ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ
ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ. ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ…
ಬಾಗಲಕೋಟೆ ಜಿಲ್ಲೆಯ 36 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ
ಬಾಗಲಕೋಟೆ ಜಿಲ್ಲೆಯ 36 ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.24 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 65 ಟಿಪ್ಪರ್, 18 ಹಿಟಾಚಿ ಸೇರಿ ಭಾರೀ ಪ್ರಮಾಣದ ಸಲಕರಣೆಗಳನ್ನು ಜಪ್ತಿ ಮಾಡಲಾಗಿದೆ. ಅಕ್ರಮ ತಡೆಯದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ದೂರು ಕೂಡ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ…
ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!
ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23. 35 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ…
ಲೋಕಾಪುರದಲ್ಲಿ ಒತ್ತುವರಿ ಅಂಗಡಿಗಳ ತೆರವು!
ಬಾಗಲಕೋಟೆ ಜಿಲ್ಲೆ ಲೋಕಾಪುರ ಪಟ್ಟಣದ ಪ್ರಮುಖ ಕೇಂದ್ರವಾದ ಬಸವೇಶ್ವರ ವೃತ್ತದ ಬಳಿ ಇಂದು ಮುಂಜಾನೆಯೇ ಜೆಸಿಬಿ ಘರ್ಜಿಸಿದೆ. ಮುಧೋಳ ತಹಶೀಲ್ದಾರ್ ಅವರ ಕಡಕ್ ಸೂಚನೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಮುಧೋಳ ಇಒ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳ ತಂಡ, ರಸ್ತೆ ಬದಿಯಲ್ಲಿದ್ದ ಒತ್ತುವರಿ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದೆ. ದೀರ್ಘಕಾಲದಿಂದ ಪಾದಚಾರಿಗಳ ಮತ್ತು ವಾಹನಗಳ ಮುಕ್ತ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ಅಂಗಡಿಗಳನ್ನು ನೆಲಸಮಗೊಳಿಸುವ ಮೂಲಕ ರಸ್ತೆ ಸುಗಮಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ…
ಲಿಂಗದಳ್ಳಿಯಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವ
ವಿಜಯಪುರ: ತಾಳಿಕೋಟಿ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು.ಶುಕ್ರವಾರ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ 6 ಗಂಟೆಗೆ ಸಾಂಪ್ರದಾಯಿಕ ಗಂಗಾಸ್ಥಳ ಮುಗಿಸಿಕೊಂಡು ಬಂದ ಬಳಿಕ, ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದೇವತೆಯ ಭವ್ಯ ರಥೋತ್ಸವ ನೆರವೇರಿತು.ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು. ಸಾರವಾಡದ ಈಶ್ವರ ಗಾರುಡಿ ಗೊಂಬೆ ಗೆಳೆಯರ ಬಳಗ, ಬಾದಾಮಿ ತಾಲೂಕಿನ ಗೋವಿನಕೊಪ್ಪದ…
ಎಆರ್ಒ ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ಎನ್.ಆರ್.ರಮೇಶ್ ದೂರು
ಬೆಂಗಳೂರು ಮಾಜಿ ಸಚಿವ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅವರ ಪರಮಾಪ್ತ ಅಶ್ವತ್ಥ್ ಎಂಬ ವ್ಯಕ್ತಿ ನಿರ್ಮಿಸಿರುವ ಅಕ್ರಮ ಬಡಾವಣೆಗೆ ಕಾನೂನು ಬಾಹಿರವಾಗಿ ಎ ಖಾತಾಗಳನ್ನು ಮಾಡಿ ಕೊಡುವ ಮೂಲಕ ಪಾಲಿಕೆಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಹೇರೋಹಳ್ಳಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಮಂಜುಳಾ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿರುವ 4.20 ಎಕರೆ ವಿಸ್ತೀರ್ಣದ ಸ್ವತ್ತಿನಲ್ಲಿ ಅಶ್ವಥ್ ಎಂಬಾತ ಬಿಡಿಎ ನಕ್ಷೆ ಮಂಜೂರಾತಿಯನ್ನೇ ಪಡೆಯದೆ…
ರಾಮದುರ್ಗದಲ್ಲಿ ಸುರಿದ ಗುಡುಗು ಸಹಿತ ಮಳೆ
ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ 20 ನಿಮಿಷ ಸುರಿದ ಮಳೆ ಜನತೆಗೆ ತಂಪನ್ನೆರೆಯಿತು. ಗುಡುಗು ಹಾಗೂ ಬಿರುಗಾಳಿ ಸಹಿತ ಸುರಿದ ಮಳೆ ಜನರಿಗೆ ಸ್ವಲ್ಪ ಸಮಾಧಾನ ನೀಡಿತು. ಕಳೆದ ಒಂದು ತಿಂಗಳಿಂದ ತಾಲ್ಲೂಕಿನಲ್ಲಿ ಪ್ರತಿದಿನ 38 ರಿಂದ40 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ನೆತ್ತಿ ಸುಡುವ ಬಿಸಿಲಿಗೆ ಜನರು ಮನೆಗಳಿಂದ ಹೊರಬರಲಾರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆವರೆಗೂ ಸುಡುವ ಬಿಸಿಲು ಇತ್ತು ನಾಲ್ಕು ಗಂಟೆ ನಂತರ ಗುಡುಗು ಹಾಗೂ ಬಿರುಗಾಳಿ ಸಹಿತ ಸುರಿದ ಮಳೆ.
ಅಬಕಾರಿ ಪ್ರಕರಣಗಳಲ್ಲಿ ಜಪ್ತಾದ 11 ದ್ವೀಚಕ್ರ 01ನಾಲ್ಕುಚಕ್ರ ವಾಹನ ದಿನಾಂಕ:14/05/2026 ರಂದು ಹರಾಜು ಮಾಡಲಾಗುವುದು.
ಮಾನ್ಯ ಅಬಕಾರಿ ಉಪ ಆಯುಕ್ತರು ಬೆಳಗಾವಿ (ದಕ್ಷಿಣ) ಜಿಲ್ಲೆ ಬೆಳಗಾವಿ ರವರ ಆದೇಶದಂತೆ ಮಾನ್ಯ ಅಬಕಾರಿ ಉಪ ಅಧಿಕ್ಷಕರು ರಾಮದುರ್ಗ ಉಪ ವಿಭಾಗ ರವರ ನೇತೃತ್ವದಲ್ಲಿ ದಿನಾಂಕ:14/05/2026 ರಂದು ಅಬಕಾರಿ ಪ್ರಕರಣಗಳಲ್ಲಿ ಜಪ್ತಾದ ವಾಹನಗಳನ್ನು ಟೆಂಡರ್ ಕಂ-ಬಹಿರಂಗ ಹರಾಜು ಮಾಡಲಾಗುವುದು 11 ದ್ವೀಚಕ್ರ ವಾಹನ 01 ನಾಲ್ಕುಚಕ್ರ ಒಟ್ಟು 12 ವಾಹನಗಳನ್ನು ಸಾರ್ವಜನಿಕ ಟೆಂಡರ್ ಕಂ-ಬಹಿಂರಂಗ ಹರಾಜು ಮಾಡಲಾಗುವುದು ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಜನಸಂಖ್ಯೆಯಲ್ಲಿ ಬಂದು ಹರಾಜಿನಲ್ಲಿ ಭಾಗವಹಿಸುವಂತೆಅಬಕಾರಿ ಇಲಾಖೆಯವರು ಹೇಳಿದರು.
ಕಟಕೋಳ ಪೊಲೀಸರು ₹21,02,560 ಲಕ್ಷ ಮೌಲ್ಯದ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ದೂರು ನೀಡಿದ 48 ಗಂಟೆಯಲ್ಲಿ ಕಟಕೋಳ ಪೊಲೀಸರಿಂದ ಮನೆ ಕಳ್ಳತನ ಪ್ರಕರಣದ ಇಬ್ಬರೂ ಆರೋಪಿತರ ಬಂಧನ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ದಿಲ್ಶಾದ ಸೈದುಸಾಬ ನದಾಫ್ ಅವರ ಮನೆಯಲ್ಲಿ ಇದ್ದ ಬಂಗಾರದ ಕಳ್ಳತನದ ಸಂಬಂಧಿಸಿದಂತೆ ಕಟಕೋಳ ಪೊಲೀಸ್ ಠಾಣಾ ಪೊಲೀಸರು ಇಬ್ಬರು ಆರೋಪಿತರನ್ನು ಬಂಧಿಸುವುದರೊಂದಿಗೆ, ಕಳ್ಳತನವಾಗಿದ್ದ 21,02,560/- ಕಿಮ್ಮತ್ತಿನ 154.6ಗ್ರಾಂ ಬಂಗಾರದ ಆಭರಣ ಹಾಗೂ 11,250/- ಕಿಮ್ಮತ್ತಿನ 45 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕಃ 05/05/2026 ರಂದು ದಿಲ್ಶಾದ ಸೈದುಸಾಬ ನದಾಫ್ ಇವಳು…
ಕರೋಶಿ ಆಸ್ಪತ್ರೆ ಮೇಲೆ ರೇಡ್! ಹೈ-ಡೋಸ್ ಔಷಧಿ ನೀಡಿ ಮೋಸ: ನಕಲಿ ವೈದ್ಯರಿಗೆ ಡಿಎಚ್ಒ ಶಾಕ್!
ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ನಕಲಿ ಡಾಕ್ಟರ್ಗಳಿಗೆ ಡಿಎಚ್ಒ ತಂಡ ಬಿಗ್ ಶಾಕ್ ಕೊಟ್ಟಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಗಡಾದ್ ನೇತೃತ್ವದ ಏಳು ತಂಡಗಳು ಒಂದೇ ಟೈಮ್ಗೆ ಗ್ರಾಮದ ಆಸ್ಪತ್ರೆ-ಕ್ಲಿನಿಕ್ಗಳ ಮೇಲೆ ದಾಳಿ ಮಾಡಿ ದಾಖಲೆಗಳು, ಔಷಧಿ, ಚಿಕಿತ್ಸೆ ಪದ್ಧತಿ ಎಲ್ಲವನ್ನೂ ಚೆಕ್ ಮಾಡಿದ್ದಾರೆ. ಕೆಲವರು ಮೆಡಿಕಲ್ ಓದಿಲ್ಲ, ಆದರೂ ಡಾಕ್ಟರ್ ಅಂತ ಕುಳಿತು ಹಾಯ್ಡೋಸ್ ಔಷಧಿ ಕೊಡುತ್ತಿದ್ದಾರೆ ಅಂತ ಬಂದ ದೂರು ಮೇರೆಗೆ ಈ ಆಪರೇಷನ್ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಡೆದ ಈ ದಾಳಿಯಲ್ಲಿ…
