BREAKING NEWS

ಶ್ವಾಸ ಯೋಗ ಕೇಂದ್ರದಿಂದ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಪ್ರದಾನ

ಬೆಂಗಳೂರು | 5 ಜುಲೈ 2026 — ಮಾನವ ಕಲ್ಯಾಣ, ಉಸಿರಾಟ ಜಾಗೃತಿ, ಮಾನಸಿಕ-ದೈಹಿಕ ಸಹಿಷ್ಣುತೆ ಹಾಗೂ ಯೋಗಪ್ರೇರಿತ ಜೀವನಶೈಲಿಯ ಜಾಗತಿಕ ಪ್ರಸಾರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ, ಶ್ವಾಸ ಯೋಗ ಕೇಂದ್ರವು ವಿಶ್ವಪ್ರಸಿದ್ಧ ಉಸಿರಾಟ ಸಾಧಕ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಅನ್ನು ಪ್ರದಾನ ಮಾಡಿತು. ಈ ಪ್ರತಿಷ್ಠಿತ ಗೌರವ ಸಮಾರಂಭವು ಶ್ವಾಸಗುರುಗಳೆಂದೇ ಖ್ಯಾತರಾದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ…

Read More

ಬೆಳಗಾವಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ಬೆಳಗಾವಿ, : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾಇ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಮಂಗಳವಾರ (ಜು.7) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ…

Read More

ಕಿತ್ತೂರ ರಸ್ತೆಯ ಬಸವಣಕಟ್ಟೆ ಸೇತುವೆ ಬಳಿ ನವಜಾತ ಶಿಶು ಬಿಟ್ಟು ಹೋದ ಘಟನೆ ನಡೆದಿದೆ !

ಸಮಯಕ್ಕೆ ಸರಿಯಾಗಿ ಶಿಶುವಿನ ಅಳುವಿನ ಶಬ್ದವನ್ನು ಗಮನಿಸಿ ರಕ್ಷಣೆ ಮಾಡಿದ ಕಿತ್ತೂರಿನ ಗ್ರಾಮಸ್ಥರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ನರಗುಂದ ರಸ್ತೆಯ ಬಸವಣಕಟ್ಟೆ ಸೇತುವೆ ಕೆಳಭಾಗದಲ್ಲಿ ನವಜಾತ ಶಿಶು ಬಿಟ್ಟು ಹೋದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಿತ್ತೂರಿನ ಗ್ರಾಮಸ್ಥರು ಬೆಳಗಿನ ವೇಳೆ ಸೇತುವೆ ಸಮೀಪ ತೆರಳಿದ್ದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಅನುಮಾನಗೊಂಡ ಅವರು ಶಬ್ದ ಬಂದ ದಿಕ್ಕಿನಲ್ಲಿ ತೆರಳಿ ಪರಿಶೀಲಿಸಿದಾಗ, ಸೇತುವೆಯ ಕೆಳಭಾಗದಲ್ಲಿ ನವಜಾತ…

Read More

ವಿಕಸಿತ ಭಾರತ – ಜಿ ರಾಮ್ ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ :ಇಒ ಮಹಮ್ಮದ್ ಇಜಾನ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕಾ ಮಿಷನ್’ ಯೋಜನೆಯಡಿ ಗ್ರಾಮೀಣ ಭಾಗದ ಶ್ರಮಿಕರಿಗೆ ಮತ್ತಷ್ಟು ಆರ್ಥಿಕ ಭದ್ರತೆ ನೀಡುವ ನಿಟ್ಟಿನಲ್ಲಿ, ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ರಾಮದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹಮ್ಮದ್ ಇಜಾನ ಅವರು ತಿಳಿಸಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಒಟ್ಟು 40887 ಸಕ್ರಿಯ ಕೂಲಿ ಕಾರ್ಮಿಕರಿದ್ದು, ಒಟ್ಟಾರೆ 99.25 ಪ್ರತಿಶತ ekyc ಪ್ರಗತಿ ಸಾಧಿಸಲಾಗಿದ್ದು, ಬಾಕಿ ಉಳಿದ…

Read More

ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿ ಆದ ಬಗ್ಗೆ ಸರಿಯಾದ ಮಾಹಿತಿ ಪಡೆದು, ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಮಳೆಯ…

Read More

ಕಾಗವಾಡ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ತಂದೆಗೆ ₹25000 ದಂಡ ವಿಧಿಸಿದ ನ್ಯಾಯಾಧೀಶರು

ಸಾರ್ವಜನಿಕ ಸುರಕ್ಷತೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪೊಲೀಸರು ಅಳವಡಿಸಿರುವ ಎ.ಎನ್.ಪಿ.ಆ‌ರ್ (Automatic Number Plate Recognition Camera – ANPR) ತಂತ್ರಜ್ಞಾನವು ಇಂದು ಕಠಿಣ ಕಾನೂನು ಜಾರಿಗೆ ಪ್ರಬಲ ಅಸ್ತ್ರವಾಗಿ ಪರಿಣಮಿಸಿದೆ. ಇತ್ತೀಚೆಗೆ ನಡೆದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣವೊಂದರಲ್ಲಿ, ಮಾನ್ಯ JMFC ನ್ಯಾಯಾಲಯ ಕಾಗವಾಡ, cc no 579/26 ಇದರಲ್ಲಿ ಸದರಿ ಅಪ್ರಾಪ್ತ ಬಾಲಕನ ತಂದೆಯಾದ ಮಕ್ರಂದ್ ಮಲ್ಲಪ್ಪ ಮಗದುಮ್ ಸಾಕಿನ್ ಮಂಗಸುಳಿ ಈತನು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ…

Read More

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.04) ನಡೆದ ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಮಳೆಗಾಲ ಪ್ರಾರಂಭವಾಗಿದ್ದು, ಶಾಲಾ ಕೊಠಡಿಗಳು…

Read More

ರಾಮದುರ್ಗದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ

ರಾಮದುರ್ಗ : ರಾಜಿ ಆಗಬಹುದಾಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಜುಲೈ 11ರಂದು ರಾಮದುರ್ಗ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ರಾಮದುರ್ಗ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ಅಧ್ಯಕ್ಷರು ಶ್ರೀಮತಿ. ಪುಷ್ಪಲತಾ. ಕೆ ಹೇಳಿದರು. ರಾಮದುರ್ಗ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜುಲೈ 11ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು . ಬಾಕಿ ಇರುವ ಪ್ರಕರಣಗಳುಬ್ಯಾಂಕ್ ಸಾಲ…

Read More

16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹15,111ಕೋಟಿ ಮೂಲ ಅನುದಾನ, ₹3,778 ಕೋಟಿ ಕಾರ್ಯ ಸಾಮರ್ಥ್ಯ ಅನುದಾನ ಸೇರಿ ₹18,889 ಕೋಟಿ ಹಣವು ಮುಂದಿನ 5 ವರ್ಷಗಳಿಗೆ ಹಂಚಿಕೆ ಆಗಿದೆ.

ನವದೆಹಲಿ : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ ₹2186 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿಂದು ನಡೆದ 16ನೇ ಹಣಕಾಸು ಆಯೋಗದ ಶಿಫಾರಸು, ಕಾರ್ಯಾಚರಣೆ ಮಾರ್ಗಸೂಚಿಗಳು, ಅನುದಾನ ಬಿಡುಗಡೆ ಪ್ರಕ್ರಿಯೆ, ಅನುಸರಣೆ ಷರತ್ತುಗಳು, ಪ್ರಮುಖ ಸವಾಲುಗಳು ಮತ್ತು ಅವುಗಳಿಗೆ ಪರಿಹಾರ ಕುರಿತಂತೆ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ…

Read More

ಗುಟ್ಕಾ ಉಗಿಯಲು ಬಸ್‌ನ ಕಿಟಕಿ ಆಚೆ ತಲೆ ಹಾಕಿದ್ದಾಗ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದು ರುಂಡ ಕಟ್!

ಧಾರವಾಡ ಜಿಲ್ಲೆ ಹುಬ್ಬಳ್ಳಿ -ಲಕ್ಷ್ಮೀಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿಕುಂದಗೋಳ ಚಲಿಸುವ ಬಸ್‌ನ ಕಿಟಕಿ ಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬನಿಗೆಹಿಂಬ ದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿ ಆತನ ರುಂಡವೇ ಕಟ್ ಆಗಿ ಬಿದ್ದು, ಸ್ಥಳದಲ್ಲೇ ಪ್ರಾಣ ಕಳೆದು ಕೊಂಡಿರುವ ಘಟನೆ ಹುಬ್ಬಳ್ಳಿ -ಲಕ್ಷ್ಮೀಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಫಕ್ಕೀರೇಶ ಮುತ್ತಳ್ಳಿಮಠ ವಯಸ್ಸು 17 ಎಂದು ಗುರುತಿಸಲಾಗಿದೆ….

Read More