ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ
ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡ ಮತ್ತು ಮಧ್ಯಮ ವರ್ಗಕ್ಕೆ ಆಸರೆಯಾಗಿದ್ದು ಗ್ಯಾರಂಟಿಯೊಂದಿಗೆ ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ವಾರಂಟಿ ಇದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ಭಾಗ್ಯನಗರ ೬ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳ ಪರವಾಗಿ…
