Prashanth Angadi

ಕೇಂದ್ರ ಸರ್ಕಾರದ  ವಕ್ಫ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಮದುರ್ಗದಲ್ಲಿ  ಬೃಹತ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ  ರಾಮದುರ್ಗ ತಾಲೂಕ ಸಂವಿಧಾನ ರಕ್ಷಣಾ ಸಮಿತಿ  ನೇತೃತ್ವದಲ್ಲಿ ಮುಸ್ಲಿಮರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಕ್ಪ್ ನೂತನ ತಿದ್ದುಪಡಿ ಕಾಯ್ದೆಯನ್ನು ಮರಳಿ ಪಡೆಯಬೇಕು ಎಂದು ಘೊಷಣೆ ಕೂಗುತ್ತ ಪಟ್ಟಣದ ಹರಳಯ್ಯ ವೃತ್ತದಿಂದ ನೇರವಾಗಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ  ಮುಖಾಂತರ ರಾಷ್ಟ್ರಪತಿಗಳು ಭಾರತ ಸರಕಾರ ಮನವಿ ಸಲ್ಲಿಸಿದರು. ಈ ದೇಶದ ಎಲ್ಲ ಜನರಿಗೆ ಅವರು ಬಯಸುವ ಧರ್ಮವನ್ನು ಆಚರಿಸುವ ಹಾಗೂ ಆಚರಸದೇ…

Read More

ಮೇ. 12 ರಂದು ಭಗವಾನ್ ಬುದ್ಧ ಜಯಂತಿ

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಮೇ 12, 2025 ರಂದು ಬೆಳಿಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ಮನಃಪೂರ್ವಕವಾಗಿ, ಅರ್ಥಗರ್ಭಿತವಾಗಿ ಆಚರಿಸೋಣ ಎಂದು ತಿಳಿಸಿದರು. ಅಂದು ಬೆಳಿಗ್ಗೆ 9…

Read More

ಬೆಳಗಾವಿಯಲ್ಲಿ ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅನೀಸ್ ಸೈಯದ್, ಪತ್ನಿ ಅಯಿಮನ್ ಅನಿಸ್ ಸೈಯದ್, ಮಗ ಅಯಿಮನ್ ಮೃತ ದುರ್ದೈವಿಗಳು. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಕೀಯಾ ಕಾರು…

Read More

ಪಂಚ ಗ್ಯಾರಂಟಿ ಕಿರುಪುಸ್ತಕ ಬಿಡುಗಡೆ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ.ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಬಹುಜನರ ಜೀವನಮಟ್ಟ ಸುಧಾರಣೆಗೆ ಇದರಿಂದ ಅನುಕೂಲವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ…

Read More

ಶೌಚಾಲಯ ವ್ಯವಸ್ಥೆ ಇಲ್ಲದ ರಾಮದುರ್ಗ ತಹಶೀಲ್ದಾರ್ ಕಚೇರಿ; ಸಾರ್ವಜನಿಕರ ಪರದಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡಬೇಕಾದ ಸ್ಥಿತಿಯಿದೆ. ರಾಮದುರ್ಗ ತಹಸೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ತುರ್ತು ಬೇಕಾಗಿರುವ ಶೌಚಾಲಯದ ವ್ಯವಸ್ಥೆ ಕಲ್ಪಿಸದೇ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ. ಇರುವ ಶೌಚಾಲಯದ ಬಾಗಿಲನ್ನು ಬಂದ್ ಮಾಡುವ ಮೂಲಕ ಸಾರ್ವಜನಿಕರ ಉಪಯೋಗದಿಂದ ದೂರವಿರಿಸಿದ್ದು, ಕಚೇರಿಗೆ ಆಗಮಿಸುವ ಸಾರ್ವಜನಿಕರು ಶೌಚಾಲಯಕ್ಕಾಗಿ ಕಚೇರಿಯ ಬಲಕ್ಕಿನ ಭಾಗದ ಗೋಡೆ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಆದ್ದರಿಂದ ವಾತಾವರಣ ದುರ್ನಾತದಿಂದ ಕೂಡಿದೆ. ಮಹಿಳೆಯರು ಪರದಾಡಬೇಕಾದ…

Read More

3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ ರಾಮದುರ್ಗ ತಾಲೂಕಿನ ವ್ಯಾಪ್ತಿಯ ಬದಾಮಿ, ಗೊಡಚಿ, ಗೋಕಾಕ ಪಾಲ್ಸ್ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಸೇರಿದಂತೆ ಒಟ್ಟು 3.50 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿ ಅವರು ಮಾತನಾಡಿದರು.ಕುನ್ನಾಳ ಗ್ರಾಮಸ್ಥರ ಬೇಡಿಕೆಯಂತೆ…

Read More

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು

Read More

ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಇಬ್ಬರು ಕನ್ನಡಿಗರು ಸೇರಿದಂತೆ 27 ಅಮಾಯಕ ಜನರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಲ್ಲಿ ಭಯದ ವಾತಾವತವರಣ ಉಂಟಾಗಿದೆ….

Read More

ಶಿರೂರ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ ಜಿಲ್ಲಾ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತ್ತು. ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿರೂರು ಗ್ರಾಮ ಪಂಚಾಯತಿಯ ಡಿಜಿಟಲ್ ಲೈಬ್ರರಿ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಕಥೆ, ಕವನ, ಕಾದಂಬರಿ ಹಾಗೂ ಸ್ವರ್ದಾತ್ಮಕ ಪುಸ್ತಕಗಳು ಅರಿವು ಕೇಂದ್ರದಲ್ಲಿ ಲಭ್ಯವಿದ್ದು, ಶಾಲಾ ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು. ಪ್ರತಿದಿನ ಅರಿವು ಕೇಂದ್ರದಲ್ಲಿ ಗ್ರಾಮದ ಹಿರಿಯರು…

Read More

ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ

ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ. ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More