Prashanth Angadi

ರಾಜಶೇಖರ್ ಸ್ವಾಗತಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಆಡಳಿತ ಮತ್ತು ಸ್ಥಳಿಯ ಶಾಸಕರು ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ನಗರಸಭೆ ಸದಸ್ಯ ರಾಜಶೇಖರ್ ಆಡೂರ್ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸ್ವಾಗತಿಸಿದರು.ನಗರದ ವಾರಕಾರ ಓಣಿಯ ಅವರ ಮನೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಲೋಕಸಭೆ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಅವರನ್ನು ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಸ್ವಾಗತಿಸಿದರು.ನಗರಸಭೆ ಸದಸ್ಯರಾಗಿ,…

Read More

ಲೋಕಸಭಾ ಚುನಾವಣೆಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ನಗರದ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಗೊಡೌನ್ ದಲ್ಲಿರುವ ಎಲೆಕ್ಟ್ರಾನಿಕ ಮತ ಯಂತ್ರಗಳನ್ನು ಬಿಗಿಭದ್ರತೆಯೊಂದಿಗೆ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕಳುಹಿಸಲಾಯಿತು. ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಹಂಚಿಕೆಗೊಂಡಿರುವ ಮತಯಂತ್ರಗಳನ್ನು ಜಿಪಿಎಸ್ ಆಧಾರಿತ ವಾಹನಗಳ ಮೂಲಕ ಪೊಲೀಸ್ ಭದ್ರತೆಯೊಂದಿಗೆ ಮಂಗಳವಾರ ಮಧ್ಯರಾತ್ರಿಯವರೆಗೆ ರವಾನೆ‌ ಮಾಡಲಾಯಿತು. ಆಯಾ…

Read More

ಭಾರತೀಯ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ.

ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ಬಹಳಷ್ಟು ಸ್ಥಾನಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಜನರು ಹಗಲು ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಜನರು ಮನೆಯಿಂದ ಹೊರಗೆ ಹೋದಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ತಮ್ಮೊಂದಿಗೆ ಒಯ್ಯುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ…

Read More

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ಮಾಡಿದರು

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು ಲೋಕಸಭಾ ಸಾರ್ವತ್ರಿಕ ಚುನಾಣೆ -2024ಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯ ಆರ್.ಡಿ. ಹೈಸ್ಕೂಲಿನ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ ನಿತೇಶ್ ಪಾಟೀಲ ಅವರು ಗುರುವಾರದಂದು ಭೇಟಿ ನೀಡಿ‌ ಪರಿಶೀಲಿಸಿದರು. ಮತ ಏಣಿಕೆ ಕೇಂದ್ರದಲ್ಲಿನ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವಿಧಾನ ಸಭಾ ಕ್ಷೇತ್ರವಾರು ಸ್ಟ್ರಾಂಗ ರೂಂಗಳಿಗೆ ಒದಗಿಸಲಾದ ಭದ್ರತೆ ಹಾಗೂ ಮತ ಏಣಿಕೆ ಕೊಠಡಿಗಳನ್ನು ಪರಿಶೀಲಿಸಿದ…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದಕೆಎಸ್‌ಆರ್‌ಟಿಸಿ ಬಸ್‌ ಪರಿಶೀಲನೆ ನಡೆಸಿದಾಗ ಹಣ ಮತ್ತುಚಿನ್ನ ಪತ್ತೆಯಾಗಿದೆ.ತುಮಕೂರು ನಗರದ ಬಟವಾಡಿ ಬಳಿ ಶುಕ್ರವಾರ ಬೆಳಗಿನಜಾವ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ನಗರದ ಚಿಕ್ಕಪೇಟೆಯ ಗಾರ್ಡನ್ರಸ್ತೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ ಕೆಲಸಮಾಡುತ್ತಿರುವ ನಾಗಭೂಷಣ್ ಎಂಬುವರು ಹಣ, ಚಿನ್ನತಗೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರುಪರಿಶೀಲನೆ ನಡೆಸಿ, ದುಡ್ಡು ಬಂಗಾರ ಜಪ್ತಿ ಮಾಡಿದ್ದಾರೆ.ವಿನೋದ್ ಎಂಬುವರಿಗೆ ಸೇರಿದ ಚಿನ್ನ, ಬೆಳ್ಳಿ ಅಂಗಡಿಯಲ್ಲಿಕೆಲಸ ಮಾಡುತ್ತಿದ್ದರು. ಎನ್‌ಇಪಿಎಸ್ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಏಪ್ರಿಲ್ 1ರಿಂದ ನರೇಗಾ ಕೂಲಿ ಹೆಚ್ಚಳ

ನವದೆಹಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಡಿಯಲ್ಲಿ ಕೌಶಲ್ಯರಹಿತ ಕಾರ್ಮಿಕರಿಗೆ ಪ್ರಸಕ್ತ ಹಣಕಾಸು ವರ್ಷದ ಕೂಲಿಯನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಸೂಚಿಸಿರುವ ಹೊಸ ಕೂಲಿಯು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.ಕರ್ನಾಟಕದಲ್ಲಿ ಕೂಲಿ ಶೇ. 10.44ರಷ್ಟು ಪ್ರಮಾಣದಲ್ಲಿರುತ್ತದೆ, ಈಗಿರುವ ದೈನಂದಿನ 316 ರೂ. ಕೂಲಿಯು ಏಪ್ರಿಲ್ 1 ರಿಂದ ಇದು 349ರೂ. ಗೆ ಏರಿಕೆಯಾಗಲಿದೆ. ಅಧಿಸೂಚನೆಯ ಪ್ರಕಾರ, ಹರಿಯಾಣಕ್ಕೆ ಗರಿಷ್ಠ ಕೂಲಿ ದಿನಕ್ಕೆ 374 ರೂ. ನಿಗದಿಪಡಿಸಲಾಗಿದೆ, ಅರುಣಾಚಲ…

Read More

ವಾಹನ ಸವಾರರಿಂದ ಲಂಚ ಪಡೆಯುತ್ತಿರುವ ಪೊಲೀಸರು..!

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರ್ತಕಂತ ಬೆಳಗಾವಿ ಬಾಗಲಕೋಟ ಹೆದ್ದಾರಿ ರಸ್ತೆಯಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡುವ ವಿಚಾರದಲ್ಲಿ ವಾಹನ ಸವಾರರಿಂದ ಹಣ ಪಡೆದು ಅವರಿಗೆ ರಸೀದಿ ನೀಡದೆ ಇರುವುದುಬುಲೆರೋ ಪಿಕಪ್ ಹಾಗೂ ಇನ್ನಿತರ ವಾಹನಗಳಿಂದ ಹಣ ವಸೂಲಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ ಸಂಬಂಧ ಪಟ್ಟಂತಹ ಎಸ್ ಪಿ ಸಾಹೇಬರು ಕೂಡಲೆ ಕ್ರಮ ಜರಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ

Read More

ಉಪ್ಪಳದಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ದರೋಡೆ

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ  ಉಪ್ಪಳಪೇಟೆಯಲ್ಲಿ ನಡೆದಿದೆ. ವಾಹನದ ಗಾಜನ್ನು ಒಡೆದು 50 ಲಕ್ಷ ಪೆಟ್ಟಿಗೆಯನ್ನೇ ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.  ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ…

Read More

ಗ್ಯಾರಂಟಿ ಸ್ಕೀಂ ಪ್ರತಿ ಮನೆಗೂ ತಲುಪುತ್ತಿವೆ : ಜ್ಯೋತಿ ಸಂತಸ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡ ಮತ್ತು ಮಧ್ಯಮ ವರ್ಗದ ಪ್ರತಿ ಮನೆಗೂ ತಲುಪುತ್ತಿರುವದು ಅತ್ಯಂತ ಸಂತಸ ತಂದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಖುಷಿ ವ್ಯಕ್ತಪಡಿಸಿದ್ದಾರೆ.ಅವರು ನಗರಸಭೆ ೨ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಹಮ್ಮಿಕೊಂಡಿರುವ ಮನೆ ಮನೆ ಭೇಟಿ ವೇಳೆ ಕಂಡುಬಂದ ಮಾಹಿತಿ ಹಂಚಿಕೊಂಡು ಸಂತಸಪಟ್ಟರು.ಐದು…

Read More

ಮೋದಿ ಗೆಲುವಿಗೆ ಶ್ರಮಿಸುವುದಾಗಿ ಜಗದೀಶ ಶೆಟ್ಟರ್ ಪ್ರತಿಜ್ಞೆ.

ಬೆಳಗಾವಿ :  ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಸ್ಥಳೀಯ ಮುಖಂಡರು ಮತ್ತು ಬೆಂಬಲಿಗರು ಆತ್ಮೀಯವಾಗಿ ಸ್ವಾಗತಿಸಿದಕ್ಕೆ ಕೃತಜ್ಞತೆ ಸಲ್ಲಿಸಿ, ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಇರುತ್ತದೆ ಎಂದು ದೃಢಪಡಿಸಿದರು. ಬೆಳಗಾವಿಗೆ ಚಿರಪರಿಚಿತರಾಗಿರುವ ನಾನು ಜಿಲ್ಲೆಯ ಎಲ್ಲಾ ಪ್ರಮುಖ ಬಿಜೆಪಿಯ ನಾಯಕರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೋವಿಡ್ -19, ಪ್ರವಾಹದಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಮರ್ಪಕವಾದ ಸೇವೆ ಸಲ್ಲಿಸುವ ಅವಕಾಶ ಭಾಗ್ಯ ನನ್ನದಾಗಿತ್ತು ಎಂದರು.  ಬೆಳಗಾವಿಗೆ ತಮ್ಮ ನಿಷ್ಠೆಯನ್ನು ಪ್ರತಿಪಾದಿಸಿದ ಜಗದೀಶ ಶೆಟ್ಟರ ನಗರದಲ್ಲಿ ಮನೆ ನಿರ್ಮಿಸಲು ವಾಗ್ದಾನ ಮಾಡಿದರಲ್ಲದೆ…

Read More