ಮಾವು ಮಾರಾಟ ಮತ್ತು ಪ್ರದರ್ಶನ ಮೇಳಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಚಾಲನೆ;
ಧಾರವಾಡ ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ ಇಂದಿನಿಂದ ಐದು ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಧಾರವಾಡ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಾವು ಮೇಳವನ್ನು ಉದ್ಘಾಟಿಸಿ, ಮಾತನಾಡಿದರು. ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ…
