ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ವಹಿಸಿ ಅವರು ಮಾತನಾಡಿದರು. ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು.ಸರಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು…
