Prashanth Angadi

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಡಿಕೆಶಿ ಟೆಂಪಲ್ ರನ್ ಜೋರಾಗಿದೆ.

ಗೋಕರ್ಣ ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದರು. ಈ ಬಗ್ಗೆ ದೇವಸ್ಥಾನದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ….

Read More

ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ – ಜ್ಯೋತಿ ಮನವಿ

ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದ್ದಾರೆ.ಅವರು ನಗರದಲ್ಲಿ ನಾಟಕ ಅಕಾಡಮಿಗೆ ಸದಸ್ಯರಾಗಿ ನೇಮಕಗೊಂಡ ಸಮೀಪದ ಬಹೂದ್ದರಬಂಡಿ ಗ್ರಾಮದ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.ಚಾಂದಪಾಶಾ ಕಿಲ್ಲೆದಾರ್ ಅವರು ೧೮ನೇ…

Read More

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯು ಆಯೋಜಿಸಿದ್ದ ನೆಲಮಂಗಲದ ಎಮ್ ವಿ ಎಮ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 2ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಅದ್ಧೂರಿಯಾಗಿ ನಡೆಯಿತು.

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯ 2 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನೆಲಮಂಗಲದ ಎಮ್.ವಿ.ಎಮ್ ಕನ್ವೆನ್ಷನ್ ಹಾಲ್ ನಲ್ಲಿ ರವಿವಾರ ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಧರ್ಮದ ನೈತಿಕ ಮೌಲ್ಯಗಳ ಬಗ್ಗೆ ಚರ್ಚಿಸಲಾಯಿತು. ಕಾನಿಪ ಧ್ವನಿಯ ಸಂಸ್ಥಾಪಕ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ನಮ್ಮ ಕಾನಿಪ ಧ್ವನಿ ಸಂಘಟನೆಯು ಪತ್ರಕರ್ತರಿಗಾಗಿ ಹಗಲಿರುಳು ದುಡಿದು, ಎಲ್ಲರ ಪ್ರಗತಿಗಾಗಿ ಶ್ರಮದಾನ ಮಾಡಿತ್ತಿದ್ದು, ಇಂದು ಸರ್ಕಾರ ಪತ್ರಿಕಾ ಭವನಗಳನ್ನು ಕೆಲವು ಸಂಘಟನೆಗಳಿಗೆ ಸೀಮಿತ ಮಾಡಿದೆ….

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.90 ಲಕ್ಷ ಹಣ ವಶಪಡಿಸಿಕೊಂಡ ಬಾದಾಮಿ ಪಿಎಸ್ಐ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2,90,000 ಎರಡು ಲಕ್ಷ ತೊಂಬತ್ತು ಸಾವಿರ ರೂಪಾಯಿ ಹಣವನ್ನು ಬಾದಾಮಿ ಪೊಲೀಸ್ ಠಾಣೆಯ ಪಿ. ಎಸ್. ಐ. ವಿಠಲ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿಗಳಾದಮಹಂತೇಶ್ ಖಾನಾಪೂರ, ಕೆರೂಟಗಿ ಸೇರಿ ಕಾರ್ಯಚರಣೆ ನಡೆಸಿ ಪರಿಶೀಲಿಸಿ ಅಕ್ರಮ ಹಣ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಕಟ್ಟು ನಿಟ್ಟಿನ ಕರ್ತವ್ಯದಲ್ಲಿರುವ ಪೋಲಿಸ್ ಸಿಬ್ಬಂದಿ. ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆ ಪೋಲಿಸರು…

Read More

ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೇಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ಕೆ ಗುಡದಾರಿರವರು ಸೆಲ್ಪಿ ಸ್ಟ್ಯಾಂಡ ನಲ್ಲಿ ಪೋಟೋ ತಗೆದುಕೊಳ್ಳುವದರ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮತದಾನ ಪ್ರತಿಯೊಬ್ಬ ಪ್ರಜೇಯ ಹಕ್ಕು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.ಮತ್ತು ತಾಲೂಕಿನಲ್ಲಿ ಅಧಿಕಾರಿಗಳು ವಿವಿಧ…

Read More

ಎಸ್ಎಸ್ಎಲ್ಸಿ ಪರೀಕ್ಷೆ 23 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ತಿಳಿಸಿದ್ದಾರೆ.

ರಾಮದುರ್ಗ ತಾಲೂಕಿನಾದ್ಯಂತ ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, 23 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ರಾಮದುರ್ಗ ತಾಲೂಕಿನ 14 ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟು 4080 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಅದರಲ್ಲಿ 4057 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.ಬೆಳಗಾವಿಯ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಹಾಗೂ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೀಕ್ಷಕರಿಂದ ವೆಬ್ ಕಾಸ್ಟಿಂಗ್…

Read More

ರಾಧಾಪುರ್ ಪೇಟೆಯಲ್ಲಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮ

ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯ ಕಾಮಣ್ಣನ ಕಟ್ಟೆಯ ಮೇಲೆ ಭಾನುವಾರ ರಾತ್ರಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮವನ್ನು ಹಿರಿಯ ಜಾನಪದ ಕಲಾವಿದ ನೇಮನ್ನ ಆರಿ ಹಲಗೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಹಬ್ಬಗಳಿಗೆ ಬಹು ವಿಶೇಷ ಸ್ಥಾನಮಾನವಿದೆ. ಅದರಲ್ಲೂ ರಂಗು ರಂಗನ ಹೋಳಿ ಹಬ್ಬದಲ್ಲಿ ಗ್ರಾಮೀಣ ಸೊಗಡು ಅಡಗಿದೆ ಮರೆಯಾಗುತ್ತಿರುವ ಭಾರತೀಯ ಹಬ್ಬಗಳನ್ನು ಇಂದಿನ ಯುವಕರು ಆಚರಿಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಯುವ…

Read More

ಸುರೇಬಾನ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ರಾಮದುರ್ಗ ತಾಲೂಕಿನ ಸುರೇಬಾನ ಪೋಲಿಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಈಗಾಗಲೇ ನಾನು ಕಳೆದ ವರ್ಷ ಜವಾಬ್ದಾರಿ ಯುತವಾಗಿ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಲು ಬೇಕಾದ ಕ್ರಮಗಳನ್ನು ಹಾಗೂ ಸಹಕಾರವನ್ನು ನೀಡಿದ್ದೇವೆ ಹಾಗೆಯೇ ಈ ವರ್ಷ ಕೂಡ ನಗರದಲ್ಲಿ ಯಾವುದೇ ರೀತಿಯ ಗಲಭೆ ಆಗದಂತೆ ನೋಡಿಕೊಳ್ಳಬೇಕು ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಯಾವುದೇ ಅಹಿತಕರ…

Read More

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ರವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಚುನಾವಣಾ ನೀತಿ ಸಂಹಿತೆ ಜಾರಿಗೆ ಆದ ಕಾರಣ ಹೋಳಿ ಹಬ್ಬದ ಹಾಗೂ ರಂಜಾನ ಹಬ್ಬಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ…

Read More

ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.

ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತಿಗಳ ಸಹಯೋಗದಲ್ಲಿ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿ ಮಾತನಾಡಿದರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಸ್ವೀಪ್ ಸಮಿತಿಯ…

Read More