WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಹಳ್ಳದ ಉಸುಕನ್ನು ಸಂಗ್ರಹಿಸಿಕೊಂಡು ರಾತ್ರಿ ಹೊತ್ತು ಟ್ರಿಪ್ಪರ್ ಹಾಗೂ ಟ್ರ್ಯಾಕ್ಟರ್ ಮೂಲಕ ಬೇರೆ ಕಡೆ ಸಾಗಿಸುತ್ತಿದ್ದರು ಇದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ಕಲ್ಲೂರು ಗ್ರಾಮದ ಹಳ್ಳದ ಅಕ್ರಮ ಮರಳು ತುಂಬುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಂಗ್ರಹಿಸಿ ಇಟ್ಟಂತ ಅಕ್ರಮ ಮರಳನ್ನು ಜಪ್ತಿ ಮಾಡಿದರು.
