ಲೋಕಾಪೂರ-ಧಾರವಾಡ ಹೊಸ ರೈಲ್ವೆ ಲೈನ್ ಗೆ ಪ್ರಾಮಾಣಿಕ ಪ್ರಯತ್ನ ನಡದಿದೆ:ಜಗದೀಶ್ ಶೆಟ್ಟರ್
ಬೆಳಗಾವಿ: ಲೋಕಾಪುರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗಕ್ಕಾಗಿ 2019 ರಲ್ಲಿ ನಡೆದ ಸಮೀಕ್ಷೆಯ ವರದಿಯಲ್ಲಿ ಕೆಲವು ಅಂಕಿಸಂಖ್ಯೆಗಳ ವ್ಯತ್ಯಾಸದಿಂದ ಈ ಯೋಜನೆಗೆ ತಡೆ ನೀಡಲಾಗಿತ್ತು. ಈಗ ಮತ್ತೇ ಈ ಯೋಜನೆ ಅನುಷ್ಠಾನಕ್ಕೆ ಬರುವುದು ನಿಶ್ಚಿತ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದರು. ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಮುಖಂಡರುಗಳ ನಿಯೋಗವು ರವಿವಾರ ಸಂಸದ ಜಗದೀಶ್ ಶೆಟ್ಟರಿಗೆ ಅವರ ಕಾಡಾ ಕಚೇರಿಯಲ್ಲಿ ಭೇಟಿ ಮಾಡಿ ಲೋಕಾಪುರದಿಂದ ಧಾರವಾಡ ನೂತನ ರೈಲು ಮಾರ್ಗದ ಯೋಜನೆ…
