BREAKING NEWS

ಸವದತ್ತಿ ಪೊಲೀಸ್ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪೂರ್ವಭಾವಿ ಶಾಂತಿ ಸಭೆ.

ಬೆಳಗಾವಿ ಜಿಲ್ಲೆ ಸವದತ್ತಿ ನಗರದಪೊಲೀಸ್ ಠಾಣೆ ಆವರಣದಲ್ಲಿಮುಂಬರುವ ಮೊಹರಂ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿ, ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯುವ ಮೂಲಕ ಈ ಬಾರಿ ಹಬ್ಬವನ್ನು ಸಂಪ್ರದಾಯದಂತೆ ಸಾಮರಸ್ಯದಿಂದ ಆಚರಿಸಲು ಒಮ್ಮತದಿಂದ ನಿರ್ಧರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ ಸುರೇಶ ಬೆಂಡೆಗುಂಬಳ ಅವರು, ಸವದತ್ತಿ ನಗರವು ದಶಕಗಳಿಂದ ಹಿಂದೂ ಮುಸ್ಲಿಂ ಬಾಂಧವ್ಯ ಮತ್ತು ಐಕ್ಯತೆಗೆ ಹೆಸರಾಗಿದೆ. ಇಲ್ಲಿನ ಜನರು ಎಲ್ಲ ಹಬ್ಬಗಳನ್ನು…

Read More

ಮುಧೋಳ ಜೆಕೆ ಸಿಮೆಂಟ್‌ ಕಾರ್ಖಾನೆ ವಿರುದ್ಧ ಅಹೋರಾತ್ರಿ ಧರಣಿ | ಅಕ್ರಮ ಗಣಿಗಾರಿಕೆ, ಬೆಳೆಹಾನಿಗೆ ರೈತರ ಸಮರನ್ಯಾಯ ಸಿಗುವವರೆಗೂ ಹೋರಾಟ

ಮುಧೋಳ ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು, ಬೆಳೆಹಾನಿಗೆ ರೈತರಿಗೆ’ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕಿನ ಮುದ್ದಾಪುರದಲ್ಲಿರುವ ಜೆಕೆ ಸಿಮೆಂಟ್ ಕಾರ್ಖಾನೆಯ ಎದುರು ಸೋಮವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಮಾತನಾಡಿ, ಕಾರ್ಖಾನೆಯಿಂದ ಹೊರಸೂಸುವ ಧೂಳಿನಿಂದಾಗಿ ಸುತ್ತಮುತ್ತಲಿನ ರೈತರ ಬೆಳೆಗಳು ಸಂಪೂರ್ಣ ನಾಶವಾಗುತ್ತಿವೆ. ಕಬ್ಬಿನಂತಹ ಬೆಳೆಗಳ ಮೇಲೆ ಧೂಳಿನ ಪದರ ಬಿದ್ದು ಇಳುವರಿ ಕುಂಠಿತವಾಗುತ್ತಿದೆ. ಇದರ ಜೊತೆಗೆ, ಕಾರ್ಖಾನೆಯು…

Read More

ಆಲಮೇಲ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಶಾಂತಿ ಮತ್ತು ಸೌಹಾರ್ದತೆ ಯಿಂದ ಹಬ್ಬ ಆಚರಿಸಲು – ಪಿ.ಎಸ್.ಐ ಅರವಿಂದ್ರ ಅಂಗಡಿ ಕರೆ.

ಆಲಮೇಲ ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯನ್ನು ಆಲಮೇಲ ಠಾಣೆಯ ಪಿ.ಎಸ್.ಐ ಅರವಿಂದ್ರ ಅಂಗಡಿ ಇವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ಜರಗಿತು.ಪಿ.ಎಸ್.ಐ ಅರವಿಂದ್ರ ಅಂಗಡಿ ಮಾತನಾಡಿ.ಮುಂಬರುವ ಮೊಹರಂ ಹಬ್ಬವನ್ನು ಶಾಂತಿ ಸೌಹಾರ್ದತೆ ಆಚರಣೆ ಮಾಡಬೇಕು ಯಾವುದೇ ಆಂತರಿಕ ಘಟನೆ ನಡೆಯದಂತೆ ಕಾನೂನು ಪರಿಪಾಲನೆ ಯಿಂದ ಯಾವುದೇ ಹಿಂದೂ ಮುಸ್ಲಿಂ ಹಬ್ಬವನ್ನಾಗಲಿ ಶಾಂತಿಯುತವಾಗಿ ಎಲ್ಲರೂ ಸೋದರಂತೆ ಭಾವನೆಗಳನ್ನು ಇಟ್ಟುಕೊಂಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಹೇಳಿದರು ಆಲಮೇಲ ತಾಲೂಕಿನಾದ್ಯಂತ ವಿವಿಧ ಗ್ರಾಮಗಳಲ್ಲಿ ಅಂದಾಜು 36…

Read More

ಸವದತ್ತಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ಸವದತ್ತಿ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ವಿವಿಧ ಇಲಾಖೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ತಾಲೂಕಿನ ಉಗರಗೋಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಯಲ್ಲಮ್ಮ ತಾಂಡೆ ಗ್ರಾಮದಲ್ಲಿ 2025-26ನೇ ಸಾಲಿನ CMIDP ಯೋಜನೆಯಡಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ…

Read More

ರಾಮದುರ್ಗ ಅಕ್ರಮ ಗಾಂಜಾ ಸಾಗಾಟ : 180 ಗ್ರಾಂ ಗಾಂಜಾ ವಶ; ವ್ಯಕ್ತಿ ಬಂಧನ

ರಾಮದುರ್ಗ : ಗಾಂಜಾ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನವೀನ ಲಕ್ಷ್ಮಣ ಹೆದ್ದೆರಿ ಸಾ: ಕೆರೂರ ತಾಲೂಕು ಬಾದಾಮಿ ವ್ಯಕ್ತಿಯನ್ನು ರಾಮದುರ್ಗ ಪೊಲೀಸರು ಬಂಧಿಸಿ , ಆತನ ಬಳಿ ಇದ್ದ 180 ಗ್ರಾಂ ಗಾಂಜಾ ಒಂದು ಪಲ್ಸರ್ ಬೈಕ್, ಒಂದು ಸಾವಿರ ರೂ. ವನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಇರುವ ಹಾದಿ ಬಸವೇಶ್ವರ ದೇವಸ್ಥಾನ ಹತ್ತಿರದಲ್ಲಿ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ್ ಲಕ್ಷ್ಮಣ ಹೆದ್ದೆರಿ ಎಂಬ…

Read More

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇವರಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶಿವಸಂಜೀವಿನಿ ನೇತ್ರಾಲಯ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, (ಮಧುಮೇಹ ಮತ್ತು ಕಣ್ಣಿನ ತಪಾಸನೆ) ಶಿಬಿರವನ್ನು ನ್ಯಾಯವಾದಿಗಳ ಸಂಘದ ಹೊಸ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಆರೋಗ್ಯವೇ…

Read More

ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ

ಸವದತ್ತಿಯ 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ರವರು, ಸಿವಿಲ್‍ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಯರಗಟ್ಟಿ ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ಸವದತ್ತಿ ನ್ಯಾಯವಾದಿಗಳ ಸಂಘದಿಂದ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೇವದಾಸ ಎಚ್. 1ನೇ ಹೆಚ್ಚುವರಿ ನ್ಯಾಯಾಧೀಶರಾದ ಅರ್ಪಿತಾ ಬಿ. ಬೆಲ್ಲದ ಮತ್ತು…

Read More

ರೋಣ ಪುರಸಭೆ ಮುಖ್ಯಾಧಿಕಾರಿಗೆ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಕರ್ನಾಟಕ.ಯಿಂದ ಹಕ್ಕೊತ್ತಾಯದ ಮನವಿ

​ಶೋಷಿತ ತಾಯಂದಿರು, ಮಕ್ಕಳ ಬದುಕಿಗೆ ಪುರಸಭೆ ಆಸರೆಯಾಗಲಿ: ಮುಖ್ಯಾಧಿಕಾರಿ ರಮೇಶ್ ಹೊಸಮನಿಗೆ ಆಗ್ರಹ ​ ಗದಗ ಜಿಲ್ಲಾ ರೋಣ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಅವರ ಮಕ್ಕಳಿಗೆ ಪುರಸಭೆ ಇಲಾಖೆಯ ವತಿಯಿಂದ ಸಿಗುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಂತೆ ಆಗ್ರಹಿಸಿ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ – ಕರ್ನಾಟಕ ಸಂಘಟನೆಯ ವತಿಯಿಂದ ಪುರಸಭೆಯ ಮುಖ್ಯ ಅಧಿಕಾರಿಗಳಾದ ರಮೇಶ್ ಹೊಸಮನಿ ಅವರಿಗೆ ಇಂದು ಅಧಿಕೃತ ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಲಾಯಿತು. ​ಪುರಸಭೆ ವ್ಯಾಪ್ತಿಯಲ್ಲಿರುವ ಮಾಜಿ…

Read More

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ” ಅಂಗವಾಗಿಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಹಾಗೂ ಕಾರ್ಮಿಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 13-06-2026 ರಂದು ಶ್ರೀ. ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಸಿವಿಲ್‍ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ. ದೇವದಾಸ ಎಚ್. ರವರು ಸಸಿಗೆ ನೀರೆರೆಯುವುದರ ಮೂಲಕ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ

ಸವದತ್ತಿ ತಾಲೂಕಿನ ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಶ್ರೀ ಮಠದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ನೀಲಕಂಠ ಮಹಾಸ್ವಾಮಿಗಳು ಮಾತನಾಡಿ ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ಮನ್ ನಿರಂಜನ…

Read More