ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ಮೂರ್ತಿಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ ಹಾಗೂ ಮೂರ್ತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿ ಮಾತನಾಡಿದ ಅವರು ಈ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ಮಂದಿರ ಕಟ್ಟಡದ ನಿರ್ಮಾಣ ಒಂದು ಕನಸಾಗಿತ್ತು, ಇಂದು ಆ ಕನಸು ಸಾಕಾರಗೊಂಡಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಧಾರ್ಮಿಕವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಈಗಾಗಲೇ 100 ಕ್ಕೂ ಅಧಿಕ ಗುಡಿ ಗೋಪುರಗಳು ಜೀರ್ಣೋದ್ಧಾರಗೊಂಡಿವೆ. ಕ್ಷೇತ್ರ ನನ್ನನ್ನು ಮನೆಯ ಮಗಳಾಗಿ ಸ್ವೀಕರಿಸಿ, ದ್ವೀತಿಯ ಬಾರಿಗೆ ವಿಧಾನಸಭೆಗೆ ಆಯ್ಕೆ ಮಾಡುವ…
