Prashanth Angadi

ಈಶಾನ್ಯ ಪದವಿಧರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲುವು : ಜ್ಯೋತಿ

ಕೊಪ್ಪಳ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವಿಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಹಾಲಿ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ಮತ್ತೊಮ್ಮೆ ಗೆಲ್ಲುವದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡೆ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ನಗರದ ವಕೀಲರು, ಪದವಿಧರರನ್ನು ಭೇಟಿ ಮಾಡಿ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಚಂದ್ರಶೇಖರ್ ಪಾಟೀಲ್ ಅವರಿಗೆ ಅಪಾರ ಅನುಭವವಿದ್ದು, ಒಂದು ಬಾರಿ ಸದಸ್ಯರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ, ಪದವಿಧರರ ಹಲವು ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ, ಪರಿಷತ್ನಲ್ಲಿ ಅತಿ ಹೆಚ್ಚಿನ ಪ್ರಶ್ನೆಗಳನ್ನು…

Read More

ಚರಂಡಿ ನೀರು ಶುದ್ಧಿಕರಣ ಘಟಕದಲ್ಲಿ ಬಾಲಕರ ಬಿದ್ದು ಸಾವನಪ್ಪಿರುವ ಪ್ರಕರಣ: ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ

ವಿಜಯಪುರ ಚರಂಡಿ ನೀರು ಶುದ್ಧಿಕರಣ ಘಟಕದಲ್ಲಿ ಬಾಲಕರ ಬಿದ್ದು ಸಾವನಪ್ಪಿರುವ ಪ್ರಕರಣ. ಮೃತ ಬಾಲಕರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಹಿನ್ನೆಲೆ. ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗೌಳಿ ಸಮಾಜದ ಮುಖಂಡರು. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದ ಗೌಳಿ ಸಮಾಜದ ಮುಖಂಡರು. ಮಹಾನಗರ ಪಾಲಿಕೆ ಆಯುಕ್ತರು ಪರಿಹಾರ ಘೋಷಣೆಗೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪ. ಕೇಳಿದರೆ ನೀತಿ ಸಂಹಿತೆ ಜಾರಿ ಇದೆ ಎಂದು ಸಬೂಬು ಹೇಳಿ ಕಳುಹಿಸುತ್ತಿರುವ ಆಯುಕ್ತರು. ಬೇರೆ…

Read More

ಹೂವಿನಹಡಗಲಿ:ಶ್ರೀಗ್ರಾಮದೇವತೆ ಊರಮ್ಮದೇವಿ ಉತ್ಸವ

ವಿಜಯನಗರ ಜಿಲ್ಲೆ ಹೂವಿನ ಹಡಗಲಿ:ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಯ ರಥೊತ್ಸವ, ಗುರುವಾರ ವಿಜೃಂಭಣೆಯಿಂದ ಜರುಗಿತು. ಧಾರ್ಮಿಕ ನಿಯಮಾನುಸಾರ ದೇವಿ ಚೌತಿ ಮನೆಯ ಮುಂಭಾಗದಲ್ಲಿ, ಎಲ್ಲಾ ಕಾರ್ಯಕ್ರಮಗಳನ್ನು ಜರುಗಿಸಿದ ನಂತರ ದೇವಿಯ ಉತ್ಸವಕ್ಕೆ ಚಾಲನೆ ನೀಡಲ‍ಾಯಿತು. ಸಂಪ್ರದಾಯದಂತೆ ಬೆನ್ನುಗೋಡೆಯಿಂದ ಪಟ್ಟಣದ ಗೌಡರ ಮನೆ, ಬಣಕಾರ, ಶಾನಬೋಗರ ಮನೆ, ಹಾಗೂ ಪ್ರಮುಖ ದೇವಾಲಯಗಳಿಗೆ ತೆರಳಿದ ದೇವಿ ಉತ್ಸವ ಮೂರ್ತಿಗೆ ಉಡಿ ತುಂಬಲಾಯಿತು. ಪಟ್ಟಣದ ಗೋಣಿ ಬಸವೇಶ್ವರ ದೇವಸ್ಥಾನದಿಂದ, ವಾಲಿಯರ ಓಣಿಯ ಮೂಲಕ ಬಂದ ದೇವಿ ಉತ್ಸವ ಮೂರ್ತಿಯು ಚೌತಿ…

Read More

ಛಾಯಾಗ್ರಾಹಕನ ಮೇಲೆ ಹಲ್ಲೆ ಖಂಡಿಸಿ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ವೃತ್ತಿ ನಿರತ ಛಾಯಾಗ್ರಾಹಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ರಾಮದುರ್ಗ ತಾಲೂಕ ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಾಮದುರ್ಗ ಸಂಘದ ಪದಾಧಿಕಾರಿಗಳು ಶುಕ್ರವಾರ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಶಿವಾಜಿನಗರದ ಶೈಮ್ಸ್ ಕಲ್ಯಾಣ ಮಂಟಪದಲ್ಲಿವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನುಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.ವೃತ್ತಿ ನಿರತ ಛಾಯಾಗ್ರಾಹಕರ ಕ್ಯಾಮೆರಾ ಪರಿಕರ ಕಳ್ಳತನ, ಸ್ಪುಡಿಯೋಗಳಲ್ಲಿ ಕಳ್ಳತನ ಮತ್ತು ಛಾಯಾಗ್ರಾಹಕರನ್ನು ರಸ್ತೆಗೆ ಅಡ್ಡಗಟ್ಟಿ ಪರಿಕರಗಳನ್ನು ವಶ…

Read More

ಮಾಜಿ ಸಚಿವರಾದ ಎಚ್ ಆಂಜನೇಯ ರವರಿಗೆ MLC ಸ್ಥಾನ ನೀಡಲು ಕರ್ನಾಟಕ ಮಾದಿಗರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಶೈಲ ರತ್ನಾಕರ್ ಆಗ್ರಹ

ರಾಜ್ಯದಲ್ಲಿ ಜೂನ್ 17ರಂದು ನಿವೃತ್ತಿ ಹೊಂದಲಿರುವ 11 ಒಐಆ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಭರ್ತಿ ಮಾಡುತ್ತಿರುವ ಖಾಲಿ ಇರುವ ಸ್ಥಾನಕ್ಕೆ ನಾಡ ಕಂಡ ಅಪ್ರತಿಮ ನಾಯಕ ಶೋಷಿತರ ದಮನಿತರ ದಲಿತರ ಗಟ್ಟಿ- ಧ್ವನಿ ಸ್ವಾಭಿಮಾನದ ದೈತ್ಯ, ಸರ್ವಜನಾಂಗದ ನಾಯಕ,ದೇವದಾಸಿ ತಾಯಂದಿರಿಗೆ ತಿಂಗಳ ಮಾಶಾಸನ, ದೇವದಾಸಿ ತಾಯಂದಿರ ಮಕ್ಕಳಿಗೆ ಮದುವೆಗೆ ಪ್ರೋತ್ಸಾಹ ಧನ,ಹೆಚಿನ ವಿದ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಲು ಪ್ರೋತ್ಸಾಹ ನೀಡಲು ಯೋಜನೆ ಜಾರಿಗೆ ತಂದವರು ಮತ್ತು ಮೊರಾರ್ಜಿ ದೇಸಾಯಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,…

Read More

ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಹಾಗೂ ಮಳೆಗಾಲ ಪೂರ್ವಭಾವಿ ಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ‌ ಮಳೆಯ ಮುನ್ಸೂಚನೆ ಇರುವುದರಿಂದ ರೈತರಿಗೆ ಸಕಾಲಕ್ಕೆ ಬೀಜ-ಗೊಬ್ಬರ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಈ ಬಾರಿ ಉತ್ತಮ‌ ಮಳೆಯಾಗುವ ನಿರೀಕ್ಷೆ ಇರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವಂತೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ…

Read More

ಕಾಲೇಜುಗಳಲ್ಲಿ ರೋಸ್ಟರ ಪ್ರಕಾರ ಪ್ರವೇಶ ಮಾಡಿಕೊಂಡ ವಿವರ ಪ್ರದರ್ಶಿಸುಂತೆ ಪರಿಷತ್

ವಿಜಯಪುರ : 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆಪ್ರವೇಶ ಪ್ರಾಂರಭವಾಗಿದ್ದು, ಬಹುತೇಕ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಪ್ರವೇಶ ಪಡೆದ ಬಗ್ಗೆ ಯಾವುದೇ ಮಾಹಿತಿಯನ್ನು ಪ್ರದರ್ಶನ ಮಾಡದೇ ಈಗಾಗಲೇ ಪ್ರವೇಶಮುಕ್ತಾಯವಾಗಿವೆ, ಸೀಟ್ ಭರ್ತಿಯಾಗಿವೆ ಎಂಬ ಸಿದ್ದ ಉತ್ತರವನ್ನು ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಇಲಾಖೆಯ ಸುತ್ತೋಲೆಯ ಪ್ರಕಾರ ಪ್ರವೇಶ ಪ್ರಕ್ರಿಯೆ…

Read More

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಫೋಟೋಗ್ರಾಫರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಗರ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರ ದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ನನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾರೆ. ಇನ್ನೊಂದು ಬೈಕ್ ನಲ್ಲಿದ್ದ ಬೈಕ್ ಸವಾರರನ್ನು…

Read More

ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ ಆಗಿರುವ ಘಟೆನೆ ನಡೆದಿದೆ.‌ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಈ ವೇಳೆ ಪ್ರವಾಸಿಗರನ್ನು ಹೊತ್ತೋಯ್ದ ಬೋಟ್ ಮುಳುಗಡೆಯಾಗಿ, ಬೋಟಿನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.

Read More

ಎಟಿಎಂ ನಲ್ಲಿ ಹಣ ಪಡೆದುಕೊಡಿ ಎಂದು ಕೇಳಿದಂತಹ ರೈತನೊಬ್ಬನಿಗೆ ಕೀಡಿಗೇಡಿಯೋರ್ವ ವಂಚಿಸಿ 61 ಸಾವಿರ ಲಪಟಾಯಿಸಿ ಪರಾರಿ

ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಮ್ ನಲ್ಲಿ ಜರುಗಿದ್ದು ಹನೂರು ತಾಲ್ಲೂಕಿನ ಕುರಟ್ಟಿಹೊಸರು ಗ್ರಾಮದ ರೈತ ಬಸವರಾಜು ಎಂಬಾತನೆ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ ಈತ ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಂ ಗೆ ಆಗಮಿಸಿ ನನಗೆ ಹಣ ಪಡೆಯಲು ತಿಳಿದಿಲ್ಲ ನನಗೆ ಹಣ ತೆಗೆದುಕೊಳ್ಳಲು ಸಹಾಯ ಮಾಡಿ ಎಂದು ಅಪರಿಚಿತ ವ್ಯಕ್ತಿ ಬಳಿ ಕೇಳಿದಾಗ ಆತ ರೈತ ಕೇಳಿದ 5000 ರೂ ಹಣವನ್ನು ತೆಗದು ಕೂಟ್ಡು ನಂತರ ಎಟಿಎಂನ್ನ ಬದಲಿಸಿ, ಕೋಡ್ ನ್ನು…

Read More