Prashanth Angadi

ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು.

ರಾಮದುರ್ಗ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿತು.ನೂತನ ಅಧ್ಯಕ್ಷರಾಗಿ ಹಲಗತ್ತಿ ಗ್ರಾಮದ ಸುರೇಶ ನಂದೆಪ್ಪನವರ, ಉಪಾಧ್ಯಕ್ಷರಾಗಿ ರಮೇಶ ಉಳ್ಳಾಗಡ್ಡಿ ಮತ್ತು ಶಿವನಗೌಡ ಕುಲಕರ್ಣಿ, ಕಾರ್ಯದರ್ಶಿ ಈರಣ್ಣ ನಿಜಗುಲಿ, ಸಹ ಕಾರ್ಯದರ್ಶಿಯಾಗಿ ಪವನಕುಮಾರ ಅಂಗಡಿ ಮತ್ತು ಶಿವಾನಂದ ಚಿಕ್ಕನಗೌಡ್ರ, ಯುವ ಪ್ರಮುಖ ಸಿದ್ದು ಹಂಪಿಹೋಳಿ, ಸದಸ್ಯರಾಗಿ ಬಸವರಾಜ ಹದ್ಲಿ, ಆನಂದ ಪೂಜಾರ, ನಿಂಗಪ್ಪ ಗುದಗಿ, ಬಸಪ್ಪ ಕಿತ್ತೂರ, ವೀರಭದ್ರ ಗಾಣಗಿ, ಶಿವನಗೌಡ ಲಕ್ಕನಗೌಡ್ರ, ಬಸವಂತ ಜಗಾಪೂರ ಆಯ್ಕೆಯಾಗಿದ್ದಾರೆ.ಭಾರತೀಯ…

Read More

ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಂಸದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಾರ್ವಜನಿಕರು ಸಂಸದರಿಗೆ ಹಾಗೂ ತಹಶೀಲ್ದಾರರ ಮೂಲಕ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಬಿ.ಯು. ಭೈರಕದಾರ ಮಾತನಾಡಿ, ಕಳೆದ ೧೫ ವರ್ಷಗಳಿಂದ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಮದುರ್ಗ ವತಿಯಿಂದ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಬೇಡಿಕೆಗಾಗಿ ಸಾಕಷ್ಟು ಬಾರಿ ಹೋರಾಟಗಳನ್ನು ಮಾಡಿ ರೈಲ್ವೆ ಸಚಿವರಿಗೆ, ಜಿಲ್ಲಾಧಿಕಾರಿಗಳಿಂದ ಸಂಬAಧ ಪಟ್ಟ ಅಧಿಕಾರಿಗಳಿಗೆ ಮತ್ತು ಶಾಸಕರುಗಳಿಗೆ…

Read More

ಶಿವಪೇಠ ಗ್ರಾಮವನ್ನು ದತ್ತು ಪಡೆದು ಮೂಲ ಸೌಕರ್ಯ ಕಲ್ಪಿಸುವಂತೆ ಸಂಸದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಠ ಗ್ರಾಮವನ್ನು ದತ್ತು ಪಡೆದು ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಿವಪೇಠ ಗ್ರಾಮದ ಸಾರ್ವಜನಿಕರು ಸಂಸದ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿದ ಶಿವಪೇಠ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಚರಂಡಿ ಹಾಗೂ ರಸ್ತೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಂತೆ ವಿನಂತಿಸಿದರು.ಶಿವಪೇಠ ಗ್ರಾಮವು ಕಳೆದ ೫೫ ವಷÀðಗಳಿಂದ ಗ್ರಾಮ ಸ್ಥಳಾಂತರ ಗೊಂಡಾಗಿನಿAದ ಇದುವರೆಗೂ…

Read More

ಶ್ರೀ ಎಚ್ಚರೇಶ್ವರ ದೇವರ ರಥೋತ್ಸವ ಭಕ್ತರ ಸಂಭ್ರಮದ ಮಧ್ಯೆ ವಿಜೃಂಭಣೆಯಿಂದ ಜರುಗಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕುದರೆ ಬಯಲು ಮೈದಾನದಲ್ಲಿರುವ ಶ್ರೀ ಎಚ್ಚರೇಶ್ವರ ದೇವರ ರಥೋತ್ಸವ ಭಕ್ತರ ಸಂಭ್ರಮದ ಮಧ್ಯೆ ವಿಜೃಂಭಣೆಯಿAದ ಜರುಗಿತು.ಹಿಂದೂ ಮುಸ್ಲಿಂ ಸಮುದಾಯದವರು ಸೌಹಾರ್ಧತೆಯಿಂದ ಆಚರಿಸುತ್ತ ಬಂದಿರುವ ಎಚ್ಚರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರತಿ ವರ್ಷ ನೂಲು ಹುಣ್ಣಿಮೆ ದಿವಸ ಜರುಗುತ್ತದೆ.ಭಕ್ತರು ಎಚ್ಚರೇಶ್ಚರ ದೇವರ ದರ್ಶನ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡರು. ಈ ವೇಳೆ ರಥೋತ್ಸವದಲ್ಲಿ ಕರಡಿ ಮಜಲು ಹಾಗೂ ವಾದ್ಯಮೇಳಗಳು ಉತ್ಸವದ ಕಳೆ ಹೆಚ್ಚಿಸಿದರು.

Read More

ಸೋಪ್ಪಡ್ಲ ಗ್ರಾಮದಲ್ಲಿ ಶ್ರೀ ಶರಣ ನೂಲಿ ಚಂದಯ್ಯನವರ 917 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸೋಪ್ಪಡ್ಲ ಗ್ರಾಮದಲ್ಲಿ ಶ್ರೀ ಶರಣ ನೂಲಿ ಚಂದಯ್ಯನವರ 917 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಮಚಂದ್ರಪ್ಪ ಭಜಂತ್ರಿ, ಫಕೀರಪ್ಪ ಭಜಂತ್ರಿ, ಕಳ್ಳೆಪ್ಪ ಭಜಂತ್ರಿ, ಪರಸಪ್ಪ ಭಜಂತ್ರಿ, ಮಾರುತಿ ಭಜಂತ್ರಿ, ರಂಗಪ್ಪ ಭಜಂತ್ರಿ, ಹನಮಂತ ಭಜಂತ್ರಿ, ಬಸು ಭಜಂತ್ರಿ, ಹನಮಂತ ಕಳ್ಳೆಪ್ಪ ಭಜಂತ್ರಿ, ಮಾರುತಿ ಭೀಮಪ್ಪ ಭಜಂತ್ರಿ, ಬಸಪ್ಪ ಭಜಂತ್ರಿ, ಸಿದ್ದಪ್ಪ ಭಜಂತ್ರಿ, ಹನಮಂತ ರಾಮಚಂದ್ರ ಭಜಂತ್ರಿ, ಮಾರುತಿ ಹನಮಂತ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More

ಮುಖ್ಯಮಂತ್ರಿಗಳಿಗೆ ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಕ್ರಮವನ್ನು ಖಂಡಿಸಿ ವಿವಿದ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಆರ್.ಟಿ.ಅಯ್. ಕಾರ್ಯಕರ್ತನ ಮನವಿ ಮೇರೆಗೆ ಅದನ್ನು ತನಿಖೆ ನಡೆಸದೆ ಮುಖ್ಯಮಂತ್ರಿಗಳಿಗೆ ದಿಢೀರಗಾಗಿ ಶೋಕಾಸ್ ನೋಟಿಸ್ ಕೊಟ್ಟ, ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ ಗೆಹೆಲೊಟ ಇವರ ನೀತಿಯನ್ನು ಖಂಡಿಸಿ ವಿವಿದ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಅರ್ಪಿಸಲಾಯಿತು.ಸಿ.ಪಿ.ಎಂ. ಪಕ್ಷದ ಮುಖಂಡ ಜಿ.ಎಒ. ಜೈನೆಖಾನ್ ಮಾತನಾಡಿ, ಒಂದು ಚುನಾಯಿತ ಸರ್ಕಾರವನ್ನು ಮೂಡಾ ಹಗರಣವನ್ನು ಮುಂದಿಟ್ಟುಕೊAಡು ಅಸ್ತಿರಗೊಳಿಸುವುದು ಸಂವಿಧಾನ ಪ್ರಜಾಪ್ರಬುತ್ವ ವಿರೋಧಿ ಕೆಲಸವಾಗಿದೆ….

Read More

ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯ ಎಸ್.ಎಸ್. ಬೂದೇಶ್ವರ ಮಾತನಾಡಿ, ಸೋದರತ್ವದ ಬಾಂಧವ್ಯ ಬೆಳೆಸುವ ಈ ಪವಿತ್ರ ಹಬ್ಬವನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಸೋದರತ್ವದ ಭಾವನೆಗಳನ್ನು ಬೆಳೆಸುವದರ ಜೊತೆಗೆ ನಮ್ಮ ಹಬ್ಬಗಳ ಪಾವಿತ್ರಯತೆಯನ್ನು ತಿಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಬೆಟಗೇರಿ:ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಪ್ರತಿಯೊಬ್ಬ ಶಾಲಾ ಮಗು ಕಲಿಕಾ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ವಿದ್ಯಾರ್ಥಿ ವೇತನ ಪಡೆದ ಹಣವನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಸಿಎಸ್‌ಆರ್ ಯೋಜನೆಯಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಮತ್ತು ಕ್ರೀಡಾ ಸಮವಸ್ತçವನ್ನು ಗೋಕಾಕ ತಾಲೂಕಿನ ಗೋಸಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ…

Read More

ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ

ಬೆಳಗಾವಿ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ವಹಿಸಿ ಅವರು ಮಾತನಾಡಿದರು. ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದ ಪ್ರಕರಣದ ಕುರಿತು ಪತ್ರಿಕೆಗಳಲ್ಲಿ ಸಾಕಷ್ಟು ಭಿನ್ನವಾದ ಅಭಿಪ್ರಾಯಗಳು ಪ್ರಕಟವಾಗಿವೆ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳ ಆಯೋಗದದಿಂದ ನಿಖರವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ…

Read More

ಬಳ್ಳಾರಿ ಗರ್ಭಿಣಿ ಮಹಿಳೆಯರು ಸೂಕ್ತ ಚಿಕಿತ್ಸೆ ಪಡೆಯಬೇಕು: ಡಿಹೆಚ್‌ಓ ಡಾ.ವೈ.ರಮೇಶ್‌ಬಾಬು

ಬಳ್ಳಾರಿ ನಗರದ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಗರ್ಭಿಣಿ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಸೋಮವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.ಗರ್ಭಿಣಿಯ ಆರೈಕೆಯನ್ನು ಕುಟುಂಬದ ಸದಸ್ಯರು ಅದರಲ್ಲೂ ಗಂಡನ ಮನೆಯಲ್ಲಿ ಮನೆಯ ಮಗಳಂತೆ ಕಾಳಜಿವಹಿಸಬೇಕು ಎಂದು ಹೇಳಿದರು.ರಕ್ತದಲ್ಲಿ ಕಬ್ಬಿಣಾಂಶ 12 ಹೆಚ್‌ಬಿ ಗಿಂತ ಹೆಚ್ಚು ಇರುವಂತೆ ಮುತವರ್ಜಿವಹಿಸಬೇಕು. ಹೆರಿಗೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿಯೇ ಮಾಡಿಸಲು ಆದ್ಯತೆ ನೀಡಬೇಕು. ಹೆರಿಗೆಯಾದ 45 ದಿನಗಳವರೆಗೆ ತಾಯಿ-ತಂದೆ, ಗಂಡ ಹಾಗೂ ಮನೆಯ ಸದಸ್ಯರು ಬಾಣಂತಿಯ…

Read More