾಮ ದಮೋನೆ(65), ಶಾರದಾ…

Read More

ಮಾಹಿತಿ ಹಕ್ಕು ಕಾಯ್ದೆ ನಿರ್ಲಕ್ಷಿಸಿದರೆ ಕಠಿಣ ಕ್ರಮ.

ಬೆಂಗಳೂರು:ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ನಿರ್ಲಕ್ಷಿಸುವ ಹಾಗೂ ಆಯೋಗದ ವಿಚಾರಣೆಗಳಿಗೆ ಗೈರುಹಾಜರಾಗುವ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಮಾಹಿತಿ ನೀಡದೆ ಸತಾಯಿಸುವ ಹಾಗೂ ಆಯೋಗದ ನೋಟಿಸ್‌ಗಳಿಗೆ ಬೆಲೆ ನೀಡದ ಪ್ರವೃತ್ತಿಯನ್ನು ನಿಯಂತ್ರಿಸಲು ಸರ್ಕಾರ ಹೊಸ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಮಾಹಿತಿ ಆಯೋಗದಲ್ಲಿ ಬಾಕಿ ಉಳಿದಿದ್ದ ಪ್ರಕರಣವೊಂದರ ವಿಚಾರಣೆ ವೇಳೆ, ಅಧಿಕಾರಿಗಳು ನಿಯಮಾವಳಿಗಳ ಪ್ರಕಾರ ನಿಗದಿತ ಕಾಲಮಿತಿಯಲ್ಲಿ ಮಾಹಿತಿ ಒದಗಿಸದಿರುವುದು ಮತ್ತು ಆಯೋಗದ ವಿಚಾರಣೆಗೆ ಹಾಜರಾಗದೆ ಬೇಜವಾಬ್ದಾರಿತನ…

Read More