ಧಾರವಾಡ ಜಿಲ್ಲೆಯ ಪಿಯುಸಿ ದ್ವಿತೀಯ ಫಲಿತಾಂಶದಲ್ಲಿ ಸುಧಾರಣೆ; 23 ನೇ ರ್ಯಾಂಕ್‍ದಿಂದ ರಾಜ್ಯಕ್ಕೆ 17 ನೇ ರ್ಯಾಂಕ್‍ಗೆ ಬಡ್ತಿ; ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪಿಯುಸಿ ಶಿಕ್ಷಣಕ್ಕೆ ಈ ವರ್ಷ ಹೆಚ್ಚು ಆದ್ಯತೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

WhatsApp Group Join Now

ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆ ಆರಂಭವಾಗಿದ್ದು, ಕಳೆದ ವರ್ಷ ಧಾರವಾಡ ಜಿಲ್ಲೆ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶದಲ್ಲಿ 23ನೇ ರ್ಯಾಂಕನಲ್ಲಿತ್ತು; ಆದರೆ ಈ ವರ್ಷ ಅದು ರಾಜ್ಯಕ್ಕೆ 17ನೇ ರ್ಯಾಂಕ್‍ಗೆ ಬಡ್ತಿ ಪಡೆದಿದೆ. ಜೊತೆಗೆ ರಾಜ್ಯಕ್ಕೆ ಕಲಾ ವಿಭಾಗದಲ್ಲಿ 2, ವಾಣಿಜ್ಯ ವಿಭಾಗದಲ್ಲಿ 2 ಮತ್ತು ವಿಜ್ಞಾನ ವಿಭಾಗದಲ್ಲಿ 5 ರ್ಯಾಂಕ್‍ಗಳನ್ನು ಜಿಲ್ಲೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದು, ಒಟ್ಟು ಒಂಬತ್ತು ರ್ಯಾಂಕ್‍ಗಳು ಜಿಲ್ಲೆಗೆ ಬಂದಿದೆ ಎಂದು ಮಿಷನ್ ವಿದ್ಯಾಕಾಶಿ ಯೋಜನೆಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಪ್ರಕಟವಾದ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಕುರಿತು ಪತ್ರಿಕಾಗೋಷ್ಠಿ ಜರುಗಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಶೈಕ್ಷಣಿಕ ಬದಲಾವಣೆ ಆರಂಭವಾಗಿದೆ. ಕಳೆದ ವರ್ಷ ಜಿಲ್ಲೆಯ ಫಲಿತಾಂಶ ಕಲಾವಿಭಾಗದಲ್ಲಿ ಶೇ. 53 ರμÁ್ಟಗಿತ್ತು. ಅದು ಪ್ರಸಕ್ತ ವರ್ಷ ಶೇ. 55.21 ಆಗಿದೆ. ಕಲಾವಿಭಾಗದಲ್ಲಿ 6,044 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 3,337 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪ್ರಸ್ತುತ ವರ್ಷ ಫಲಿತಾಂಶ ಶೇ. 65.44 ರಷ್ಟಾಗಿದೆ. 6,849 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,482 ಜನ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸ್ತುತ ವರ್ಷ ಶೇ. 84.29 ರಷ್ಟು ಫಲಿತಾಂಶವಾಗಿದೆ. 12,570 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ಅದರಲ್ಲಿ 10,595 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 25,463 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 18,414 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ. 72.32 ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಸಭೆಗೆ ಆಗಮಿಸಿದ್ದ ರ್ಯಾಂಕ್ ವಿಜೇತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಸಿಇಓ ಅವರು ಸಿಹಿ ವಿತರಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಕೆ.ಪಿ. ಹಾಗೂ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಾದ ನಾಗವೇಣಿ ರಾಯಚೂರ, ಶ್ರೇಯಾ ಜೋಷಿ, ಕಾವೇರಿ ಕೆವತಿ ಹಾಗೂ ಆಯುಷ್ಯ ಮತ್ತು ರ್ಯಾಂಕ್ ವಿಜೇತ ವಿದ್ಯಾರ್ಥಿಗಳ ಕಾಲೇಜು ಪ್ರಾಚಾರ್ಯರರು, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.

ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ, ಹುಬ್ಬಳ್ಳಿ ತಾಲೂಕಿನ ಬೈರಿದೇವರಕೊಪ್ಪದ ವಿದ್ಯಾನಿಕೇತನ ವಿಜ್ಞಾನ ಪಿಯು ಕಾಲೇಜನ ವಿದ್ಯಾರ್ಥಿನಿ ಸುಮಿತಾ ಕಿಶೋರಕುಮಾರ ರಾಶಿಂಕರ್ ಅವರು 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಮತ್ತು ಇದೇ ಕಾಲೇಜಿನ ವಿದ್ಯಾರ್ಥಿ ಅಭಿನವ ರಾಮಪ್ಪ ಹಿರೇಕುಂಬಿ ಹಾಗೂ ಶ್ರೀಶೈಲ ಬಂಡಿವಾಡ ಮತ್ತು ಧಾರವಾಡದ ವಿದ್ಯಾ ಪಿ ಹಂಚಿಮನಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಕಾವೇರಿ ಕೆವತಿ ಅವರು 592 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳು 8ನೇ ರ್ಯಾಂಕ್ ಹಂಚಿಕೊಂಡಿದ್ದಾರೆ.
ವಿದ್ಯಾ ಪಿ ಹಂಚಿಮನಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಆಯುμï ಅವರು 591 ಅಂಕಗಳನ್ನು ಪಡೆದಯುವ ಮೂಲಕ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದಿದ್ದಾರೆ.

ಕಲಾ ವಿಭಾಗ: ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಹುಬ್ಬಳ್ಳಿಯ ವಿದ್ಯಾನಗರದ ಎಸ್‍ಕೆ ಕಲಾ ಎಚ್‍ಎಸ್‍ಕೆ ವಿಜ್ಞಾನ ಪಿಯು ಕಾಲೇಜನ ಇನೆμÁ್ಕ ನಡುಗಡ್ಡಿ ಅವರು 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾರೆ. ಹುಬ್ಬಳ್ಳಿಯ ಗೋಪನಕೊಪ್ಪದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಾಗವೇಣಿ ಅಂತೋಣಿ ರಾಯಚೂರು ಅವರು 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗ: ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ಹುಬ್ಬಳ್ಳಿ ವಿದ್ಯಾನಗರದ ಕೆಎಲ್‍ಇ ವಾಣಿಜ್ಯ ಪಿಯು ಕಾಲೇಜಿನ ಭುವಿ ಸಿ. ಶಹಾ ಅವರು 592 ಅಂಕಗಳನ್ನು ಮತ್ತು ಜೆಜಿ ವಾಣಿಜ್ಯ ಮತ್ತು ವಿಜ್ಞಾನ ಪಿಯು ಕಾಲೇಜಿನ ಶ್ರೇಯಾ ಜೋಷಿ ಅವರು 591 ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

About The Author