Prashanth Angadi

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ನ್ಯಾಯಾಲಯಗಳ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರದಾ,ನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು. ಪ್ರಧಾನ ಸಿವಿಲ್‍ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಎ.ನೇಸರಿಕರ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಮಹಿಳಾ ಪ್ರತಿನಿಧಿ…

Read More

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು.

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗಗೈದ ಮಹಾನ್ ವೀರ ಪುರುಷ ಮತ್ತು ಮಹಿಳೆಯರ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಸಡಗರದಿಂದ ನಡೆಯಿತು.ಸ್ಥಳೀಯ ಶಿಕ್ಷಣಪ್ರೇಮಿಗಳಾದ ಬಸಪ್ಪ ಮೇಳೆಣ್ಣವರ,…

Read More

ನ್ಯಾಯಾಲಯದ ಸಂಕೀರ್ಣ ಸವದತ್ತಿಯಲ್ಲಿ ಪತ್ರಿಕಾಗೋಷ್ಠಿಯನ್ನು ಹವ್ಮಿುಕೊಳ್ಳಲಾಗಿತ್ತು

ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರಾದ ಸಿದ್ದರಾಮ ರವರು ಬೆಳಗಾವಿಯ ಖಾಯಂ ಜನತಾ ನ್ಯಾಯಾಲಯದ ಕಾರ್ಯ ವಿಧಾನದ ಹಾಗೂ ವೈಶಿಷ್ಟ್ಯ ಬಗ್ಗೆ ಮಾತನಾಡಿ ಪ್ರಕರಣವೊ‍ಂದರ ಎರಡು ಪಕ್ಷಗಳವರು ರಾಜೀ ಸಂಧಾನ ಮಾಡಿಕೊಳ್ಳುವಲ್ಲಿ ಅಧ್ಯಕ್ಷರು ಹಾಗೂ ಇತರ ಇಬ್ಬರು ಸದಸ್ಯರು ಅವರುಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಅವರು ಪರಸ್ಪರ ರಾಜೀ ಮಾಡುಕೊಳ್ಳುವಲ್ಲಿ ಯಶಸ್ವಿಯಾದಲ್ಲಿ ರಾಜೀ ಸಂಧಾನದ ಷರತ್ತುಗಳನ್ವಯವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸಿ ತೀರ್ಪನ್ನು ನೀಡುತ್ತಾರೆ. ರಾಜೀ ಸಂಧಾನ ವಿಫಲವಾದಲ್ಲಿ ಹಾಗೂ ಆ ಪ್ರಕರಣ ಯಾವುದೇ ಅಪರಾಧಕ್ಕೆ ಸಂಬಂಧಿಸಿರದಿದ್ದಲ್ಲಿ ಅದರ ಎರಡೂ ಪಕ್ಷಗಳವರು ಸಾದರಪಡಿಸಿದ…

Read More

ಧಾರವಾಡದ ಎನ್‍ಸಿಸಿ ಬಟಾಲಿಯನ್‍ನಿಂದ ಏಕತಾ ಓಟ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಧಾರವಾಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 24 ಕರ್ನಾಟಕ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಕರ್ನಲ್ ಅನೂಪ್ ರಾಷಲ್ ಗಾಂವಕರ, 5 ಗಲ್ರ್ಸ್ ಬಟಾಲಿಯನ್ ಲೆಫ್ಟನೆಂಟ್ ಕರ್ನಲ್ ಸುಜನ ರಾಯ್, ಎಓ ಲೆಫ್ಟನೆಂಟ್ ಕರ್ನಲ್ ವೈ.ಎಸ್.ರನಾವತ್ ಇವರುಗಳ ನೇತೃತ್ವದಲ್ಲಿ ಏಕತಾ ಓಟ, ಸ್ವಚ್ಛತಾ ಅಭಿಯಾನ ಮತ್ತು ಪುನೀತ್ ಸಾಗರ್ ಅಭಿಯಾನ ಜರುಗಿತು. ಕೆಲಗೇರಿ ಕೆರೆ ಮತ್ತು ಕೆಸಿಡಿ ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಎನ್‍ಸಿಸಿ ಕೆಡೆಟ್‍ಗಳ ಸ್ವಯಂಸೇವಕರು ಸ್ವಚ್ಛಗೊಳಿಸಿದರು. ಒಗ್ಗಟ್ಟು ಪ್ರದರ್ಶಿಸುವದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳಿಗೆ ಜಾಗೃತಿ ಮೂಡಿಸುವದು. ಸ್ವಚ್ಛತೆ ಮಹತ್ವದ…

Read More

ಯಲ್ಲಮ್ಮನ ದೇವಸ್ಥಾನದ ಹುಂಡಿಗಳಲ್ಲಿ ಮಳೆ ನೀರು ಜಲಾವೃತವಾಗಿದ್ದ ಕಾಣಿಕೆ ಹುಂಡಿಗಳನ್ನ ಓಪನ್ ಮಾಡಿ ನೋಟುಗಳನ್ನ ಹೊರಗೆ ತೆಗೆದು ಒಣ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಿಂದಾಗಿ ಸವದತ್ತಿ ಯಲ್ಲಮ್ಮ ದೇವಾಲಯದ ಗರ್ಭಗುಡಿಗೆ ನೀರು ಹೋಗಿತ್ತು . ಅಲ್ಲಿ ಇದ್ದಂತ ಕಾಣಿಕೆ ಹುಂಡಿಗಳು ನೀರಿನಿಂದ ತುಂಬಿದ್ದವು. ಇದರಿಂದ ನೋಟುಗಳೆಲ್ಲ ತೊಯ್ದು ತೊಪ್ಪೆಯಾಗಿದ್ದವು. ಇದೀಗ ನೀರು ಕಡಿಮೆಯಾಗಿದ್ದರಿಂದ ದೇವಾಲಯದ ಆಡಳಿತ ಮಂಡಳಿ ಹುಂಡಿಗಳನ್ನು ಓಪನ್ ಮಾಡಿ ನೋಟುಗಳನ್ನು ದೇವಾಲಯದ ಆವರಣದಲ್ಲಿ ಒಣ ಹಾಕಿದ್ದಾರೆ. ದೇವಾಲಯದ ಆವರಣದಲ್ಲಿನ ಎಲ್ಲ ನೀರನ್ನ ಹೊರ ಹಾಕಿ ಸ್ವಚ್ಚಗೊಳಿಸಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಕ್ತರು ಬಂದು ದೇವಿಯ…

Read More

15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ.

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಉಗಲವಾಟ ಗ್ರಾಮದ ಸುಕ್ಷೇತ್ರ ತೀರ್ಥಬಸವೇಶ್ವರ ದೇವಸ್ಥಾನ ರಾಮತೀರ್ಥದ 15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ. ಈ ವರ್ಷ ಶ್ರಾವಣ ಮಾಸದ ನಿಮಿತ್ಯ ಸದ್ಭಕ್ತರು ದೇಶದ ಹಿತಾಶಕ್ತಿಗಾಗಿ ಮತ್ತು ಭಗವಂತನ ಕೃಪೆಗಾಗಿ ಪ್ರತಿದಿನ ಮುಂಜಾನೆ ಬ್ರಾಹ್ಮೀಮುಹೂರ್ತದಲ್ಲಿ ಶ್ರೀ ರುದ್ರಾಭಿಷೇಕ ಸಹಸ್ರಬಿಲ್ವಾರ್ಚನೆ ಮತ್ತು ಸೂತ್ರದೊಂಗಿ ಕೋಟಿ ಜಪಯಜ್ಞ ಪ್ರಾರಂಭವಾಗುತ್ತದೆ ಈ ಸತ್ಕಾಕಾರ್ಯದಲ್ಲಿ ತಾವೆಲ್ಲರು ತನು, ಮನ, ಧನದೊಂದಿಗೆ ಹೃದಯಪೂರ್ವಕವಾಗಿ ಭಗವಂತನಿಗೆ ಅರ್ಪಿಸಿ ಪರಮಾತ್ಮನಕೃಪೆಗೆ…

Read More

ವಿಜಯ ಸೇನಾ ಸಮಿತಿಯಿಂದ ಹಮ್ಮಿಕೊಂಡ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮಕ್ಕೆ ಸಿಪಿಐ ವಿನಾಯಕ ಬಡಿಗೇರ ಚಾಲನೆ ನೀಡಿದರು.

ಜನರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಹಾಗೂ ಅವುಗಳನ್ನು ಪರಿಹರಿಸುವಲ್ಲಿ ಸಾಮಾಜಿಕ ಸೇವೆ ಮಾಡುವಲ್ಲಿ ಪ್ರಾಮಾಣಿಕತೆಯಿಂದ ಶ್ರಮಿಸುತ್ತಿರುವ ರಾಮದುರ್ಗದ ವಿಜಯ ಸೇನಾ ಸಮಿತಿ, ಉಚಿತವಾಗಿ ಹೆಲ್ಮೆಟ್ ವಿತರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿತು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ವಿಜಯ ಸೇನಾ ಸಮಿತಿಯಿಂದ ಹಮ್ಮಿಕೊಂಡ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮಕ್ಕೆ ಸಿಪಿಐ ವಿನಾಯಕ ಬಡಿಗೇರ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಬೈಕ್ ಸಂಚಾರ ಮಾಡುವ ಸವಾರರು ತಮ್ಮ ಜೀವದ ರಕ್ಷಣೆಗೆ ಆದ್ಯತೆ…

Read More

ರಕ್ಷಾ ಬಂಧನ ಹಬ್ಬವನ್ನು ಪೊಲೀಸ್ ಸಿಬ್ಬಂದಿ ಹಾಗೂ ಮಾಜಿ ಸೈನಿಕರೊಂದಿಗೆ ಆಚರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು. ರಕ್ಷಾ ಬಂಧನ ದಿನದಂದು ರಾಕಿ ಕಟ್ಟುವ ಮೂಲಕದೇಶದ ಸೈನಿಕರು ಹಾಗೂ ಪೊಲೀಸರು ಕೂಡ ನಮ್ಮ ಕುಟುಂಬದವರೆ ಎನ್ನುವ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸುತಿದ್ದೇವೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ,ಜಿಲ್ಲಾ ಸಹ ಸಂಚಾಲಕರು ಶ್ರೀಮತಿ ಶಾಲಿನಿ ಇಳಿಗೇರ ಅವರು ಹೇಳಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು ಆದ….

Read More

ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವಸಂತ ವೈದ್ಯ ಕರೆ ನೀಡಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ 2025-26 ನೇ ಸಾಲಿನ ಹುಲಿಕಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕ್ರೀಡಾಕೂಟವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳು ಧೈರ್ಯ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಯುವಕರಲ್ಲಿ ಧೈರ್ಯ ಮತ್ತು ಸಾಹಸದಂತಹ ಗುಣಗಳನ್ನು ವೃದ್ಧಿಸುತ್ತವೆ. ಅದಕ್ಕಾಗಿ ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

Read More

ಯಡ್ರಾಂವಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕ ಕಾನೂನು ಸೇವೆಗಳ ಸಮಿತಿ ಸವದತ್ತಿ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ಮತ್ತು ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನ ಬದ್ದವಾಗಿ ಎಲ್ಲ ಭಾರತೀಯ ನಾಗರಿಕರಿಗೆ ಇರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಬಗ್ಗೆ ಅರಿವು ಮತ್ತು ಖಾಯಂ ಜನತಾ ನ್ಯಾಯಾಲಯಗಳ ಬಗ್ಗೆ ತಿಳಿಸುವ ಜಾಗೃತಿ ಮತ್ತು ಉಚಿತ ಕಾನೂನು…

Read More