ರಾಮದುರ್ಗ ಸರಸ್ವತಿ ನಗರದಲ್ಲಿ ಚರಂಡಿ ನೀರು ರಸ್ತೆಯ ಮೇಲೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂ ಎಲ್ ಬಿಸಿ ಹೋಗುವ ಸರಸ್ವತಿ ನಗರದಲ್ಲಿಚರಂಡಿ ಬ್ಲಾಕ್ ಆಗಿ ರಸ್ತೆಯ ಮೇಲೆ ನೀರು ಹರಿಯುವುದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುವ ಗಂಭೀರ ಸಮಸ್ಯೆಯಾಗಿದೆ. ಇದು ಕೇವಲ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ, ದುರ್ವಾಸನೆ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗಬಹುದು. ನಿಂತ ಕೊಳಚೆ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಹರಡಬಹುದು. ಚರಂಡಿ ನೀರು ರಸ್ತೆಯ ಮೇಲೆ ನಿಲ್ಲುವುದರಿಂದ ಪಾದಚಾರಿಗಳು ಸಂಚರಿಸಲು ಹರಸಾಹಸ ಪಡಬೇಕಾಗುತ್ತದೆ. ಬ್ಲಾಕ್ ಆದ ಚರಂಡಿಯಿಂದ ಬರುವ…
