BREAKING NEWS

ಬೆಳಗಾವಿ ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ಕೋರಿ ಮೇಯರ್ ಪ್ರೀತಿ ಕಾಮಕರ್ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಅರ್ಪಿಸಿದರು.

ಬೆಳಗಾವಿ : ರಾಜ್ಯದ ಎರಡನೇ ರಾಜಧಾನಿ ಎಂದೇ ಪರಿಗಣಿಸಲ್ಪಡುವ ಬೆಳಗಾವಿನಗರದ ಸೌಂದರ್ಯೀಕರಣ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಇಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದ ಖರ್ಚು ವೆಚ್ಚಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆಗೆರೂ.250 ಕೋಟಿ ವಿಶೇಷ ಅನುದಾನವನ್ನು ನೀಡಬೇಕೆಂದು ಕೋರಿಇತ್ತೀಚೆಗೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಸುವರ್ಣ ವಿಧಾನಸೌಧದಲ್ಲಿ ಮನವಿ ಅರ್ಪಿಸಿದರು.ಬೆಳಗಾವಿಯಲ್ಲಿ ಪ್ರತಿ ವರ್ಷ ನಡೆಯುವ ವಿಧಾನ ಮಂಡಲ…

Read More

ದೇಶ ಮರೆಯದ ಗಾನ ಕೋಗಿಲೆ _ಎಂ ವೈ ಮೆಣಸಿನಕಾಯಿ

ಬೆಳಗಾವಿ: ಮಹಾಂತೇಶ ನಗರದ ಸಂಗೀತ ಕಲಾ ತಂಡದ ವತಿಯಿಂದ ಪಂಚ ಭಾಷೆ ಗಾಯಕಿಯಾದ ಡಾ. ಎಸ್ ಜಾನಕಿ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು ಅಗಲಿದ ತಾರೆಗೆ ಮೌನಚರಣೆ ಆಚರಿಸಿ ಮಾತನಾಡುತ್ತಾ ಭಾರತ ಕಂಡ ಅಪರೂಪದ ವ್ಯಕ್ತಿಗಳಲ್ಲಿ ಅವರು ಕೂಡ ಓರ್ವರು ಭಾಷಾ ಪಾಂಡಿತ್ಯ ಜ್ಞಾಪಕ ಶಕ್ತಿ ಪಂಚ ಭಾಷೆಗಳ ಪರಿಣಿತಿ ಎಲ್ಲ ಸನ್ನಿವೇಶಗಳ ಸಂದರ್ಭಗಳ ಪಾತ್ರಗಳಗೆ ಹಾಡುಗಳನ್ನು ಹಾಡಿ ತಮ್ಮ ಕೋಗಿಲೆ ಕಂಠದಿಂದ ದೇಶದ ಜನರಿಗೆ ಪರಿಚಿತರು ಸಂಗೀತ ಲೋಕದಲ್ಲಿ ತಮ್ಮ ಭಾವನೆಯನ್ನು ಭಾಷೆಗಳಲ್ಲಿ ಬಿತ್ತುವ ಮೂಲಕ…

Read More

ರಾಮದುರ್ಗ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಿಚ್ಛೇದನ ಪ್ರಕರಣ : ಒಂದಾದ ದಂಪತಿಗಳು

ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ರಾಮದುರ್ಗ ನ್ಯಾಯಾಲಯ ಗಮನ ಸೆಳೆದಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ರಾಮದುರ್ಗ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕ- 11/07/2026 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ರಾಮದುರ್ಗ ನ್ಯಾಯಾಲಯದಲ್ಲಿ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಂಜುನಾಥ ನಾಯಕ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಪುಷ್ಪಲತಾ ಕೆ…

Read More

ಸೇವಾಸಪ್ತಾಹದ ನಿಮಿತ್ತ ವೃಕ್ಷಾರೋಪನ ಕಾರ್ಯಕ್ರಮ

ವಿಶ್ವಹಿಂದೂ ಪರಿಷತ್ – ಬಜರಂಗದಳ ರಾಮದುರ್ಗ ಪ್ರಖಂಡದ ವತಿಯಿಂದ ಸೇವಾಸಪ್ತಾಹದ ನಿಮಿತ್ತವಾಗಿ ತಾಲೂಕಿನ ಎಲ್ಲ ಸಮಿತಿ ಕೇಂದ್ರಗಳಲ್ಲಿ ವೃಕ್ಷಾರೋಪನ ಕಾರ್ಯಕ್ರಮ ನೆರವೇರಿಸಲಾಯಿತು, ಈ ಭಾಗವಾಗಿ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರಜ್ಞೆ ಮೆರೆಯಲಾಯಿತು ಹಾಗೂ ಶಾಲಾ ಮಕ್ಕಳಿಗೆ ಪ್ರಕೃತಿ ಉಳಿಸುವ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಪದಾಧಿಕಾರಿಗಳು ವಿಜಯೇಂದ್ರ ಜೋಷಿ, ಪ್ರಕಾಶ ಸೂಳಿಬಾವಿ, ಸುನಿತಾ ತಿಮ್ಮನಗೌಡರ, ಅನಸೂಯಾ ಬಸನಗೌಡರ, ಮಾಜಿ ಸೈನಿಕರು ರಮೇಶ ಆರೀಬೆಂಚಿ, ಪ್ರೌಢಶಾಲೆಯ…

Read More

ಸವದತ್ತಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 11-07-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್‍ ಅದಾಲತ್‍ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 7263 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 1437 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ, ಪಕ್ಷಗಾರರ ನ್ಯಾಯಾಲಯದ ದೀರ್ಘಾವಧಿಯ ಪ್ರಕ್ರಿಯೆ ಮತ್ತು…

Read More

ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂದೆ ಹಾಗೂ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ದ್ವಿಚಕ್ರ ವಾಹನ ಸವಾರರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಿ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ವಯಂ ಚಾಲಿತವಾಗಿ ಆಟೋಮೆಟಿಕ್ ದಂಡ ದಾಖಲಾಗುವುದು ದಂಡಪಾವತಿಸಲು ನಿಮ್ಮ ವಿಳಾಸಕ್ಕೆ ನೇರವಾಗಿ ನೋಟಿಸ್ ಬರುವುದು. ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ಮತ್ತು ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಆಟೋಮೇಟೆಡ್ ಸಿಸಿಟಿವಿ (Automated CCTV) ಕ್ಯಾಮೆರಾಗಳನ್ನು ಸರ್ಕಾರಿ ಆಸ್ಪತ್ರೆ ಮುಂದೆ…

Read More

ವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುವರ್ಣಸೌಧದ ಆವರಣದಲ್ಲಿರುವ “ವಿಜ್ಞಾನ ವನ”ಕ್ಕೆ ಗುರುವಾರ ಭೇಟಿ ನೀಡಿದರು. ಮಕ್ಕಳು ಹಾಗೂ ಸಾರ್ವಜನಿಕರು ಆಟದೊಂದಿಗೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ವಿವಿಧ ಪರಿಕರಗಳನ್ನು ಅಳವಡಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿಜ್ಞಾನ ವನದಲ್ಲಿ ಸಸಿ ನೆಟ್ಟು ನೀರೆರೆದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ವಿಜ್ಞಾನ ವನದ ವಿಶೇಷತೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಗಣೇಶ…

Read More

ಕುಡಿಯುವ‌ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ಬೆಳಗಾವಿ, ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ‌ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನವನ್ನು ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ (ಜು.09) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ‌…

Read More

ಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ‌ಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ(ಜು.9) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ…

Read More

ಶ್ವಾಸ ಯೋಗ ಕೇಂದ್ರದಿಂದ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಪ್ರದಾನ

ಬೆಂಗಳೂರು | 5 ಜುಲೈ 2026 — ಮಾನವ ಕಲ್ಯಾಣ, ಉಸಿರಾಟ ಜಾಗೃತಿ, ಮಾನಸಿಕ-ದೈಹಿಕ ಸಹಿಷ್ಣುತೆ ಹಾಗೂ ಯೋಗಪ್ರೇರಿತ ಜೀವನಶೈಲಿಯ ಜಾಗತಿಕ ಪ್ರಸಾರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ, ಶ್ವಾಸ ಯೋಗ ಕೇಂದ್ರವು ವಿಶ್ವಪ್ರಸಿದ್ಧ ಉಸಿರಾಟ ಸಾಧಕ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಅನ್ನು ಪ್ರದಾನ ಮಾಡಿತು. ಈ ಪ್ರತಿಷ್ಠಿತ ಗೌರವ ಸಮಾರಂಭವು ಶ್ವಾಸಗುರುಗಳೆಂದೇ ಖ್ಯಾತರಾದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ…

Read More