ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇವರಿಂದ ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ. ಸಿರುಗುಪ್ಪ ಪಟ್ಟಣದ ದೇಶನೂರು ರಸ್ತೆ, ಆದೋನಿ ರಸ್ತೆ, ಬಳ್ಳಾರಿ ರಸ್ತೆ ಮತ್ತು ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆ, ಹೊಸಪೇಟೆ ರಸ್ತೆ ಹಾಗೂ ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್…
