Prashanth Angadi

ಹಾವೇರಿಯಲ್ಲಿ ಸಾಹಿತ್ಯಗೆ ಪ್ರತಿಭಾ ಪುರಸ್ಕಾರ ಪ್ರದಾನ

ಕೊಪ್ಪಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ಜಿಲ್ಲಾ ಘಟಕ, ಹಾವೇರಿ ವತಿಯಿಂದ 2024ನೇ ಸಾಲಿನ ರಾಜ್ಯಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೊಪ್ಪಳ ನಗರದ ಸಾಹಿತ್ಯ ಎಂ. ಗೊಂಡಬಾಳ ಅವರನ್ನು ಸನ್ಮಾನಿಸಲಾಯಿತು. ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ…

Read More

ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರ ವಶಕ್ಕೆ

ಸಿರುಗುಪ್ಪ, ತಾಲ್ಲೂಕಿನ ಗೋಸಬಾಳು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀನಿವಾಸ ನೇತೃತ್ವದ ತಂಡ ದಾಳಿ ನಡೆಸಿ 26100 ಮೌಲ್ಯದ 25 ಚೀಲದಲ್ಲಿ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಗೋಸಬಾಳ ಗ್ರಾಮ ಈಶ್ವರ ಗುಡಿ ಹತ್ತಿರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಹೋಳಗುಂದ ಗ್ರಾಮದ ಪಂಚಣ್ಣ ಇವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ ಇಲಾಖೆ ಸಿಬ್ಬಂದಿಗಳು ಹಾಗೂ ಸಿರುಗುಪ್ಪ…

Read More

ಕಟಕೋಳದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ : ಪೊಲೀಸ್ ಹಾಗೂ ಆಹಾರ ಇಲಾಖೆಯಿಂದ ದಾಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಿಂದ ಹಳೆ ತೋರಗಲ್ಲ ಕಡೆಗೆ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುವಾಗ ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆಯಿಂದ ಅಕ್ರಮ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಯಿತುಬಡ ಜನರ ಹೊಟ್ಟೆ ತುಂಬಲಿ ಎಂದು ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಂಗಡಿಗಳ ಮೂಲಕ ಅಕ್ಕಿ ನೀಡುತ್ತದೆ. ಆದ್ರೆ, ಕಟಕೋಳದಲ್ಲಿ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ, ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮವಾಗಿ ಪಡಿತರ ಆಹಾರ ಧಾನ್ಯಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ದೊಡ್ಡ ಜಾಲ…

Read More

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆತಾಂತ್ರಿಕ ಲೋಪದೋಷ ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ: ಎಡಿಸಿ ಮೊಹಮ್ಮದ್ ಎನ್.ಝುಬೇರ್

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ…

Read More

ಬಳ್ಳಾರಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನ ಸಮಪರ್ಕವಾಗಿ ಬಳಸಿಕೊಳ್ಳಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ ಪಟ್ಟಣದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.ಜಿಲ್ಲೆಯ ಒಟ್ಟು ಎಸ್‍ಸಿಎಸ್‍ಪಿ ಅನುದಾನ ರೂ.3977.90 ಲಕ್ಷ ಅನುದಾನ ಬಿಡುಗಡೆಯಾಗಿದೆ. ಟಿಎಸ್‍ಪಿ ರೂ.5609.28 ಲಕ್ಷ ಅನುದಾನ…

Read More

ಹೆಲ್ಮೆಟ್ ಹಾಗೂ ಮಾದಕ ವ್ಯಸನ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೈಕ್‌ರೈಡ್ ಮಾಡುವ ಮೂಲಕ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಸಂಚಾರಿ ನಿಯಮಗಳ ಪಾಲನೆ, ಮಾದಕ ವ್ಯಸನ ವಿರೋದಿ ಹಾಗೂ ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತ ಸಿಎಸ್ ರಾಹುಲ್ ಶಿಂಧೆ ಬೈಕ್ ರೈಡ್ ಮಾಡುವ ಮೂಲಕ ಚಾಲನೆ ನೀಡಿ, ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿಯ ಮೂಲಕ ರಾಮದುರ್ಗ ಪಟ್ಟನವನ್ನು ರೌಂಡ್ ಹಾಕಿದರು.ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಬೈಕ್ ರ‍್ಯಾಲಿ ಹುತಾತ್ಮ…

Read More

ರಾಮದುರ್ಗ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಂದು ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸ್ವಿಕೃತಿ ಪಡೆದುಕೊಳ್ಳಬೇಕು. ಅದನ್ನು ಸಂಬಂಧಪಟ್ಟ ಇಲಾಖೆ…

Read More

ಓಬಳಾಪೂರ ಗ್ರಾ.ಪಂ ಅಧಿನದ ಜಾಗದಲ್ಲಿ ರಾಷ್ಟ್ರಧ್ವಜದ ಕಂಬದ ಮುಂದೆಯೇ ಅಕ್ರವಾಗಿ ಕಟ್ಟಿದ ಅಂಗಡಿ ಕಟ್ಟಡವನ್ನು ತೆರವುಗೊಳಿಸಿದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾ.ಪಂ ಕಚೇರಿಯ ಧ್ವಜದ ಕಂಬದ ಮುಂದೆ ಅಕ್ರವಾಗಿ ಕಟ್ಟಲಾಗಿದ್ದ ಅಂಗಡಿ ಕಟ್ಟಡವನ್ನು ತೆರವುಗೊಳಿಸುವಂತೆ ಕಳೆದ ನಾಲ್ಕೈದು ವರ್ಷಗಳಿಂದ ಸಾಹಿತಿ ಹಾಗೂ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರು ಉಪವಾಸ ಸತ್ಯಾಗ್ರಹ ಸೇರಿದಂತೆ ಸಾಕಷ್ಟು ಹೋರಾಟವನ್ನು ಮಾಡಿಕೊಂಡು ಬಂದಿದ್ದರು, ಆದರೇ ಅಕ್ರಮ ಕಟ್ಟಡ ವಿಚಾರವಾಗಿ ಕೋರ್ಟ ವ್ಯಾಜ್ಯ ನಡೆದ ಕಾರಣ ವಿಳಂಬವಾಗಿತ್ತು. ಕಟ್ಟಡ ಕಟ್ಟಿರುವದು ಅಕ್ರಮ ಕಟ್ಟಡ ಎಂಬುವದು ಸಾಬಿತಾದ ಹಿನ್ನಲೇಯಲ್ಲಿ ಶನಿವಾರ ಬೆಳಿಗ್ಗೆ ತಾಲೂಕು ಪಂಚಾಯಿತ ಇಒ ಪ್ರವೀಣಕುಮಾರ ಸಾಲಿ…

Read More

ಸುರೇಬಾನ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಏರ್ಪಡಿಸಿದ್ದ ಉಚಿತ ಹೃದಯ ರೋಗ ತಪಾಸಣಾ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಘಟಕನೂರ ಹಾಗೂ ಸುರೇಬಾನ ವಲಯಗಳ ಜ್ಞಾನ ವಿಕಾಸ ಹಾಗೂ ಸ್ವ. ಸಹಾಯ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಏರ್ಪಡಿಸಿದ್ದ ಹೃದಯ ರೋಗ ತಪಾಸಣಾ ಶಿಬಿರವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆರಂಭದಲ್ಲಿ ಸಂಸ್ಥೆಯು ಕೇಲವೇ ಕೆಲವು ಪ್ರದೇಶಕ್ಕೆ ಸೀಮಿತವಾಗಿತ್ತು. ಇಂದು ರಾಜ್ಯ ಅಲ್ಲದೆ ನೆರೆಯ ರಾಜ್ಯಗಳಿಗೂ ಇದರ ಸೇವೆ ವಿಸ್ತರಿಸಿದೆ ಎಂದು ಹರ್ಷ…

Read More

ಅಂಚೆ ಇಲಾಖೆ ಹಾಗೂ ಜೆಸಿಐ ರಾಮದುರ್ಗ ಘಟಕದಿಂದ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೇಕಾರ ಪೇಠದ ವಿಠ್ಠಲ ಮಂದಿರದಲ್ಲಿ ಅಂಚೆ ಇಲಾಖೆ ಹಾಗೂ ಜೆಸಿಐ ರಾಮದುರ್ಗ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ರಾಮದುರ್ಗ ಅಂಚೆ ನಿರೀಕ್ಷಕ ನಾಗರಾಜ್ ಮಳ್ಳಿಪಾಲ್ಗೊಂಡು ಅವರು ಮಾತನಾಡಿದರು.ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆದರೆ ನಿಮ್ಮ ಬೇರೆ ಯಾವುದೇ ಬ್ಯಾಂಕಿನಲ್ಲಿ ನಿಮ್ಮ ಹಣ ಇದ್ದರೆ ಆ ಹಣವನ್ನು ನೀವು ನಿಮ್ಮ ಮನೆಯಲ್ಲಿ ಇದ್ದುಕೊಂಡು ಹಣ ಪಡೆಯಬಹುದು. ಅಂಚೆಯ ಪೋಸ್ಟ್ ಮ್ಯಾನ್ ನಿಮ್ಮ ಮನೆಗೆ ಬಂದು ಹಣವನ್ನು ಸಂದಾಯ…

Read More