ಬಾಲ್ಯವಿವಾಹ ಮುಕ್ತ ಧಾರವಾಡ ಜಿಲ್ಲೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸೋಣ; ತಪ್ಪಿತಸ್ಥರಿಗೆ ವಿರುದ್ಧ ಕ್ರಮ ಜರುಗಿಸೋಣ: ಜಿಪಂ ಸಿಇಓ ಭುವನೇಶ ಪಾಟೀಲ
ಧಾರವಾಡ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 28 ಬಾಲ್ಯ ವಿವಾಹವನ್ನು ತಡೆಗಟ್ಟಿದ್ದಾರೆ. 18 ಎಫ್ಐಆರ್ ದಾಖಲಾಗಿವೆ. ಬಾಲ್ಯವಿವಾಹ ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ಸರಕಾರ ಮತ್ತು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಂಡಿವೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಬಾಲ್ಯವಿವಾಹ ಪದ್ಧತಿ ಕುರಿತು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು….
