ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಡಿಕೆಶಿ ಟೆಂಪಲ್ ರನ್ ಜೋರಾಗಿದೆ.
ಗೋಕರ್ಣ ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದರು. ಈ ಬಗ್ಗೆ ದೇವಸ್ಥಾನದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ….
