ಗ್ಯಾರಂಟಿ ಸ್ಕೀಂ ಪ್ರತಿ ಮನೆಗೂ ತಲುಪುತ್ತಿವೆ : ಜ್ಯೋತಿ ಸಂತಸ
ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡ ಮತ್ತು ಮಧ್ಯಮ ವರ್ಗದ ಪ್ರತಿ ಮನೆಗೂ ತಲುಪುತ್ತಿರುವದು ಅತ್ಯಂತ ಸಂತಸ ತಂದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಖುಷಿ ವ್ಯಕ್ತಪಡಿಸಿದ್ದಾರೆ.ಅವರು ನಗರಸಭೆ ೨ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಹಮ್ಮಿಕೊಂಡಿರುವ ಮನೆ ಮನೆ ಭೇಟಿ ವೇಳೆ ಕಂಡುಬಂದ ಮಾಹಿತಿ ಹಂಚಿಕೊಂಡು ಸಂತಸಪಟ್ಟರು.ಐದು…
