ಶ್ರಾವಣದಲ್ಲಿ ವಿಶೇಷ ಪೂಜಿತನಾಗುವ ರಡ್ಡೇರಹಟ್ಟಿಯ ಮಟ್ಟಿ ಬಸವೇಶ್ವರ
ಶ್ರಾವಣ ಮಾಸ ಬಂತೆಂದರೆ ಸಾಕು ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಪ್ರಾರಂಭವಾಗಿ ಮಾಸಾಂತ್ಯ ವಿಶೇಷ ಪ್ರಾರ್ಥನೆಯ ಕೇಂದ್ರಗಳಾಗುತ್ತವೆ. ಆದರೆ ದೂರದ ನದಿಯಿಂದ ನೀರು ತಂದು ಅದರ ಮೂಲಕವೇ ಪೂಜೆಗೊಳ್ಳುವ ವಿಶೇಷವೊಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಮಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಇಂದಿಗೂ ಆಚರಣೆ ಇದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದು ಬಂದಿರೋದು ವಿಶೇಷ ಸಾಂಪ್ರದಾಯ, ಶ್ರಾವಣ ಮಾಸದ ಪ್ರತಿ ಸೋಮವಾರ ನಸುಕಿನ ಜಾವ ನಾಲ್ಕು ಗಂಟೆಗೆ ಎದ್ದು ಸುಮಾರು ಏಳು ಕಿ.ಮೀ ದೂರವಿರುವ…
