ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ; ಸಚಿವ ಸಂತೋಷ ಲಾಡ
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ…
