Prashanth Angadi

ಲೋಕಾಪೂರ-ಧಾರವಾಡ ಹೊಸ ರೈಲ್ವೆ ಲೈನ್ ಗೆ ಪ್ರಾಮಾಣಿಕ ಪ್ರಯತ್ನ ನಡದಿದೆ:ಜಗದೀಶ್ ಶೆಟ್ಟರ್

ಬೆಳಗಾವಿ: ಲೋಕಾಪುರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗಕ್ಕಾಗಿ 2019 ರಲ್ಲಿ ನಡೆದ ಸಮೀಕ್ಷೆಯ ವರದಿಯಲ್ಲಿ ಕೆಲವು ಅಂಕಿಸಂಖ್ಯೆಗಳ ವ್ಯತ್ಯಾಸದಿಂದ ಈ ಯೋಜನೆಗೆ ತಡೆ ನೀಡಲಾಗಿತ್ತು. ಈಗ ಮತ್ತೇ ಈ ಯೋಜನೆ ಅನುಷ್ಠಾನಕ್ಕೆ ಬರುವುದು ನಿಶ್ಚಿತ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದರು. ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಮುಖಂಡರುಗಳ ನಿಯೋಗವು ರವಿವಾರ ಸಂಸದ ಜಗದೀಶ್ ಶೆಟ್ಟರಿಗೆ ಅವರ ಕಾಡಾ ಕಚೇರಿಯಲ್ಲಿ ಭೇಟಿ ಮಾಡಿ ಲೋಕಾಪುರದಿಂದ ಧಾರವಾಡ ನೂತನ ರೈಲು ಮಾರ್ಗದ ಯೋಜನೆ…

Read More

ರಾಮದುರ್ಗ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯಲ್ಲಿ ಶ್ರೀ ದೇವರ ದಾಸಿಮಯ್ಯ ನವರ ವೃತ್ತದ ಹತ್ತಿರ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಬೆಳಗಾವಿಯ ಬಿ.ಡಿ.ಸಿ.ಸಿ ಬ್ಯಾಂಕಿನ ನೂತನ ನಿರ್ದೇಶಕರಾದ ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಪುರಸಭೆಯ ಮಾಜಿ ಅಧ್ಯಕ್ಷರಾದ ಅಶೋಕ ಸುಳಿಭಾವಿ, ಪುರಸಭೆಯ ಸದಸ್ಯರಾದ ಪ್ರಹ್ಲಾದ ಬಡಿಗೇರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ ಚಂದರಗಿ, ಉಪಾಧ್ಯಕ್ಷರುಗಳಾದ ಅಂಬರೀಶ್ ಬಟಕುರ್ಕಿ, ವೆಂಕಣ್ಣ ನಂದಗಾವಿ, ಸಂಗಮೇಶ ನರನೂರ…

Read More

ಕಿತ್ತೂರು ರಾಣಿ‌ ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಶನಿವಾರ ನಡೆದ ಮೂರು‌ ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು ರಾಣಿ…

Read More

ಸವದತ್ತಿ ಯಲ್ಲಮ್ಮ ಗುಡ್ಡಕ್ಕೆಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿಭೇಟಿ ನೀಡಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು.

ಬೆಳಗಾವಿ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಘಟಕಕ್ಕೆ ಭೇಟಿ ಡಿ. ಆರ್. ಪಿ ಸರ್ವೇ ಪರಿಶೀಲಿಸಿದರು.‌ತದನಂತರ ಹಾಗೂ ಮಾಜಿ ದೇವದಾಸಿ ಮಹಿಳೆಯರ ಜತೆ ಸಮಾಲೋಚನೆ ನಡೆಸಿ, ಸ್ಚಾವಲಂಬಿ ಬದುಕು ಕಟ್ಟಿಕೊಳ್ಳುವ ಕುರಿತು ಸಲಹೆಗಳನ್ನು ನೀಡಿದರು. ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ…

Read More

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್ ಸಲಹೆ

ನ್ಯಾಯಮಿತ್ರ ಸಹಕಾರಿ ಸಂಘದ ಬೆಳಿ ಮಹೋತ್ಸವವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಮಂಜೂರು ಮಾಡಿ ಬೆಂಗಳೂರು ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು. ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ…

Read More

ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ ಎ ಖಾಜಿ

ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಮತ್ತು ಫಲಿತಾಂಶ ಪಡೆಯುವುದು ಪ್ರತಿ ಶಾಲೆಯ ಮತ್ತು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿ ವಿಶೇಷ ಕ್ರಿಯಾ ಯೋಜನೆ ತಯಾರಿಸಿ ಬೋಧನೆ ಕೈಗೊಂಡಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೂರಕ್ಕೆ ನೂರು ಸಾಧಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ ಎ ಖಾಜಿ ರವರು ಅಭಿಪ್ರಾಯಪಟ್ಟರು. ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಆಕಸ್ಮಿಕ ಸಂದರ್ಶನ ನೀಡಿದ ಸಂದರ್ಭದಲ್ಲಿ ಶಾಲೆಯ ವತಿಯಿಂದ ಮಾಡಲಾದ ಸನ್ಮಾನ ಸ್ವೀಕರಿಸಿ ಮೇಲಿನಂತೆ…

Read More

ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಸಂಘಕ್ಕೆ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ಯಾದವಾಡ ನೇಮಕ

ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ಪದಾಧಿಕಾರಿಗಳ ಸಭೆಯು ಗುರುವಾರ ಬಾಗಲಕೋಟ ನಗರದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಜರುಗಿತು. ಸಭೆಯಲ್ಲಿ ಸಂಘದ ಸರ್ವ ಪದಾಧಿಕಾರಿಗಳು ಸೇರಿ ಒಮ್ಮತದಿಂದ ಪತ್ರಕರ್ತ ಎಂ ಕೆ ಯಾದವಾಡ ಅವರನ್ನು ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಂ ಕೆ ಯಾದವಾಡ ಅವರಿಗೆ ಸನ್ಮಾನಿಸುವ ಮೂಲಕ ಸಂಘದಲ್ಲಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ರಾಜ್ಯಾಧ್ಯಕ್ಷರಾದ…

Read More

ಹಾಸನಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ 25.59 ಕೋಟಿ ಆದಾಯ

ಹಾಸನ ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23 ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ. 1000 ರೂ, 300 ರೂ ಟಿಕೆಟ್ ಹಾಗೂ ಲಾಡುಪ್ರಸಾದ ಮಾರಾಟದಿಂದ ಒಟ್ಟು 21,91,75,052 ರೂ ಆದಾಯ ಬಂದಿರುತ್ತದೆ. ಹುಂಡಿ ಎಣಿಕೆಯಲ್ಲಿ 3,68,12,275 ರೂಪಾಯಿ ಬಂದಿರುತ್ತದೆ. ಕಾಣಿಕೆ ರೂಪದಲ್ಲಿ 75 ಗ್ರಾಂ. 300 ಮಿಲಿ ಚಿನ್ನ, ಬೆಳ್ಳಿ 1 ಕೆ.ಜಿ 58…

Read More

ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಗ್ರಾಮದಲ್ಲಿ ಹೆಚ್ಚಿದ ಮಟ್ಕಾ ದಂಧೆ…!

ಮಟ್ಕಾದಿಂದ ಅನೇಕ ಕುಟುಂಬಗಳು ಬೀದಿ ಪಾಲಾದರೆ, ಕೆಲ ಯುವಕರು ಮಟ್ಕಾದಿಂದ ಹಣ ಕಳೆದುಕೊಂಡು ಊರು ಬಿಟ್ಟು ಹೋಗಿರುವ ಉದಾಹರಣೆಗಳು ಇವೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಭಾಗದಲ್ಲಿನಡೆಯುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ ? ಮಟ್ಕಾ ದಂಧೆ ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆ ಮೌನ ವಹಿಸಿದೆ. ಮಟ್ಕಾ ದಂಧೆಯಿಂದ ಅನೇಕ ಬಡ ಕುಟುಂಬಗಳು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಕೆಲವರು ತಾವೇ ಮುಂದು ನಿಂತುಕೊಂಡು ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ.

Read More

ಬಿಮ್ಸ್ ಆಸ್ಪತ್ರೆಗೆ ಪ್ರಾದೇಶಿಕ ಆಯುಕ್ತೆ‌ ಜಾನಕಿ ಭೇಟಿ: ಅಧಿಕಾರಿಗಳ ಸಭೆ.

ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು ಮತ್ತು ಅಸಹಾಯಕರು. ಅವರಿಗೆ ಉತ್ತಮವಾದ ಚಿಕಿತ್ಸೆ ಜೊತೆಗೆ ಆರೈಕೆಯು ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಅವರಿಗೆ ನೀಡುವ ಚಿಕಿತ್ಸೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲ ವಿಭಾಗದಲ್ಲಿಯೂ ಉತ್ತಮವಾದ ಚಿಕಿತ್ಸೆ ನೀಡುವುದರ ಜತೆಗೆ ರೋಗಿಗಳೊಂದಿಗೆ ಸಂಯಮದಿಂದ ವರ್ತಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ. ಸೂಚನೆ ನೀಡಿದರು. ಬೆಳಗಾವಿಯ ಸೂಪರ್‌ ಸ್ಪೆಷಾಲಿಟಿ ಆಸ್ಪ್ರತೆಯಲ್ಲಿ ಶುಕ್ರವಾರ ಆಡಳಿತ ಮಂಡಳಿಯ ಪ್ರಗತಿ ಪರಿಶಿಲನಾ ಸಭೆಯಲ್ಲಿ ಅವರು ಮಾತನಾಡಿದರು….

Read More