ಮಹಾಂತೇಶ ನಗರದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ಜನಸಾಮಾನ್ಯರ ಹಿತರಕ್ಷಣಾ ಸಮಿತಿ, ವಲಯ ಅರಣ್ಯ ಇಲಾಖೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ಪಟ್ಟಣದ ಮಹಾಂತೇಶನಗರ ಉದ್ಯಾನವನದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ಸಸಿಗೆ ನೀರುಣಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಮನೆಗೊಂದು ಸಸಿ ನೆಟ್ಟು ಪಾಲನೆ ಪೋಷಣೆ ಮಾಡಿದಲ್ಲಿ ಪರಿಸರ ಸಂರಕ್ಷಣೆಯ ಧೈಯ ಪಾಲಿಸಿದಂತಾಗುತ್ತದೆ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜನಸಾಮಾನ್ಯರ ಹಿರತಕ್ಷಣಾ ಸಮಿತಿಯ ಅಧ್ಯಕ್ಷ ಈರಣ್ಣ ಕಲ್ಯಾಣಿ, ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಳಿ, ವಿರೇಶ ಬಳಿಗೇರ, ಬಿ.ಎಲ್. ಸಂಕನಗೌಡ್ರ, ರಾಜೇಶ ಹರ್ಲಾಪೂರ, ಚಂದನ ಪಾಟೀಲ, ಪರ್ವೇಜ್ ಪಣಿಬಂದ, ಡಿ.ಎಫ್, ಹಾಜಿ, ಪ್ರಶಾಂತ ಅಂಗಡಿ, ಮಂಜುನಾಥ ಮಾದರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

About The Author