ಛಾಯಾಗ್ರಾಹಕನ ಮೇಲೆ ಹಲ್ಲೆ ಖಂಡಿಸಿ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ವೃತ್ತಿ ನಿರತ ಛಾಯಾಗ್ರಾಹಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ರಾಮದುರ್ಗ ತಾಲೂಕ ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಾಮದುರ್ಗ ಸಂಘದ ಪದಾಧಿಕಾರಿಗಳು ಶುಕ್ರವಾರ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಶಿವಾಜಿನಗರದ ಶೈಮ್ಸ್ ಕಲ್ಯಾಣ ಮಂಟಪದಲ್ಲಿವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನುಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.ವೃತ್ತಿ ನಿರತ ಛಾಯಾಗ್ರಾಹಕರ ಕ್ಯಾಮೆರಾ ಪರಿಕರ ಕಳ್ಳತನ, ಸ್ಪುಡಿಯೋಗಳಲ್ಲಿ ಕಳ್ಳತನ ಮತ್ತು ಛಾಯಾಗ್ರಾಹಕರನ್ನು ರಸ್ತೆಗೆ ಅಡ್ಡಗಟ್ಟಿ ಪರಿಕರಗಳನ್ನು ವಶ…
