ಜಿಲ್ಲಾಡಳಿತದಿಂದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತ್ಯೋತ್ಸವ
ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿ ಅವರು ಮಾತನಾಡಿದರು.ಹನ್ನೆರಡನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ನುಲಿಯ ಚಂದಯ್ಯನವರು ಮಹಾನ್ ಕಾಯಕಯೋಗಿ ಆಗಿದ್ದರು. ಅವರು ತಮ್ಮ ವಚನಗಳ ಮೂಲಕ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆಗಳನ್ನು ಸಾರಿ, ಜನ ಸಾಮಾನ್ಯರಲ್ಲಿ ಭಾವೈಕ್ಯತೆಯ…
