ಈಶಾನ್ಯ ಪದವಿಧರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲುವು : ಜ್ಯೋತಿ
ಕೊಪ್ಪಳ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವಿಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಹಾಲಿ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ಮತ್ತೊಮ್ಮೆ ಗೆಲ್ಲುವದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡೆ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ನಗರದ ವಕೀಲರು, ಪದವಿಧರರನ್ನು ಭೇಟಿ ಮಾಡಿ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಚಂದ್ರಶೇಖರ್ ಪಾಟೀಲ್ ಅವರಿಗೆ ಅಪಾರ ಅನುಭವವಿದ್ದು, ಒಂದು ಬಾರಿ ಸದಸ್ಯರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ, ಪದವಿಧರರ ಹಲವು ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ, ಪರಿಷತ್ನಲ್ಲಿ ಅತಿ ಹೆಚ್ಚಿನ ಪ್ರಶ್ನೆಗಳನ್ನು…
