BREAKING NEWS

ರಾಮದುರ್ಗ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ರಸ್ತೆ ಡಿವೈಡರ್ ಗಳನ್ನು ತೆರವುಗೊಳಿಸಿದ ರವಿಕುಮಾರ್ ಎಚ್. ಎನ್.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹರಳಯ್ಯ ಸರ್ಕಲ್ ಮುಂದೆ ಇರುವ ಮೇನ್ ರೋಡ್ ಮಧ್ಯದಲ್ಲಿ ಇರ್ತಕ್ಕಂತ ಡಿವೈಡರ್ ಅನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ರವಿಕುಮಾರ್ ಎಚ್. ಎನ್. ಅವರು ತೆರವುಗೊಳಿಸಿದರು. ರಾಮದುರ್ಗದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಲಾಗಿದ್ದ ಡಿವೈಡರ್ಗಳಿಂದಾಗಿ ಲಾರಿ, ಬಸ್, ಇನ್ನೂ ಅನೇಕ ವಾಹನಗಳು ತಿರುವು ಪಡೆಯಲು ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಇದನ್ನು ಐದರಿಂದ ಹತ್ತು ಪುಟ ವರೆಗೆ ಡಿವೈಡರ್ ಕತ್ತರಿಸಿ ಎಂದು ಸಮಾಜ ಸೇವಕರು ಹಾಗೂ ಸಂಚಾರಿ ಸತ್ಯ ಪತ್ರಿಕೆ ವರದಿಗಾರರಾದ ಪ್ರಶಾಂತ ಅಂಗಡಿ…

Read More

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾ ಸಭೆ.

ಸವದತ್ತಿಯ ಗುರುಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾಸಭೆಯು ಸೇರಿತು ಸಭೆಯ ಅಧ್ಯಕ್ಷತೆ ಯನ್ನು ಬಿ ವ್ಹಿ ವಾಂಗಿಯವರು ವಹಿಸಿದ್ದರು. ‌‌. ಉದ್ಘಾಟನೆ ಮಾಡಿ ಮಾತನಾಡಿದ ಅಶ್ವಥ್ ವೈದ್ಯ ನಾನು ನಿಮ್ಮೆಲ್ಲರ ಹಿರಿತನವನ್ನು ಗಮನಿಸಿದಾಗ ನಾನು ಚಿಕ್ಕವ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿ ನಿಂತು ಮಾತನಿಡುತ್ತೀದ್ದೇನೆ ನೀವು ನೀಡಿದ ಮನವಿಯನ್ನು ಮತ್ತು ಸಂಘದ ಕಟ್ಟಡದ ಬಗ್ಗೆ ಶಾಸಕರು ವಸಂತ ವೈದ್ಯರಿಗೆ ತಿಳಿಸಿ ನಿಮ್ಮ ಅವಶ್ಯ ಬೇಡಿಕೆಯಾದ ಕಟ್ಟಡ ಬಗ್ಗೆ…

Read More

ಬೆಳಗಾವಿಯಲ್ಲಿ ಒಂದೇ ದಿನ 126 ಬೈಕ್‌ಗಳ ವಿರುದ್ಧ ಕೇಸ್, ಸ್ಥಳದಲ್ಲೇ 63,000 ದಂಡ ಸಂಗ್ರಹ.

ಬೆಳಗಾವಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಈಗ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ಪ್ರಮುಖವಾಗಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿಕೊಂಡು ರಾಜಾರೋಷವಾಗಿ ಓಡಾಡುವ ಕಿಡಿಗೇಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಪ್ರಕಟಣೆಯಂತೆ, ನಗರ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ಮತ್ತು ನಿಯಮಬಾಹಿರವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ವಾಹನಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 126 ದ್ವಿಚಕ್ರ ವಾಹನಗಳ ಮೇಲೆ ಮೋಟಾರು ವಾಹನ…

Read More

ಮುರಗೋಡ ಪೊಲೀಸ ಠಾಣೆಯ ವತಿಯಿಂದ ಮುಂಬರುವ ಹೋಳಿ ಹಬ್ಬದ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮುಂಬರುವ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬಗಳನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸಲು ಇತ್ತೀಚೆಗೆ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಎರಡೂ ಸಮುದಾಯಗಳ ಜನರು ಪರಸ್ಪರ ಸಹೋದರತ್ವ ಮತ್ತು ಪ್ರೀತಿಯಿಂದ ಹಬ್ಬಗಳನ್ನು ಆಚರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಲಾಯಿತು. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು….

Read More

ಸವದತ್ತಿ ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ 100 ದಿನಗಳ ಜಾಗೃತಿ ಅಭಿಯಾನ

ಸವದತ್ತಿಯ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸಭೆಯನ್ನು 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸವದತ್ತಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಸವದತ್ತಿಯ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ರವರ ನಿರ್ದೇಶನದಂತೆ, ಬಾಲ್ಯ ವಿವಾಹ ಮುಕ್ತ…

Read More

ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ

ಬೆಳವಡಿ ಸಂಸ್ಥಾನದ ವೀರ ಜ್ಯೋತಿಯನ್ನು ಬೆಳವಡಿಯ ಮಲ್ಲಮ್ಮನ ವೃತ್ತದಲ್ಲಿ ಶನಿವಾರ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಂಭ್ರಮದಿಂದ ಬರಮಾಡಿಕೊಂಡು, ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು. ಬೆಳವಡಿ ಮಲ್ಲಮ್ಮನ ಹುಟ್ಟೂರು ಶಿರಸಿ ಸಮೀಪದ ಸೋಂದಾದಿಂದ ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೆಳವಡಿಗೆ ಆಗಮಿಸಿದ ವೀರ ಜ್ಯೋತಿಗೆ ಪೂಜೆ ಸಲ್ಲಿಸುವುದರ ಮೂಲಕ ಸಡಗರದಿಂದ ಬರಮಾಡಿಕೊಳ್ಳಲಾಯಿತು. ಬಳಿಕ ಬೆಳವಡಿ ಮಲ್ಲಮ್ಮನ ಪುತ್ಥಳಿ ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೂಡಲಸಂಗಮ…

Read More

ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ

ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ ಮೇಲ್ವಿಚಾರಣೆಗೆ…

Read More

ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ಪ್ರತಿಭಟನೆ.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಮನವಿಯನ್ನು ಸಲ್ಲಿಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧ ನೀತಿಯನ್ನು ವಿರೋಧಿಸಿ ಜಿಲ್ಲೆಯ ಎಲ್ಲ ವಿಭಾಗಗಳ ಕಾರ್ಮಿಕರು ಹಾಗೂ ನೌಕರರು ತಮ್ಮ ಹಕ್ಕುಗಳನ್ನು ಉಳಿಸಿ ರಕ್ಷಿಸಿಕೊಳ್ಳಲು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ…

Read More

ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆ DYSP ಚಿದಂಬರ ಮಡಿವಾಳರ ಇವರ ಉಪಸ್ಥಿಯಲ್ಲಿ ನಡೆಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು–ಕೊರತೆ ಸಭೆಯು ರಾಮದುರ್ಗ ಪೋಲೀಸ್ ಉಪಾಧೀಕ್ಷಕರು ಉಪ ವಿಭಾಗ ರಾಮದುರ್ಗದ (DYSP) ಚಿದಂಬರ ವಿ ಮಡಿವಾಳರ ಇವರ ಉಪಸ್ಥಿಯಲ್ಲಿ ನಡೆಯಿತು. ಎಸ್ಸಿ/ಎಸ್ಟಿ ಕುಂದುಕೊರತೆ ಸಭೆಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರ ದೈನಂದಿನ ಸಮಸ್ಯೆಗಳು, ಭೂ ವಿವಾದಗಳು, ಪೊಲೀಸ್ ದೂರುಗಳು, ಮತ್ತು ಜಮೀನು ವಿವಾದಗಳು, ಜಾತಿ ನಿಂದನೆ ಪ್ರಕರಣಗಳು, ಮೂಲಭೂತ ಸೌಕರ್ಯಗಳ ಕೊರತೆ, ಮತ್ತು ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿನ ಸಮಸ್ಯೆಗಳು,…

Read More

ಪಡಿತರ ಅಕ್ಕಿ ಕಳ್ಳ ಸಾಗಟ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಿಂದ ಎಂಎಚ್ 13 ಎಎ 3745 ನೋಂದಣಿ ಸಂಖ್ಯೆಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಸುಮಾರು 8 ಲಕ್ಷ ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂಡಿ ಶಹರ ಪೊಲೀಸ್…

Read More