ಪ್ರಸಕ್ತ ಸಾಲಿಗೆ ಶೀಘ್ರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಾಗಬೇಕು – ಡಾ ರಾಜು ಕಂಬಾರ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025 -26 ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನಗಳು ತೊಂದರೆಯಾಗುತ್ತಿವೆ. ವಿದ್ಯಾರ್ಥಿಗಳ ಓದಿಗೆ ಸಮಸ್ಯೆ ಉಂಟಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಅತಿ ಶೀಘ್ರದಲ್ಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕೆಂದು ಅತಿಥಿ ಉಪನ್ಯಾಸಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರಾಜು ಕಂಬಾರ ಒತ್ತಾಯಿಸಿದರು. ರಾಮದುರ್ಗ ಪಟ್ಟಣದಲ್ಲಿ ಶನಿವಾರದಂದು ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಸ್ಥಳೀಯ ಶಾಸಕರು ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಮಾನ್ಯ ಅಶೋಕ…
