ಧಾರವಾಡ ಎಸ್ಐಆರ್ ಪ್ರಕ್ರಿಯೇ ಶೀಘ್ರದಲ್ಲಿಯೇ ಪೂರ್ಣಗೊಳಿಸಿ: ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್
ಧಾರವಾಡ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾದ ವಿ.ಅನ್ಬುಕುಮಾರ್ ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಗಣತಿ ನಮೂನೆಗಳನ್ನು (Enumeration Forms) ವಿತರಣೆ ಮಾಡುವ ಹಾಗೂ ಗಣಕೀಕರಣದ ಕುರಿತು ಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತದಾರರ…
ಬೆಳಗಾವಿಯಲ್ಲಿ ಸಂಗೀತ ಸಂಜೆ
ಐ.ಎಂ. ಇ.ಆರ್ ಆಡಿಟೋರಿಯಂ ಬೆಳಗಾವಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವು ಉಚಿತ ಪ್ರವೇಶದೊಂದಿಗೆ ತುಂಬಾ ವಿದ್ಯುಕ್ತವಾಗಿ ಸಂಪನ್ನಗೊಂಡಿತು. ಆರಂಭದಲ್ಲಿ ಶ್ರೀಮತಿ ಎಸ್.ಜಾನಕಿ ಅಮ್ಮನವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಪ್ರಾರಂಭ ಮಾಡಲಾಗಿತ್ತು ಆರೋಹಿ ಮ್ಯೂಸಿಕ್ ಕ್ಲಾಸ್ ನಡೆಸುತ್ತಿರುವ ಶ್ರೀಮತಿ ಭಾರ್ಗವಿ ಕುಲಕರ್ಣಿಯವರು ಈ ಸಂಗೀತ ಸಂಜೆ ಕಾರ್ಯಕ್ರಮದ ಆಯೋಜಕತ್ವದ ಮುಖ್ಯಸ್ಥರು ಆಗಿದ್ದರು.ಕಲೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ ಎಲೆಮರೆಯ ಕಾಯಿಯಂತೆ ಕಲೆಯನ್ನು ಪೋಷಿಸುವವರು ಸಾಕಷ್ಟು ಜನರಿದ್ದಾರೆ ಅವರಲ್ಲಿ ನಗರವಾಸಿಯಾದ ಶ್ರೀಮತಿ ಭಾರ್ಗವಿ ಕುಲಕರ್ಣಿಯವರು ಒಬ್ಬರಾಗಿದ್ದಾರೆ. ತಾವು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ…
ಎಸ್.ಐ.ಆರ್ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಲು ರಾಜ್ಯ ಮುಖ್ಯಚುನಾವಣಾಧಿಕಾರಿ ಅನ್ಬುಕುಮಾರ್ ಸೂಚನೆ.
ಬೆಳಗಾವಿ / ಬೆಂಗಳೂರು,ಹೊಸ ಮತದಾರರ ಸೇರ್ಪಡೆ, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇಕಡಾ 100% ರಷ್ಟು ಪೂರ್ಣಗೊಳಿಸಲು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR) ಕುರಿತು ನಡೆದ ಪ್ರಗತಿ ಪರಿಶೀಲನಾ…
ಮುದೇನೂರ ಗ್ರಾಮಸ್ಥರಿಂದ ಕುಡಿಯುವ ನೀರಿಗಾಗಿ ತಾಲೂಕು ಪಂಚಾಯಿತಿಗೆ ಮುತ್ತಿಗೆ!
ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದ ಜನರು ಕುಡಿಯುವ ನೀರಿಗಾಗಿ ಸುಮಾರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಾಶಿವನಗರದಲ್ಲಿಸುಮಾರು ವರ್ಷಗಳಿಂದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದು ಇದರ ಸಲುವಾಗಿ ಸೋಮವಾರ ತಾಲೂಕು ಪಂಚಾಯತಿ ಮುಂದೆ ಕೊಡಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಿದರು ನಮಗೆ ಕುಡಿಯಲು ನೀರು ಕೊಡಿ ಇಲ್ಲವಾದರೆ ವಿಷ ಕೊಡಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಎರಡು ದಿನಗಳಲ್ಲಿ ಕುಡಿಯುವ ನೀರು ಪೂರೈಸದೆ ಇದ್ದರೆ ನಾವು ಮುದೇನೂರ ಮೇನ್…
ಎಸ್.ವಿ.ಎಸ್. ಬೆಳ್ಳುಬ್ಬಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೈಂಟ್ಸ ಗ್ರುಫ, ಹಾಗೂ ಲೈಂಗಿಕ ಕಿರುಕುಳ ವಿರೋಧಿ ಸವಿುತಿ ಇವರುಗಳ ಸಂಯುಕ್ತ ಆಶ್ರಯಲ್ಲಿ ದಿನಾಂಕಃ 17-07-2026 ರಂದು ಎಸ್.ವಿ.ಎಸ್. ಬೆಳ್ಳುಬ್ಬಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ NALSA“ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು” ಯೋಜನೆ, 2015 ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ಶ್ರಿಮತಿ. ಅರ್ಪಿತಾ ಬಿ ಬೆಲ್ಲದ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಪಾಟನೆ…
ಹೊಳಲೂರು ಗ್ರಾಮದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಘಟಕದ ಪದಗ್ರಹಣ: ಅಧ್ಯಕ್ಷರಾಗಿ ಉಮೇಶ್ ಪೂಜಾರ್ ಅಧಿಕಾರ ಸ್ವೀಕಾರ
ಕನ್ನಡ ನೆಲ, ಜಲ ಹಾಗೂ ಭಾಷೆಯ ರಕ್ಷಣೆಗೆ ನಿರಂತರವಾಗಿ ಹೋರಾಡುತ್ತಿರುವ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲೆ ರೋಣ ತಾಲೂಕಿನ ಹೊಳಲೂರು ಗ್ರಾಮ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.ಗ್ರಾಮದ ಆರಾಧ್ಯ ದೈವ ಪೂಜ್ಯ ಶ್ರೀ ಎಚ್ಚರೇಶ್ವರ ಸ್ವಾಮಿಗಳ ದಿವ್ಯ ಸಾನಿಧ್ಯ ಹಾಗೂ ಆಶೀರ್ವಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಹಾಗೂ ಗದಗ ಜಿಲ್ಲಾ ಅಧ್ಯಕ್ಷರ ಎಂ ಎ ಕುರ್ತ್ ಕೋಟಿನೇತೃತ್ವದಲ್ಲಿ ಜರುಗಿದ…
ಪೇಂಟ್ ಮಾಡುವ ಸಂದರ್ಭದಲ್ಲಿ ಕೆಇಬಿ ಕರೆಂಟ್ ವೈಯರ್ ತೆಗಿಲಿ ಗಾಯಗೊಂಡ ಘಟನೆ ನಡೆದಿದೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬೆಳಗಾವಿ ರೋಡ್ ದಲ್ಲಿ ಇದ್ದಂತಹ ಹಿರೇರಡ್ಡಿ ಬಿಲ್ಡಿಂಗದಲ್ಲಿ ಹೊರಗೋಡೆ ಪೇಂಟ್ ಮಾಡುವ ಸಂದರ್ಭದಲ್ಲಿ ಮೈಬೂಬ್ ಸಾಬ್ ಪಠಾಣ ಎಂಬ ವ್ಯಕ್ತಿಗೆ ಕೆಇಬಿ ಹಾಯ್ ಟೆನ್ಶನ್ ವೈಯರ್ ತಾಗಿ ಅವರ ಸಂಪೂರ್ಣ ಬಲಗೈ ಹಾಗೂ ಎರಡು ಕಾಲುಗಳ ಮೊಣಕಾಲು ಸಂಪೂರ್ಣ ಗಾಯಗೊಂಡ ಘಟನೆ ನಡೆದಿದ್ದು ಅಲ್ಲಿಂದ ತಕ್ಷಣ ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ ತುರ್ತು ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ಕಳಿಸಲಾಯಿತು.
ಬೆಳಗಾವಿ ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ಕೋರಿ ಮೇಯರ್ ಪ್ರೀತಿ ಕಾಮಕರ್ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಅರ್ಪಿಸಿದರು.
ಬೆಳಗಾವಿ : ರಾಜ್ಯದ ಎರಡನೇ ರಾಜಧಾನಿ ಎಂದೇ ಪರಿಗಣಿಸಲ್ಪಡುವ ಬೆಳಗಾವಿನಗರದ ಸೌಂದರ್ಯೀಕರಣ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಇಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದ ಖರ್ಚು ವೆಚ್ಚಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆಗೆರೂ.250 ಕೋಟಿ ವಿಶೇಷ ಅನುದಾನವನ್ನು ನೀಡಬೇಕೆಂದು ಕೋರಿಇತ್ತೀಚೆಗೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಸುವರ್ಣ ವಿಧಾನಸೌಧದಲ್ಲಿ ಮನವಿ ಅರ್ಪಿಸಿದರು.ಬೆಳಗಾವಿಯಲ್ಲಿ ಪ್ರತಿ ವರ್ಷ ನಡೆಯುವ ವಿಧಾನ ಮಂಡಲ…
ದೇಶ ಮರೆಯದ ಗಾನ ಕೋಗಿಲೆ _ಎಂ ವೈ ಮೆಣಸಿನಕಾಯಿ
ಬೆಳಗಾವಿ: ಮಹಾಂತೇಶ ನಗರದ ಸಂಗೀತ ಕಲಾ ತಂಡದ ವತಿಯಿಂದ ಪಂಚ ಭಾಷೆ ಗಾಯಕಿಯಾದ ಡಾ. ಎಸ್ ಜಾನಕಿ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು ಅಗಲಿದ ತಾರೆಗೆ ಮೌನಚರಣೆ ಆಚರಿಸಿ ಮಾತನಾಡುತ್ತಾ ಭಾರತ ಕಂಡ ಅಪರೂಪದ ವ್ಯಕ್ತಿಗಳಲ್ಲಿ ಅವರು ಕೂಡ ಓರ್ವರು ಭಾಷಾ ಪಾಂಡಿತ್ಯ ಜ್ಞಾಪಕ ಶಕ್ತಿ ಪಂಚ ಭಾಷೆಗಳ ಪರಿಣಿತಿ ಎಲ್ಲ ಸನ್ನಿವೇಶಗಳ ಸಂದರ್ಭಗಳ ಪಾತ್ರಗಳಗೆ ಹಾಡುಗಳನ್ನು ಹಾಡಿ ತಮ್ಮ ಕೋಗಿಲೆ ಕಂಠದಿಂದ ದೇಶದ ಜನರಿಗೆ ಪರಿಚಿತರು ಸಂಗೀತ ಲೋಕದಲ್ಲಿ ತಮ್ಮ ಭಾವನೆಯನ್ನು ಭಾಷೆಗಳಲ್ಲಿ ಬಿತ್ತುವ ಮೂಲಕ…
ರಾಮದುರ್ಗ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಿಚ್ಛೇದನ ಪ್ರಕರಣ : ಒಂದಾದ ದಂಪತಿಗಳು
ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ರಾಮದುರ್ಗ ನ್ಯಾಯಾಲಯ ಗಮನ ಸೆಳೆದಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ರಾಮದುರ್ಗ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕ- 11/07/2026 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ರಾಮದುರ್ಗ ನ್ಯಾಯಾಲಯದಲ್ಲಿ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಂಜುನಾಥ ನಾಯಕ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಪುಷ್ಪಲತಾ ಕೆ…
